Homeಮುಖಪುಟಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ವಿಪಕ್ಷಗಳ ‘ಇಂಡಿಯಾ’ ಬಣದೊಂದಿಗೆ ಸೀಟು ಹಂಚಿಕೆ ಗೊಂದಲಗಳು ಅಲ್ಪಮಟ್ಟಿಗೆ ಬಗೆಹರಿಯುತ್ತಿರುವಾಗ ಕಾಂಗ್ರೆಸ್‌ ಪಕ್ಷವು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಗೆ ಕೈ ನಾಯಕರು ಸಜ್ಜಾಗಿದ್ದು, ಕರ್ನಾಟಕದ ಏಳು ಸ್ಥಾನಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗುರುವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದೆ. ಘೋಷಿಸಲಾದ 39 ಅಭ್ಯರ್ಥಿಗಳಲ್ಲಿ 15 ಸಾಮಾನ್ಯ ಜಾತಿ ಮತ್ತು 24 ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತ ಅಭ್ಯರ್ಥಿಗಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ಸಂಖ್ಯೆಯ ಸಂಸತ್ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್ ಗಾಂಧಿ ಎರಡನೇ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಎಂಬ ಸಸ್ಪೆನ್ಸ್ ಹಾಗೆಯೇ ಉಳಿದಿದೆ. ಉಳಿದ ರಾಜ್ಯಗಳನ್ನು ಮುಂದಿನ ಸಭೆಗಳಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಉಳಿದಿರುವ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಪಕ್ಷವು ಮಾರ್ಚ್ 11 ರಂದು ತನ್ನ ಎರಡನೇ ಚುನಾವಣಾ ಸಮಿತಿ ಸಭೆಯನ್ನು ನಡೆಸಲಿದೆ.

ಛತ್ತೀಸ್‌ಗಢ

ಜಂಗ್ರಿರ್-ಚಂಪಾ (ಎಸ್‌ಸಿ): ಶಿವಕುಮಾರ್ ದಹರಿಯಾ

ಕೊರ್ಬಾ: ಜ್ಯೋತ್ಸನಾ ಮಹಂತ್

ರಾಜನಂದಗಾಂವ್: ಭೂಪೇಶ್ ಬಘೇಲ್

ದುರ್ಗ್: ರಾಜೇಂದ್ರ ಸಾಹು

ರಾಯಪುರ: ವಿಕಾಸ್ ಉಪಾಧ್ಯಾಯ

ಮಹಾಸಮುಂಡ್: ತಾಮಧ್ವಜ್ ಸಾಹು

ಕರ್ನಾಟಕ

ಬಿಜಾಪುರ (ಎಸ್‌ಸಿ): ಎಚ್‌ಆರ್‌ ಅಲಗೂರು

ಹಾವೇರಿ: ಆನಂದಸ್ವಾಮಿ ಗಡ್ಡದೇವರ ಮಠ

ಶಿವಮೊಗ್ಗ: ಗೀತಾ ಶಿವರಾಜಕುಮಾರ್

ಹಾಸನ: ಶ್ರೇಯಸ್ ಪಟೇಲ್

ತುಮಕೂರು: ಎಸ್‌.ಪಿ. ಮುದ್ದಹನುಮೇಗೌಡ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್

ಕೇರಳ

ಕಾಸರಗೋಡು: ರಾಜಮೋಹನ್ ಉನ್ನಿಥಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಾಫಿ ಪರಂಬಿಲ್

ವಯನಾಡ್: ರಾಹುಲ್ ಗಾಂಧಿ

ಕೋಝಿಕ್ಕೋಡ್: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂದನ್

ಆಲತ್ತೂರು (ಎಸ್‌ಸಿ): ರಮ್ಯಾ ಹರಿದಾಸ್

ತ್ರಿಶೂರ್: ಕೆ ಮುರಳೀಧರನ್

ಚಾಲಕುಡಿ: ಬೆನ್ನಿ ಬೆಹನಾನ್

ಎರ್ನಾಕುಲಂ: ಹೈಬಿ ಈಡನ್

ಇಡುಕ್ಕಿ: ಡೀನ್ ಕುರಿಯಕೋಸ್

ಆಲಪ್ಪುಳ: ಕೆ.ಸಿ.ವೇಣುಗೋಪಾಲ್

ಮಾವೇಲಿಕ್ಕರ (ಎಸ್‌ಸಿ): ಕೆ ಸುರೇಶ್

ಪತ್ತನಂತಿಟ್ಟ: ಆಂಟೊ ಆಂಟೋನಿ

ಅಟ್ಟಿಂಗಲ್: ಅಡೂರ್ ಪ್ರಕಾಶ್

ತಿರುವನಂತಪುರಂ: ಶಶಿ ತರೂರ್

ಲಕ್ಷದ್ವೀಪ

ಲಕ್ಷದ್ವೀಪ (ಎಸ್‌ಟಿ): ಮೊಹಮ್ಮದ್ ಹಮ್ದುಲ್ಲಾ ಸಯೀದ್

ಮೇಘಾಲಯ

ಶಿಲ್ಲಾಂಗ್ (ಎಸ್‌ಟಿ): ವಿನ್ಸೆಂಟ್ ಎಚ್ ಪಾಲಾ

ತುರಾ (ಎಸ್‌ಟಿ): ಸಲೆಂಗ್ ಎ ಸಂಗ್ಮಾ

ನಾಗಾಲ್ಯಾಂಡ್

ನಾಗಾಲ್ಯಾಂಡ್: ಎಸ್ ಸುಪೊಂಗ್ಮೆರೆನ್ ಜಮೀರ್

ಸಿಕ್ಕಿಂ

ಸಿಕ್ಕಿಂ: ಗೋಪಾಲ್ ಚೆಟ್ರಿ

ತೆಲಂಗಾಣ

ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕಾರ್

ನಲ್ಗೊಂಡ: ರಘುವೀರ್ ಕುಂದೂರು

ಮಹೆಬೂಬನಗರ: ಚಲ್ಲಾ ವಂಶಿ ಚಂದ್ ರೆಡ್ಡಿ

ಮಹಬೂಬಾಬಾದ್ (ಎಸ್‌ಟಿ): ಬಲರಾಮ್ ನಾಯ್ಕ್ ಪೋರಿಕ

ತ್ರಿಪುರಾ

ತ್ರಿಪುರ ಪಶ್ಚಿಮ: ಆಶಿಶ್ ಕುಮಾರ್ ಸಹಾ

ಇದನ್ನೂ ಓದಿ; ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...