Homeಮುಖಪುಟಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ವಿಪಕ್ಷಗಳ ‘ಇಂಡಿಯಾ’ ಬಣದೊಂದಿಗೆ ಸೀಟು ಹಂಚಿಕೆ ಗೊಂದಲಗಳು ಅಲ್ಪಮಟ್ಟಿಗೆ ಬಗೆಹರಿಯುತ್ತಿರುವಾಗ ಕಾಂಗ್ರೆಸ್‌ ಪಕ್ಷವು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಗೆ ಕೈ ನಾಯಕರು ಸಜ್ಜಾಗಿದ್ದು, ಕರ್ನಾಟಕದ ಏಳು ಸ್ಥಾನಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗುರುವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದೆ. ಘೋಷಿಸಲಾದ 39 ಅಭ್ಯರ್ಥಿಗಳಲ್ಲಿ 15 ಸಾಮಾನ್ಯ ಜಾತಿ ಮತ್ತು 24 ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತ ಅಭ್ಯರ್ಥಿಗಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ಸಂಖ್ಯೆಯ ಸಂಸತ್ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್ ಗಾಂಧಿ ಎರಡನೇ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಎಂಬ ಸಸ್ಪೆನ್ಸ್ ಹಾಗೆಯೇ ಉಳಿದಿದೆ. ಉಳಿದ ರಾಜ್ಯಗಳನ್ನು ಮುಂದಿನ ಸಭೆಗಳಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಉಳಿದಿರುವ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಪಕ್ಷವು ಮಾರ್ಚ್ 11 ರಂದು ತನ್ನ ಎರಡನೇ ಚುನಾವಣಾ ಸಮಿತಿ ಸಭೆಯನ್ನು ನಡೆಸಲಿದೆ.

ಛತ್ತೀಸ್‌ಗಢ

ಜಂಗ್ರಿರ್-ಚಂಪಾ (ಎಸ್‌ಸಿ): ಶಿವಕುಮಾರ್ ದಹರಿಯಾ

ಕೊರ್ಬಾ: ಜ್ಯೋತ್ಸನಾ ಮಹಂತ್

ರಾಜನಂದಗಾಂವ್: ಭೂಪೇಶ್ ಬಘೇಲ್

ದುರ್ಗ್: ರಾಜೇಂದ್ರ ಸಾಹು

ರಾಯಪುರ: ವಿಕಾಸ್ ಉಪಾಧ್ಯಾಯ

ಮಹಾಸಮುಂಡ್: ತಾಮಧ್ವಜ್ ಸಾಹು

ಕರ್ನಾಟಕ

ಬಿಜಾಪುರ (ಎಸ್‌ಸಿ): ಎಚ್‌ಆರ್‌ ಅಲಗೂರು

ಹಾವೇರಿ: ಆನಂದಸ್ವಾಮಿ ಗಡ್ಡದೇವರ ಮಠ

ಶಿವಮೊಗ್ಗ: ಗೀತಾ ಶಿವರಾಜಕುಮಾರ್

ಹಾಸನ: ಶ್ರೇಯಸ್ ಪಟೇಲ್

ತುಮಕೂರು: ಎಸ್‌.ಪಿ. ಮುದ್ದಹನುಮೇಗೌಡ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್

ಕೇರಳ

ಕಾಸರಗೋಡು: ರಾಜಮೋಹನ್ ಉನ್ನಿಥಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಾಫಿ ಪರಂಬಿಲ್

ವಯನಾಡ್: ರಾಹುಲ್ ಗಾಂಧಿ

ಕೋಝಿಕ್ಕೋಡ್: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂದನ್

ಆಲತ್ತೂರು (ಎಸ್‌ಸಿ): ರಮ್ಯಾ ಹರಿದಾಸ್

ತ್ರಿಶೂರ್: ಕೆ ಮುರಳೀಧರನ್

ಚಾಲಕುಡಿ: ಬೆನ್ನಿ ಬೆಹನಾನ್

ಎರ್ನಾಕುಲಂ: ಹೈಬಿ ಈಡನ್

ಇಡುಕ್ಕಿ: ಡೀನ್ ಕುರಿಯಕೋಸ್

ಆಲಪ್ಪುಳ: ಕೆ.ಸಿ.ವೇಣುಗೋಪಾಲ್

ಮಾವೇಲಿಕ್ಕರ (ಎಸ್‌ಸಿ): ಕೆ ಸುರೇಶ್

ಪತ್ತನಂತಿಟ್ಟ: ಆಂಟೊ ಆಂಟೋನಿ

ಅಟ್ಟಿಂಗಲ್: ಅಡೂರ್ ಪ್ರಕಾಶ್

ತಿರುವನಂತಪುರಂ: ಶಶಿ ತರೂರ್

ಲಕ್ಷದ್ವೀಪ

ಲಕ್ಷದ್ವೀಪ (ಎಸ್‌ಟಿ): ಮೊಹಮ್ಮದ್ ಹಮ್ದುಲ್ಲಾ ಸಯೀದ್

ಮೇಘಾಲಯ

ಶಿಲ್ಲಾಂಗ್ (ಎಸ್‌ಟಿ): ವಿನ್ಸೆಂಟ್ ಎಚ್ ಪಾಲಾ

ತುರಾ (ಎಸ್‌ಟಿ): ಸಲೆಂಗ್ ಎ ಸಂಗ್ಮಾ

ನಾಗಾಲ್ಯಾಂಡ್

ನಾಗಾಲ್ಯಾಂಡ್: ಎಸ್ ಸುಪೊಂಗ್ಮೆರೆನ್ ಜಮೀರ್

ಸಿಕ್ಕಿಂ

ಸಿಕ್ಕಿಂ: ಗೋಪಾಲ್ ಚೆಟ್ರಿ

ತೆಲಂಗಾಣ

ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕಾರ್

ನಲ್ಗೊಂಡ: ರಘುವೀರ್ ಕುಂದೂರು

ಮಹೆಬೂಬನಗರ: ಚಲ್ಲಾ ವಂಶಿ ಚಂದ್ ರೆಡ್ಡಿ

ಮಹಬೂಬಾಬಾದ್ (ಎಸ್‌ಟಿ): ಬಲರಾಮ್ ನಾಯ್ಕ್ ಪೋರಿಕ

ತ್ರಿಪುರಾ

ತ್ರಿಪುರ ಪಶ್ಚಿಮ: ಆಶಿಶ್ ಕುಮಾರ್ ಸಹಾ

ಇದನ್ನೂ ಓದಿ; ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...