Homeಮುಖಪುಟಲೋಕಸಭಾ ಚುನಾವಣೆ 2024: "ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು.."; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ...

ಲೋಕಸಭಾ ಚುನಾವಣೆ 2024: “ಅವರ ವ್ಯಕ್ತಿತ್ವ ನಿಜಕ್ಕೂ ಕೆಟ್ಟದು..”; ಪ್ರಲ್ಹಾದ್ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಆಗ್ರಹ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಕೈಬಿಟ್ಟು, ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕದ ಪ್ರಮುಖ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್‌ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫಕ್ಕೀರೇಶ್ವರ ಮಠದ ಪೀಠಾಧ್ಯಕ್ಷ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, “ಧಾರವಾಡ ಕ್ಷೇತ್ರದ ಸಂಸದ (ಬಿಜೆಪಿಯ ಪ್ರಲ್ಹಾದ ಜೋಶಿ) ಬಗ್ಗೆ ಕರ್ನಾಟಕದ ಮಠಾಧೀಶರು ಚರ್ಚೆ ನಡೆಸಿದ್ದಾರೆ, ಸಂಸದರನ್ನು ಬದಲಾಯಿಸಲು ಎಲ್ಲ ಮಠಾಧೀಶರು ನಿರ್ಧರಿಸಿದ್ದಾರೆ. ಇದಕ್ಕಾಗಿ ನಾಲ್ಕು ದಿನಗಳ ಕಾಲಾವಕಾಶ ನೀಡಿದ್ದಾರೆ. ಮಾರ್ಚ್ 31ರ ವರೆಗೆ ಕಾಯುತ್ತೇವೆ, ಈ 4 ದಿನಗಳಲ್ಲಿ ಹೈಕಮಾಂಡ್ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ” ಎಂದು ಹೇಳಿದ್ದಾರೆ.

“ಆ ನಂತರ, ಏಪ್ರಿಲ್ 2 ರಂದು ನಾವು ಒಟ್ಟಾಗಿ ಬಂದು ನಮ್ಮ ನಿರ್ಧಾರದ ಬಗ್ಗೆ ಹೇಳುತ್ತೇವೆ; ನಾವು ವ್ಯಕ್ತಿಯ ಜಾತಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ಆ ವ್ಯಕ್ತಿಯ ವ್ಯಕ್ತಿತ್ವ ನಿಜವಾಗಿಯೂ ಕೆಟ್ಟದು. ಲಿಂಗಾಯತ, ದಲಿತ, ಹಿಂದುಳಿದ ಪ್ರತಿಯೊಂದು ಸಮುದಾಯವೂ ಅವರ ಬಗ್ಗೆ ಅತೃಪ್ತಿ ಹೊಂದಿದೆ. ಹೀಗಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನಾವು ಏಪ್ರಿಲ್ 2 ರವರೆಗೆ ಕಾಯಬೇಕಾಗಿದೆ. ನಾವು ಪಕ್ಷದ ಬಗ್ಗೆ ಮಾತನಾಡುತ್ತಿಲ್ಲ, ನಾವು ಪ್ರಲ್ಹಾದ್ ಜೋಶಿ ಮತ್ತು ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಉತ್ತರದಂತೆ, ದಕ್ಷಿಣದ ಸ್ವಾಮೀಜಿಗಳು ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು” ಎಂದು ಹೇಳಿದ ಅವರು, ಮಠಾಧಿಶರೊಬ್ಬರಿಗೆ ಟಿಕೆಟ್ ನೀಡಬೇಕು ಎಂಬ ಪರೋಕ್ಷ ಬೇಡಿಕೆ ಇಟ್ಟಿದ್ದಾರೆ. ಧಾರವಾಡ ಭಾಗದಲ್ಲಿ ಲಿಂಗಾಯತರು ಹೆಚ್ಚಿನ ಮತದಾರರಿದ್ದರೆ, ಜೋಶಿ ಬ್ರಾಹ್ಮಣರಾಗಿದ್ದಾರೆ.

ಶ್ರೀಗಳ ಬೇಡಿಕೆಗೆ ಪ್ರತಿಕ್ರಿಯಿಸಿರುವ ಜೋಶಿ, “ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ನನಗೆ ಅಪಾರ ಗೌರವವಿದೆ, ಶ್ರೀಗಳು ಮತ್ತು ಮಠದೊಂದಿಗೆ 30 ವರ್ಷಗಳ ಒಡನಾಟವಿದೆ. ಅವರ ಟೀಕೆಗಳನ್ನು ನಾನು ಆಶೀರ್ವಾದ ಎಂದು ಪರಿಗಣಿಸುತ್ತೇನೆ. ತಪ್ಪು ತಿಳುವಳಿಕೆ ಇದ್ದರೆ ಮುಂದಿನ ದಿನಗಳಲ್ಲಿ ಅದನ್ನು ಸ್ಪಷ್ಟಪಡಿಸಲು ಪ್ರಯತ್ನಿಸುತ್ತೇನೆ” ಎಂದು ಸಚಿವರು ಹೇಳಿದರು.

ಜೋಶಿ ಅವರನ್ನು ಅಭ್ಯರ್ಥಿಯನ್ನಾಗಿ ಬದಲಾಯಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಳ್ಳಿಹಾಕಿದ್ದಾರೆ. “ಅವರು ಹಿರಿಯ ನಾಯಕರಾಗಿದ್ದಾರೆ ಮತ್ತು ಭಾರಿ ಅಂತರದಿಂದ ಗೆಲ್ಲುತ್ತಾರೆ” ಎಂದು ಲಿಂಗಾಯತ ಬಿಜೆಪಿ ನಾಯಕ ಹೇಳಿದ್ದಾರೆ. ಅವರು ವೈಯಕ್ತಿಕವಾಗಿ ಮಠಾಧೀಶರೊಂದಿಗೆ ಮಾತನಾಡುತ್ತಾರೆ; ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುತ್ತಾರೆ” ಎಂದರು.

ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕ್ರಮವಾಗಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ; ಅರ್ಚಕ ಕೂಡ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದು ಎಂದ ಸರ್ಕಾರಿ ಸಹಾಯವಾಣಿ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...