Homeಮುಖಪುಟಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ

ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್‌ ಹೆಗಡೆಗೆ ಕೈ ತಪ್ಪಿದ ಟಿಕೆಟ್. ಹಿಮಾಚಲದಲ್ಲಿ ನಟಿ ಕಂಗನಾ ರನೌತ್ ಕಣಕ್ಕೆ

- Advertisement -
- Advertisement -

ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಮಾ.24) ಪ್ರಕಟಿಸಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪಟ್ಟಿಯಲ್ಲಿದೆ.

ಉತ್ತರ ಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್, ಮಿಜೋರಾಂ, ಸಿಕ್ಕಿಂ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ.

ಐದನೇ ಪಟ್ಟಿಯಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ನವೀನ್ ಜಿಂದಾಲ್ ಅವರಿಗೆ ಉತ್ತರ ಪ್ರದೇಶದ ಕುರುಕ್ಷೇತ್ರದಿಂದ, ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಹೊಸ ಅಭ್ಯರ್ಥಿ ಸೀತಾ ಸೊರೆನ್ ಅವರಿಗೆ ಜಾರ್ಖಂಡ್‌ನ ದುಮ್ಕಾದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವೆ ಅಶ್ವಿನಿ ಚೌಬೆ ಅವರಿಗೆ ಬಿಹಾರದ ಬಕ್ಸರ್‌ನ ಟಿಕೆಟ್ ಕೈ ತಪ್ಪಿದೆ.

ವರುಣ್ ಗಾಂಧಿ ಅವರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಕೈಬಿಡಲಾಗಿದ್ದು, ಅವರ ತಾಯಿ ಮೇನಕಾ ಗಾಂಧಿಯವರಿಗೆ ಸುಲ್ತಾನ್‌ಪುರದ ಟಿಕೆಟ್ ನೀಡಲಾಗಿದೆ. ಸಂಬಲ್‌ಪುರದಿಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿಯಿಂದ ಸಂಬಿತ್ ಪಾತ್ರ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ಮಾಡಿದ್ದ ನಟ ಅರುಣ್ ಗೋವಿಲ್ ಅವರಿಗೆ ಮೀರತ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಪಿಲಿಭಿತ್‌ನಲ್ಲಿ ವರುಣ್ ಗಾಂಧಿ ಬದಲಿಗೆ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಂವಿಧಾನ ಬದಲಾವಣೆಯ ಹೇಳಿಕೆ ನೀಡುತ್ತಿದ್ದ ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ. ಅವರ ಬದಲಿಗೆ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರನ್ನು ಕಣಕ್ಕಿಳಿಸಿದೆ.

ಬಿಹಾರದಲ್ಲಿ ಕೇಂದ್ರ ಸಚಿವರಾದ ಆರ್.ಕೆ ಸಿಂಗ್ ಅವರನ್ನು ಅರ್ರಾಹದಿಂದ, ನಿತ್ಯಾನಂದ್ ರೈ ಉಜಿಯಾರ್‌ಪುರದಿಂದ ಮತ್ತು ಗಿರಿರಾಜ್ ಸಿಂಗ್ ಅವರನ್ನು ಬೇಗುಸರಾಯ್‌ನಿಂದ ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಅವರಿಗೆ ಪಾಟ್ನಾ ಸಾಹಿಬ್‌, ರಾಜೀವ್ ಪ್ರತಾಪ್ ರೂಡಿ ಅವರಿಗೆ ಸರಣ್‌, ರಾಧಾ ಮೋಹನ್ ಸಿಂಗ್ ಅವರಿಗೆ ಪೂರ್ವಿ ಚಂಪಾರಣ್‌ ಮತ್ತು ರಾಮ್ ಕೃಪಾಲ್ ಯಾದವ್ ಅವರಿಗೆ ಪಾಟಲಿಪುತ್ರದ ಟಿಕೆಟ್ ನೀಡಿದೆ.

ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ :

ಕರ್ನಾಟದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿತ್ತು. ಭಾನುವಾರ ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು ಮತ್ತು ಉತ್ತರ ಕನ್ನಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇನ್ನು ಒಂದು ಕ್ಷೇತ್ರ ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಬೇಕಿದೆ. ಉಳಿದ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮೈತ್ರಿ ಪಕ್ಷ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಿದ್ದು, ಇಲ್ಲಿನ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿದೆ. ಉತ್ತರ ಕನ್ನಡದಲ್ಲಿ ಅನಂತ್‌ ಕುಮಾರ್ ಹೆಗಡೆ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರದ ಟಿಕೆಟ್ ಮಾಜಿ ಸಚಿವ ಡಾ.ಕೆ ಸುಧಾಕರ್‌ಗೆ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕರ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ : ‘ಪ್ರಚಾರಕ್ಕೆ ಅಡ್ಡಿಪಡಿಸಲು ಸಿಬಿಐ ನನಗೆ ಕಿರುಕುಳ ನೀಡುತ್ತಿದೆ..’; ಚುನಾವಣಾ ಆಯೋಗಕ್ಕೆ ಪತ್ರ ಬರೆದ ಮಹುವಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...