Homeಮುಖಪುಟಲೋಕಸಭಾ ಚುನಾವಣೆ 2024: ರಾಜೀವ್ ಚಂದ್ರಶೇಖರ್ ನೀಡಿದ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಶಶಿ ತರೂರ್

ಲೋಕಸಭಾ ಚುನಾವಣೆ 2024: ರಾಜೀವ್ ಚಂದ್ರಶೇಖರ್ ನೀಡಿದ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಶಶಿ ತರೂರ್

- Advertisement -
- Advertisement -

ಕೇಂದ್ರ ಸಚಿವ, ಕೇರಳದ ತಿರುವನಂತಪುರಂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಲು ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದು, ಬಿಜೆಪಿ ಅಭ್ಯರ್ಥಿ ಸವಾಲನ್ನು ತರೂರ್ ಸ್ವೀಕರಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೀವ್ ಚಂದ್ರಶೇಖರ್, “ಆಲೋಚನೆಗಳು, ಅಭಿವೃದ್ಧಿ ಮತ್ತು ಯಾರ ಟ್ರ್ಯಾಕ್ ರೆಕಾರ್ಡ್ ಉತ್ತಮವಾಗಿದೆ ಎಂಬುದರ ಕುರಿತು ನಾನು (ಶಶಿ ತರೂರ್ ಅವರೊಂದಿಗೆ) ಚರ್ಚೆಗೆ ಸಿದ್ಧನಿದ್ದೇನೆ. ನಾನು ಮೊದಲಿನಿಂದಲೂ ಇದನ್ನು ಹೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ತಿರುವನಂತಪುರಂ ಹಾಲಿ ಸಂಸದ ತರೂರ್ ಅವರು ರಾಜೀವ್ ಚಂದ್ರಶೇಖರ್ ಅವರ ಸವಾಲಿನ ವೀಡಿಯೊವನ್ನು ಹಂಚಿಕೊಂಡಿದ್ದು, “ರಾಜಕೀಯ ಮತ್ತು ಅಭಿವೃದ್ಧಿಯನ್ನು ಚರ್ಚಿಸೋಣ” ಎಂದು ಬರೆದಿದ್ದಾರೆ.

“ಹೌದು, ನಾನು ಚರ್ಚೆಯನ್ನು ಸ್ವಾಗತಿಸುತ್ತೇನೆ. ಆದರೆ, ತಿರುವನಂತಪುರದ ಜನರಿಗೆ ಇದುವರೆಗೂ ಯಾರು ಚರ್ಚೆಯಿಂದ ನುಣುಚಿಕೊಳ್ಳುತ್ತಿದ್ದಾರೆಂದು ತಿಳಿದಿದ್ದಾರೆ. ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ” ಎಂದು ತರೂರ್ ಹೇಳಿದರು.

“ನಾವು ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ವರ್ಷಗಳಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರವು ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಸಾಕ್ಷಿಯಾಗಿದ್ದು, ಎರಡೂ ಪಕ್ಷಗಳು ಇದನ್ನು ಪ್ರತಿಷ್ಠೆಯ ಕಣವೆಂದು ಪರಿಗಣಿಸಿವೆ. ಇತ್ತೀಚಿನ ಬೆಳವಣಿಗೆಯೆಂದರೆ, ಇಬ್ಬರೂ ನಾಯಕರು ಚುನಾವಣಾ ಆಯೋಗಕ್ಕೆ ಪರಸ್ಪರ ದೂರುಗಳನ್ನು ದಾಖಲಿಸಿಕೊಂಡಿದ್ದು, ನಿರೀಕ್ಷಿತ ಮತ ಬ್ಯಾಂಕ್ ಇಲ್ಲದಿದ್ದರೂ ಬಿಜೆಪಿ ಇಲ್ಲಿ ಗೆಲ್ಲುವುದಕ್ಕೆ ತಂತ್ರಗಾರಿಕೆ ನಡೆಸುತ್ತಿದೆ.

ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಅಭ್ಯರ್ಥಿ ಶಶಿ ತರೂರ್‌ ಅವರು ಮತಕ್ಕಾಗಿ ಹಣ ನೀಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಚಂದ್ರಶೇಖರ್‌ ದೂರಿನಲ್ಲಿ ಆರೋಪಿಸಿದ್ದಾರೆ. ತರೂರ್ ಅವರ ತಂಡ ಆರೋಪವನ್ನು ನಿರಾಕರಿಸಿದ್ದು, ಅವರು ಅಂತಹ ಹೇಳಿಕೆಯನ್ನು ಎಂದಿಗೂ ನೀಡಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಎನ್‌ಡಿಎ ಅಭ್ಯರ್ಥಿ ಚಂದ್ರಶೇಖರ್‌ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ದೂರು ದಾಖಲಿಸಿದ್ದು, ನಾಮಪತ್ರದ ಜತೆಗೆ ಸುಳ್ಳು ಅಫಿಡವಿಟ್‌ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಮತ್ತು ತರೂರ್ ಅವರಲ್ಲದೆ, ಸಿಪಿಐ ಹಿರಿಯ ಪನ್ನಯನ್ ರವೀಂದ್ರನ್ ಅವರು ಎಡ-ರಂಗದ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಕೇರಳದಲ್ಲಿ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ; ರಾಜ್ಯಕ್ಕಾಗಿರುವ ಅನ್ಯಾಯವನ್ನು ನಿರ್ಮಲಾ ಸೀತಾರಾಮನ್ ಒಪ್ಪಿಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...