Homeಮುಖಪುಟಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ವಿಪಕ್ಷಗಳ ‘ಇಂಡಿಯಾ’ ಬಣದೊಂದಿಗೆ ಸೀಟು ಹಂಚಿಕೆ ಗೊಂದಲಗಳು ಅಲ್ಪಮಟ್ಟಿಗೆ ಬಗೆಹರಿಯುತ್ತಿರುವಾಗ ಕಾಂಗ್ರೆಸ್‌ ಪಕ್ಷವು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಗೆ ಕೈ ನಾಯಕರು ಸಜ್ಜಾಗಿದ್ದು, ಕರ್ನಾಟಕದ ಏಳು ಸ್ಥಾನಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗುರುವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದೆ. ಘೋಷಿಸಲಾದ 39 ಅಭ್ಯರ್ಥಿಗಳಲ್ಲಿ 15 ಸಾಮಾನ್ಯ ಜಾತಿ ಮತ್ತು 24 ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತ ಅಭ್ಯರ್ಥಿಗಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ಸಂಖ್ಯೆಯ ಸಂಸತ್ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್ ಗಾಂಧಿ ಎರಡನೇ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಎಂಬ ಸಸ್ಪೆನ್ಸ್ ಹಾಗೆಯೇ ಉಳಿದಿದೆ. ಉಳಿದ ರಾಜ್ಯಗಳನ್ನು ಮುಂದಿನ ಸಭೆಗಳಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಉಳಿದಿರುವ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಪಕ್ಷವು ಮಾರ್ಚ್ 11 ರಂದು ತನ್ನ ಎರಡನೇ ಚುನಾವಣಾ ಸಮಿತಿ ಸಭೆಯನ್ನು ನಡೆಸಲಿದೆ.

ಛತ್ತೀಸ್‌ಗಢ

ಜಂಗ್ರಿರ್-ಚಂಪಾ (ಎಸ್‌ಸಿ): ಶಿವಕುಮಾರ್ ದಹರಿಯಾ

ಕೊರ್ಬಾ: ಜ್ಯೋತ್ಸನಾ ಮಹಂತ್

ರಾಜನಂದಗಾಂವ್: ಭೂಪೇಶ್ ಬಘೇಲ್

ದುರ್ಗ್: ರಾಜೇಂದ್ರ ಸಾಹು

ರಾಯಪುರ: ವಿಕಾಸ್ ಉಪಾಧ್ಯಾಯ

ಮಹಾಸಮುಂಡ್: ತಾಮಧ್ವಜ್ ಸಾಹು

ಕರ್ನಾಟಕ

ಬಿಜಾಪುರ (ಎಸ್‌ಸಿ): ಎಚ್‌ಆರ್‌ ಅಲಗೂರು

ಹಾವೇರಿ: ಆನಂದಸ್ವಾಮಿ ಗಡ್ಡದೇವರ ಮಠ

ಶಿವಮೊಗ್ಗ: ಗೀತಾ ಶಿವರಾಜಕುಮಾರ್

ಹಾಸನ: ಶ್ರೇಯಸ್ ಪಟೇಲ್

ತುಮಕೂರು: ಎಸ್‌.ಪಿ. ಮುದ್ದಹನುಮೇಗೌಡ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್

ಕೇರಳ

ಕಾಸರಗೋಡು: ರಾಜಮೋಹನ್ ಉನ್ನಿಥಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಾಫಿ ಪರಂಬಿಲ್

ವಯನಾಡ್: ರಾಹುಲ್ ಗಾಂಧಿ

ಕೋಝಿಕ್ಕೋಡ್: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂದನ್

ಆಲತ್ತೂರು (ಎಸ್‌ಸಿ): ರಮ್ಯಾ ಹರಿದಾಸ್

ತ್ರಿಶೂರ್: ಕೆ ಮುರಳೀಧರನ್

ಚಾಲಕುಡಿ: ಬೆನ್ನಿ ಬೆಹನಾನ್

ಎರ್ನಾಕುಲಂ: ಹೈಬಿ ಈಡನ್

ಇಡುಕ್ಕಿ: ಡೀನ್ ಕುರಿಯಕೋಸ್

ಆಲಪ್ಪುಳ: ಕೆ.ಸಿ.ವೇಣುಗೋಪಾಲ್

ಮಾವೇಲಿಕ್ಕರ (ಎಸ್‌ಸಿ): ಕೆ ಸುರೇಶ್

ಪತ್ತನಂತಿಟ್ಟ: ಆಂಟೊ ಆಂಟೋನಿ

ಅಟ್ಟಿಂಗಲ್: ಅಡೂರ್ ಪ್ರಕಾಶ್

ತಿರುವನಂತಪುರಂ: ಶಶಿ ತರೂರ್

ಲಕ್ಷದ್ವೀಪ

ಲಕ್ಷದ್ವೀಪ (ಎಸ್‌ಟಿ): ಮೊಹಮ್ಮದ್ ಹಮ್ದುಲ್ಲಾ ಸಯೀದ್

ಮೇಘಾಲಯ

ಶಿಲ್ಲಾಂಗ್ (ಎಸ್‌ಟಿ): ವಿನ್ಸೆಂಟ್ ಎಚ್ ಪಾಲಾ

ತುರಾ (ಎಸ್‌ಟಿ): ಸಲೆಂಗ್ ಎ ಸಂಗ್ಮಾ

ನಾಗಾಲ್ಯಾಂಡ್

ನಾಗಾಲ್ಯಾಂಡ್: ಎಸ್ ಸುಪೊಂಗ್ಮೆರೆನ್ ಜಮೀರ್

ಸಿಕ್ಕಿಂ

ಸಿಕ್ಕಿಂ: ಗೋಪಾಲ್ ಚೆಟ್ರಿ

ತೆಲಂಗಾಣ

ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕಾರ್

ನಲ್ಗೊಂಡ: ರಘುವೀರ್ ಕುಂದೂರು

ಮಹೆಬೂಬನಗರ: ಚಲ್ಲಾ ವಂಶಿ ಚಂದ್ ರೆಡ್ಡಿ

ಮಹಬೂಬಾಬಾದ್ (ಎಸ್‌ಟಿ): ಬಲರಾಮ್ ನಾಯ್ಕ್ ಪೋರಿಕ

ತ್ರಿಪುರಾ

ತ್ರಿಪುರ ಪಶ್ಚಿಮ: ಆಶಿಶ್ ಕುಮಾರ್ ಸಹಾ

ಇದನ್ನೂ ಓದಿ; ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...