Homeಮುಖಪುಟಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದಿದ್ದ ಭೋಜ್‌ಪುರಿ ಗಾಯಕ-ನಟ ಪವನ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ ಅಸನ್ಸೋಲ್‌ ಕ್ಷೇತ್ರದ ಟಿಕೆಟ್ ಪವನ್ ಸಿಂಗ್‌ಗೆ ನೀಡಲಾಗಿತ್ತು. ಆದರೆ, ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪವನ್ ಸಿಂಗ್ ಭಾನುವಾರ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಭಾರತೀಯ ಜನತಾ ಪಕ್ಷದ ಉನ್ನತ ನಾಯಕತ್ವಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ. ಪಕ್ಷವು ನನ್ನನ್ನು ನಂಬಿ ಅಸನ್ಸೋಲ್‌ನ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ, ಕಾರಣಾಂತರಗಳಿಂದ ನಾನು ಅಸನ್ಸೋಲ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗುವಾಗುತ್ತಿಲ್ಲ” ಎಂದಿದ್ದಾರೆ.

ಪವನ್ ಸಿಂಗ್‌ ಸ್ಪರ್ಧೆಯಿಂದ ಹಿಂದೆ ಸರಿದಿರುವ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ, “ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗುವ ಮೊದಲೇ ಬಿಜೆಪಿ 1 ಸ್ಥಾನವನ್ನು ಬಿಟ್ಟುಕೊಟ್ಟಿದೆ” ಎಂದು ಹೇಳಿದ್ದಾರೆ.

ಪವನ್‌ ಸಿಂಗ್‌ಗೆ ಟಿಕೆಟ್ ನೀಡಿದ್ದರ ಕುರಿತು ಪ್ರತಿಕ್ರಿಯಿಸಿದ್ದ ಅಸನ್ಸೋಲ್‌ನ ಮಾಜಿ ಸಂಸದ ಹಾಗೂ ಪಶ್ಚಿಮ ಬಂಗಾಳದ ಹಾಲಿ ಸಚಿವ ಬಾಬುಲ್ ಸುಪ್ರಿಯೋ, “ಪವನ್ ಜಿ ಅವರಿಗೆ ಅಸನ್ಸೋಲ್‌ಗೆ ಸ್ವಾಗತ. ನಾನು ಅವರ ಬಗ್ಗೆ ಪರಿಶೀಲನೆ ಮಾಡಿಲ್ಲ, ಮಾಡಲು ಹೋಗೋದು ಇಲ್ಲ. ಆದರೆ, ಕೆಲವೊಂದು ವಿಡಿಯೋಗಳು ನಾನು ಹಂಚಿಕೊಂಡಿದ್ದೇನೆ. ಅದರಲ್ಲಿ ಪವನ್ ಅವರು ಮಹಿಳೆಯರಿಗೆ ಯಾವ ರೀತಿ ಗೌರವ ಕೊಡುತ್ತಾರೆ ಎನ್ನುವುದು ಸ್ಪಷ್ಟವಾಗಿ ಇದೆ. ಖಂಡಿತವಾಗಿಯೂ ಪ್ರಧಾನಿ ಮೋದಿ ಅವರು ಪವನ್ ಪರ ಪ್ರಚಾರಕ್ಕೆ ಬರಬಹುದು” ಎಂದು ಟಾಂಗ್ ನೀಡಿದ್ದರು.

ಭೋಜ್‌ಪುರಿ ನಟ ಮತ್ತು ಗಾಯಕನಾಗಿರುವ ಪವನ್ ಸಿಂಗ್ ತನ್ನ ಚಿತ್ರ ಮತ್ತು ಹಾಡುಗಳಲ್ಲಿ ಬೆಂಗಾಲಿ ಮಹಿಳೆಯರನ್ನು ಕೀಳಾಗಿ ಚಿತ್ರಿಸಿದ್ದಾರೆ ಎಂಬ ಆರೋಪವಿದೆ. ಹಾಗಾಗಿ, ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಬೆನ್ನಲ್ಲೇ ಟಿಎಂಸಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಅಲ್ಲದೆ, ಪಶ್ಚಿಮ ಬಂಗಾಳದ ಸಂದೇಶ್‌ ಖಾಲಿಯಲ್ಲಿ ಸ್ಥಳೀಯ ಟಿಎಂಸಿ ನಾಯಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮುಂದಿಟ್ಟುಕೊಂಡು ಕಳೆದ ಕೆಲ ದಿನಗಳಿಂದ ಬಿಜೆಪಿ ದೊಡ್ಡ ಮಟ್ಟದ ಹೋರಾಟ ನಡೆಸಿತ್ತು. ಈ ಬೆನ್ನಲ್ಲೇ ಮಹಿಳೆಯರನ್ನುನ ಕೀಳಾಗಿ ಚಿತ್ರಿಸಿದ ಆರೋಪ ಹೊತ್ತಿರುವ ಪವನ್ ಸಿಂಗ್‌ಗೆ ಟಿಕೆಟ್ ನೀಡಿರುವುದು ಸ್ವತಃ ಬಿಜೆಪಿ ನಾಯಕರ ಅಸಮಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಕಾರಣಕ್ಕೆ ಪವನ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿರುವ ಸಾಧ್ಯತೆ ಇದೆ.

ಇದನ್ನೂ ಓದಿ : ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...