Homeಮುಖಪುಟಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದ್ದು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ದೇಶದಲ್ಲಿಯೇ ಅತಿ ಹೆಚ್ಚಿನ ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಎರಡನೇ ಸ್ಥಾನವನ್ನು ಹೊಂದಿರುವ (48) ಮಹಾರಾಷ್ಟ್ರದಲ್ಲಿ ಐದು ಪಕ್ಷಗಳು ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ಲೆಕ್ಕಾಚಾರದಲ್ಲಿ ತೊಡಗಿವೆ. ಇದೇ ಸಂದರ್ಭದಲ್ಲಿ ಶಿವಸೇನೆಯನ್ನು ಇಬ್ಭಾಗ ಮಾಡಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಸಿಎಂ ಆಗಿರುವ ಏಕನಾಥ್ ಶಿಂಧೆ ಬಣದೊಂದಿಗೆ ಚುನಾವಣೆ ಎದುರಿಸಬೇಕಾಗಿರುವ ಬಿಜೆಪಿ ಪಕ್ಷವು ಹಿನ್ನಡೆ ಅನುಭವಿಸುವ ಆತಂಕದಲ್ಲಿದೆ.

2019ರ ಕಳೆದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಜೊತೆಗಿನ ಮೈತ್ರಿಯೊಂದಿಗ ಚುನಾವಣೆ ಎದುರಿಸಿ 48 ಕ್ಷೇತ್ರಗಳಲ್ಲಿ 41 ಕ್ಷೇತ್ರಗಳನ್ನು ಗೆದ್ದುಕೊಳ್ಳುವಲ್ಲಿ ಸಫಲವಾಗಿದ್ದವು. ಅದರಲ್ಲಿ ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಶಿವಸೇನೆ 18 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಮತ್ತೊಂದು ಮೈತ್ರಿಕೂಟ ಎನ್‌ಸಿಪಿ 4 ಸ್ಥಾನ ಗೆದ್ದರೆ ಕಾಂಗ್ರೆಸ್ ಒಂದು ಸ್ಥಾನಕ್ಕೆ ಕುಸಿದಿತ್ತು. AIMIM 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು.

ಬಿಜೆಪಿ ಪಕ್ಷವು 2019ರಲ್ಲಿ ನೀಡಿದ ಅಭೂತಪೂರ್ವ ಯಶಸ್ಸನ್ನು ಮರುಗಳಿಸಲು ಬಯಸುತ್ತಿದೆ. ಆದರೆ ಆಗ ತನ್ನೊಂದಿಗೆ ಇದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಬ್ಭಾಗವಾಗಿದ್ದು, ಉದ್ಧವ್ ಬಣ ವಿರೋಧಿ ಮಹಾವಿಕಾಸ್ ಅಘಾಡಿ (ಎನ್‌ಸಿಪಿ, ಕಾಂಗ್ರೆಸ್, ಶಿವಸೇನೆ) ಪಾಳಯ ಸೇರಿದೆ. ಬದಲಿಗೆ ಏಕನಾಥ್ ಶಿಂಧೆಯ ಶಿವಸೇನೆ ಬಣ ಬಿಜೆಪಿ ಜೊತೆಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವುದು ಕಷ್ಟ. ಹಾಗಾದಲ್ಲಿ ಬಿಜೆಪಿ ಗೆಲ್ಲುವುದು ಸಹ ಕಷ್ಟ ಎಂದು ಬಿಜೆಪಿ ಚಿಂತಿಸುತ್ತಿದೆ.

ಮೇ ಮಧ್ಯಭಾಗದಲ್ಲಿ ಲೋಕಸಭಾ ಚುನಾವಣೆಯ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಸಭೆ ನಡೆಸಿದರು. ಅಲ್ಲಿ ಶಿಂಧೆ ಬಣದ ಶಿವಸೇನೆಯು ಕೂಡಲೇ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಬೇಕು. ಲೋಕಸಭಾ ಚುನಾವಣೆಗೆ ತಯಾರಿ ನಡೆಸಬೇಕು. ಪಕ್ಷ ಎಲ್ಲೆಲ್ಲಿ ಪ್ರಭಾವ ಬೀರಬಹುದು ಎಂಬುದರ ಸಮೀಕ್ಷೆ ನಡೆಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಇದಾರಿಂದಾಗಿ ಸಿಎಂ ಏಕನಾಥ್ ಶಿಂಧೆ ತಮ್ಮ ಪಕ್ಷದ ಮುಖಂಡರಿಗೆ ಪ್ರಚಾರ ಸಭೆಗಳನ್ನು ಏರ್ಪಡಿಸಲು ಮತ್ತು ಸರ್ಕಾರದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ್ದಾರೆ.

ಇನ್ನೊಂದೆಡೆ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೂ ಈಗಾಗಲೇ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸುತ್ತಿದೆ. ಪಕ್ಕದ ಕರ್ನಾಟಕದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿರುವುದು ಅವರಿಗೆ ಆತ್ಮ ವಿಶ್ವಾಸ ತುಂಬಿದೆ. ಉದ್ಧವ್ ಠಾಕ್ರೆ ಬಣ ಚುನಾವಣೆಯಲ್ಲಿ ಗೆದ್ದು ಶಿಂಧೆ ಬಣದ ಎದುರು ಸೇಡು ತೀರಿಸಿಕೊಳ್ಳಲು ಯತ್ನಿಸುತ್ತಿದೆ. ಒಟ್ಟು 48 ಸೀಟುಗಳಲ್ಲಿ ಮೂರು ಪಕ್ಷಗಳು ತಲಾ 16 ಸೀಟುಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ಬಿಜೆಪಿಯ ಹಿಂದುತ್ವ ಮತ್ತು ಶಿವಸೇನೆಯ ಪ್ರಾದೇಶಿಕ ಹಿರಿಮೆ ಕೆಲಸ ಮಾಡಿತ್ತು. ಆದರೆ ಈಗ ಶಿವಸೇನೆ ಇಬ್ಭಾಗವಾಗಿರುವುದರಿಂದ ಏಕನಾಥ್ ಶಿಂಧೆ ಬಣವು ಅಧಿಕಾರಕ್ಕಾಗಿ ಬಿಜೆಪಿ ಜೊತೆಗೆ ಕೈಜೋಡಿಸಿ ಬಾಳಸಾಹೇಬ್ ಠಾಕ್ರೆ ಕುಟುಂಬಕ್ಕೆ ದ್ರೋಹವೆಸಗಿಸಿದೆ ಎಂಬ ಕಥನ ಬಿತ್ತಲು ಉದ್ಧವ್ ಬಣ ಯತ್ನಿಸುತ್ತಿದೆ. ಇನ್ನೊಂದೆಡೆ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಬಾಳಾ ಸಾಹೇಬ್ ಠಾಕ್ರೆಯವರ ಹಿಂದುತ್ವದ ಸಿದ್ದಾಂತಕ್ಕೆ ಉದ್ಧವ್ ಠಾಕ್ರೆ ದ್ರೋಹವೆಸಗಿದರು ಎಂದು ಶಿಂಧೆ ಬಣ ಆರೋಪಿಸುತ್ತಿದೆ. ಇಬ್ಬರಲ್ಲಿ ಜನ ಯಾರ ಮಾತಿಗೆ ಬೆಲೆ ಕೊಡುತ್ತಾರೆ ಎಂಬುದು ಮುಂದಿನ ಮಹಾಚುನಾವಣೆಯಲ್ಲಿ ತಿಳಿಯಲಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...