Homeಮುಖಪುಟಲೋಕಸಭಾ ಚುನಾವಣೆ 2024: "ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು.."; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ...

ಲೋಕಸಭಾ ಚುನಾವಣೆ 2024: “ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು..”; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್‌ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫಕ್ಕೀರೇಶ್ವರ ಮಠದ ಪೀಠಾಧ್ಯಕ್ಷ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, “ಧಾರವಾಡ ಕ್ಷೇತ್ರದ ಸಂಸದ (ಬಿಜೆಪಿಯ ಪ್ರಲ್ಹಾದ ಜೋಶಿ) ಬಗ್ಗೆ ಕರ್ನಾಟಕದ ಮಠಾಧೀಶರು ಚರ್ಚೆ ನಡೆಸಿದ್ದಾರೆ, ಸಂಸದರನ್ನು ಬದಲಾಯಿಸಲು ಎಲ್ಲ ಮಠಾಧೀಶರು ನಿರ್ಧರಿಸಿದ್ದಾರೆ. ಇದಕ್ಕಾಗಿ ನಾಲ್ಕು ದಿನಗಳ ಕಾಲಾವಕಾಶ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಕಾಯುತ್ತೇವೆ, ಈ 4 ದಿನಗಳಲ್ಲಿ ಹೈಕಮಾಂಡ್ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ” ಎಂದು ಹೇಳಿದ್ದಾರೆ.

“ಆ ನಂತರ, ಏಪ್ರಿಲ್ 2 ರಂದು ನಾವು ಒಟ್ಟಾಗಿ ಬಂದು ನಮ್ಮ ನಿರ್ಧಾರದ ಬಗ್ಗೆ ಹೇಳುತ್ತೇವೆ; ನಾವು ವ್ಯಕ್ತಿಯ ಜಾತಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ಆ ವ್ಯಕ್ತಿಯ ವ್ಯಕ್ತಿತ್ವ ನಿಜವಾಗಿಯೂ ಕೆಟ್ಟದು. ಲಿಂಗಾಯತ, ದಲಿತ, ಹಿಂದುಳಿದ ಪ್ರತಿಯೊಂದು ಸಮುದಾಯವೂ ಅವರ ಬಗ್ಗೆ ಅತೃಪ್ತಿ ಹೊಂದಿದೆ. ಹೀಗಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾವು ಏಪ್ರಿಲ್ 2 ರವರೆಗೆ ಕಾಯಬೇಕಾಗಿದೆ. ನಾವು ಪಕ್ಷದ ಬಗ್ಗೆ ಮಾತನಾಡುತ್ತಿಲ್ಲ, ನಾವು ಪ್ರಲ್ಹಾದ್ ಜೋಶಿ ಮತ್ತು ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಉತ್ತರದಂತೆ, ದಕ್ಷಿಣದ ಸ್ವಾಮೀಜಿಗಳು ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು” ಎಂದು ಹೇಳಿದ ಅವರು, ಮಠಾಧಿಶರೊಬ್ಬರಿಗೆ ಟಿಕೆಟ್ ನೀಡಬೇಕು ಎಂಬ ಪರೋಕ್ಷ ಬೇಡಿಕೆ ಇಟ್ಟಿದ್ದಾರೆ. ಧಾರವಾಡ ಭಾಗದಲ್ಲಿ ಲಿಂಗಾಯತರು ಹೆಚ್ಚಿನ ಮತದಾರರಿದ್ದರೆ, ಜೋಶಿ ಬ್ರಾಹ್ಮಣರಾಗಿದ್ದಾರೆ.

ಶ್ರೀಗಳ ಬೇಡಿಕೆಗೆ ಪ್ರತಿಕ್ರಿಯಿಸಿರುವ ಜೋಶಿ, “ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ನನಗೆ ಅಪಾರ ಗೌರವವಿದೆ, ಶ್ರೀಗಳು ಮತ್ತು ಮಠದೊಂದಿಗೆ 30 ವರ್ಷಗಳ ಒಡನಾಟವಿದೆ. ಅವರ ಟೀಕೆಗಳನ್ನು ನಾನು ಆಶೀರ್ವಾದ ಎಂದು ಪರಿಗಣಿಸುತ್ತೇನೆ. ತಪ್ಪು ತಿಳುವಳಿಕೆ ಇದ್ದರೆ ಮುಂದಿನ ದಿನಗಳಲ್ಲಿ ಅದನ್ನು ಸ್ಪಷ್ಟಪಡಿಸಲು ಪ್ರಯತ್ನಿಸುತ್ತೇನೆ” ಎಂದು ಸಚಿವರು ಹೇಳಿದರು.

ಜೋಶಿ ಅವರನ್ನು ಅಭ್ಯರ್ಥಿಯನ್ನಾಗಿ ಬದಲಾಯಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ. “ಅವರು ಹಿರಿಯ ನಾಯಕರಾಗಿದ್ದಾರೆ ಮತ್ತು ಭಾರಿ ಅಂತರದಿಂದ ಗೆಲ್ಲುತ್ತಾರೆ” ಎಂದು ಲಿಂಗಾಯತ ಬಿಜೆಪಿ ನಾಯಕ ಹೇಳಿದ್ದಾರೆ. ಅವರು ವೈಯಕ್ತಿಕವಾಗಿ ಮಠಾಧೀಶರೊಂದಿಗೆ ಮಾತನಾಡುತ್ತಾರೆ; ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುತ್ತಾರೆ” ಎಂದರು.

ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕ್ರಮವಾಗಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...