Homeಮುಖಪುಟಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ-2024: ಕರ್ನಾಟಕದ ಏಳು ಸ್ಥಾನ ಸೇರಿದಂತೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ವಿಪಕ್ಷಗಳ ‘ಇಂಡಿಯಾ’ ಬಣದೊಂದಿಗೆ ಸೀಟು ಹಂಚಿಕೆ ಗೊಂದಲಗಳು ಅಲ್ಪಮಟ್ಟಿಗೆ ಬಗೆಹರಿಯುತ್ತಿರುವಾಗ ಕಾಂಗ್ರೆಸ್‌ ಪಕ್ಷವು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 2024ರ ಲೋಕಸಭಾ ಚುನಾವಣೆಗೆ ಕೈ ನಾಯಕರು ಸಜ್ಜಾಗಿದ್ದು, ಕರ್ನಾಟಕದ ಏಳು ಸ್ಥಾನಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗುರುವಾರ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತೆಲಂಗಾಣ ಮತ್ತು ತ್ರಿಪುರಾ ರಾಜ್ಯಗಳಿಗೆ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದೆ. ಘೋಷಿಸಲಾದ 39 ಅಭ್ಯರ್ಥಿಗಳಲ್ಲಿ 15 ಸಾಮಾನ್ಯ ಜಾತಿ ಮತ್ತು 24 ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತ ಅಭ್ಯರ್ಥಿಗಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಆದ್ಯತೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ಸಂಖ್ಯೆಯ ಸಂಸತ್ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

ಉತ್ತರ ಪ್ರದೇಶದ ಅಮೇಥಿಯಿಂದ ರಾಹುಲ್ ಗಾಂಧಿ ಎರಡನೇ ಸ್ಥಾನಕ್ಕೆ ಸ್ಪರ್ಧಿಸುತ್ತಾರಾ ಎಂಬ ಸಸ್ಪೆನ್ಸ್ ಹಾಗೆಯೇ ಉಳಿದಿದೆ. ಉಳಿದ ರಾಜ್ಯಗಳನ್ನು ಮುಂದಿನ ಸಭೆಗಳಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಉಳಿದಿರುವ ರಾಜ್ಯದಲ್ಲಿ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಪಕ್ಷವು ಮಾರ್ಚ್ 11 ರಂದು ತನ್ನ ಎರಡನೇ ಚುನಾವಣಾ ಸಮಿತಿ ಸಭೆಯನ್ನು ನಡೆಸಲಿದೆ.

ಛತ್ತೀಸ್‌ಗಢ

ಜಂಗ್ರಿರ್-ಚಂಪಾ (ಎಸ್‌ಸಿ): ಶಿವಕುಮಾರ್ ದಹರಿಯಾ

ಕೊರ್ಬಾ: ಜ್ಯೋತ್ಸನಾ ಮಹಂತ್

ರಾಜನಂದಗಾಂವ್: ಭೂಪೇಶ್ ಬಘೇಲ್

ದುರ್ಗ್: ರಾಜೇಂದ್ರ ಸಾಹು

ರಾಯಪುರ: ವಿಕಾಸ್ ಉಪಾಧ್ಯಾಯ

ಮಹಾಸಮುಂಡ್: ತಾಮಧ್ವಜ್ ಸಾಹು

ಕರ್ನಾಟಕ

ಬಿಜಾಪುರ (ಎಸ್‌ಸಿ): ಎಚ್‌ಆರ್‌ ಅಲಗೂರು

ಹಾವೇರಿ: ಆನಂದಸ್ವಾಮಿ ಗಡ್ಡದೇವರ ಮಠ

ಶಿವಮೊಗ್ಗ: ಗೀತಾ ಶಿವರಾಜಕುಮಾರ್

ಹಾಸನ: ಶ್ರೇಯಸ್ ಪಟೇಲ್

ತುಮಕೂರು: ಎಸ್‌.ಪಿ. ಮುದ್ದಹನುಮೇಗೌಡ

ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ: ಡಿ.ಕೆ.ಸುರೇಶ್

ಕೇರಳ

ಕಾಸರಗೋಡು: ರಾಜಮೋಹನ್ ಉನ್ನಿಥಾನ್

ಕಣ್ಣೂರು: ಕೆ ಸುಧಾಕರನ್

ವಡಕರ: ಶಾಫಿ ಪರಂಬಿಲ್

ವಯನಾಡ್: ರಾಹುಲ್ ಗಾಂಧಿ

ಕೋಝಿಕ್ಕೋಡ್: ಎಂಕೆ ರಾಘವನ್

ಪಾಲಕ್ಕಾಡ್: ವಿಕೆ ಶ್ರೀಕಂದನ್

ಆಲತ್ತೂರು (ಎಸ್‌ಸಿ): ರಮ್ಯಾ ಹರಿದಾಸ್

ತ್ರಿಶೂರ್: ಕೆ ಮುರಳೀಧರನ್

ಚಾಲಕುಡಿ: ಬೆನ್ನಿ ಬೆಹನಾನ್

ಎರ್ನಾಕುಲಂ: ಹೈಬಿ ಈಡನ್

ಇಡುಕ್ಕಿ: ಡೀನ್ ಕುರಿಯಕೋಸ್

ಆಲಪ್ಪುಳ: ಕೆ.ಸಿ.ವೇಣುಗೋಪಾಲ್

ಮಾವೇಲಿಕ್ಕರ (ಎಸ್‌ಸಿ): ಕೆ ಸುರೇಶ್

ಪತ್ತನಂತಿಟ್ಟ: ಆಂಟೊ ಆಂಟೋನಿ

ಅಟ್ಟಿಂಗಲ್: ಅಡೂರ್ ಪ್ರಕಾಶ್

ತಿರುವನಂತಪುರಂ: ಶಶಿ ತರೂರ್

ಲಕ್ಷದ್ವೀಪ

ಲಕ್ಷದ್ವೀಪ (ಎಸ್‌ಟಿ): ಮೊಹಮ್ಮದ್ ಹಮ್ದುಲ್ಲಾ ಸಯೀದ್

ಮೇಘಾಲಯ

ಶಿಲ್ಲಾಂಗ್ (ಎಸ್‌ಟಿ): ವಿನ್ಸೆಂಟ್ ಎಚ್ ಪಾಲಾ

ತುರಾ (ಎಸ್‌ಟಿ): ಸಲೆಂಗ್ ಎ ಸಂಗ್ಮಾ

ನಾಗಾಲ್ಯಾಂಡ್

ನಾಗಾಲ್ಯಾಂಡ್: ಎಸ್ ಸುಪೊಂಗ್ಮೆರೆನ್ ಜಮೀರ್

ಸಿಕ್ಕಿಂ

ಸಿಕ್ಕಿಂ: ಗೋಪಾಲ್ ಚೆಟ್ರಿ

ತೆಲಂಗಾಣ

ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕಾರ್

ನಲ್ಗೊಂಡ: ರಘುವೀರ್ ಕುಂದೂರು

ಮಹೆಬೂಬನಗರ: ಚಲ್ಲಾ ವಂಶಿ ಚಂದ್ ರೆಡ್ಡಿ

ಮಹಬೂಬಾಬಾದ್ (ಎಸ್‌ಟಿ): ಬಲರಾಮ್ ನಾಯ್ಕ್ ಪೋರಿಕ

ತ್ರಿಪುರಾ

ತ್ರಿಪುರ ಪಶ್ಚಿಮ: ಆಶಿಶ್ ಕುಮಾರ್ ಸಹಾ

ಇದನ್ನೂ ಓದಿ; ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ; ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...