Homeಮುಖಪುಟಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದ್ದು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ದೇಶದಲ್ಲಿಯೇ ಅತಿ ಹೆಚ್ಚಿನ ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಎರಡನೇ ಸ್ಥಾನವನ್ನು ಹೊಂದಿರುವ (48) ಮಹಾರಾಷ್ಟ್ರದಲ್ಲಿ ಐದು ಪಕ್ಷಗಳು ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ಲೆಕ್ಕಾಚಾರದಲ್ಲಿ ತೊಡಗಿವೆ. ಇದೇ ಸಂದರ್ಭದಲ್ಲಿ ಶಿವಸೇನೆಯನ್ನು ಇಬ್ಭಾಗ ಮಾಡಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಸಿಎಂ ಆಗಿರುವ ಏಕನಾಥ್ ಶಿಂಧೆ ಬಣದೊಂದಿಗೆ ಚುನಾವಣೆ ಎದುರಿಸಬೇಕಾಗಿರುವ ಬಿಜೆಪಿ ಪಕ್ಷವು ಹಿನ್ನಡೆ ಅನುಭವಿಸುವ ಆತಂಕದಲ್ಲಿದೆ.

2019ರ ಕಳೆದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಜೊತೆಗಿನ ಮೈತ್ರಿಯೊಂದಿಗ ಚುನಾವಣೆ ಎದುರಿಸಿ 48 ಕ್ಷೇತ್ರಗಳಲ್ಲಿ 41 ಕ್ಷೇತ್ರಗಳನ್ನು ಗೆದ್ದುಕೊಳ್ಳುವಲ್ಲಿ ಸಫಲವಾಗಿದ್ದವು. ಅದರಲ್ಲಿ ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಶಿವಸೇನೆ 18 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಮತ್ತೊಂದು ಮೈತ್ರಿಕೂಟ ಎನ್‌ಸಿಪಿ 4 ಸ್ಥಾನ ಗೆದ್ದರೆ ಕಾಂಗ್ರೆಸ್ ಒಂದು ಸ್ಥಾನಕ್ಕೆ ಕುಸಿದಿತ್ತು. AIMIM 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು.

ಬಿಜೆಪಿ ಪಕ್ಷವು 2019ರಲ್ಲಿ ನೀಡಿದ ಅಭೂತಪೂರ್ವ ಯಶಸ್ಸನ್ನು ಮರುಗಳಿಸಲು ಬಯಸುತ್ತಿದೆ. ಆದರೆ ಆಗ ತನ್ನೊಂದಿಗೆ ಇದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಬ್ಭಾಗವಾಗಿದ್ದು, ಉದ್ಧವ್ ಬಣ ವಿರೋಧಿ ಮಹಾವಿಕಾಸ್ ಅಘಾಡಿ (ಎನ್‌ಸಿಪಿ, ಕಾಂಗ್ರೆಸ್, ಶಿವಸೇನೆ) ಪಾಳಯ ಸೇರಿದೆ. ಬದಲಿಗೆ ಏಕನಾಥ್ ಶಿಂಧೆಯ ಶಿವಸೇನೆ ಬಣ ಬಿಜೆಪಿ ಜೊತೆಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವುದು ಕಷ್ಟ. ಹಾಗಾದಲ್ಲಿ ಬಿಜೆಪಿ ಗೆಲ್ಲುವುದು ಸಹ ಕಷ್ಟ ಎಂದು ಬಿಜೆಪಿ ಚಿಂತಿಸುತ್ತಿದೆ.

ಮೇ ಮಧ್ಯಭಾಗದಲ್ಲಿ ಲೋಕಸಭಾ ಚುನಾವಣೆಯ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಸಭೆ ನಡೆಸಿದರು. ಅಲ್ಲಿ ಶಿಂಧೆ ಬಣದ ಶಿವಸೇನೆಯು ಕೂಡಲೇ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಬೇಕು. ಲೋಕಸಭಾ ಚುನಾವಣೆಗೆ ತಯಾರಿ ನಡೆಸಬೇಕು. ಪಕ್ಷ ಎಲ್ಲೆಲ್ಲಿ ಪ್ರಭಾವ ಬೀರಬಹುದು ಎಂಬುದರ ಸಮೀಕ್ಷೆ ನಡೆಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಇದಾರಿಂದಾಗಿ ಸಿಎಂ ಏಕನಾಥ್ ಶಿಂಧೆ ತಮ್ಮ ಪಕ್ಷದ ಮುಖಂಡರಿಗೆ ಪ್ರಚಾರ ಸಭೆಗಳನ್ನು ಏರ್ಪಡಿಸಲು ಮತ್ತು ಸರ್ಕಾರದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ್ದಾರೆ.

ಇನ್ನೊಂದೆಡೆ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೂ ಈಗಾಗಲೇ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸುತ್ತಿದೆ. ಪಕ್ಕದ ಕರ್ನಾಟಕದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿರುವುದು ಅವರಿಗೆ ಆತ್ಮ ವಿಶ್ವಾಸ ತುಂಬಿದೆ. ಉದ್ಧವ್ ಠಾಕ್ರೆ ಬಣ ಚುನಾವಣೆಯಲ್ಲಿ ಗೆದ್ದು ಶಿಂಧೆ ಬಣದ ಎದುರು ಸೇಡು ತೀರಿಸಿಕೊಳ್ಳಲು ಯತ್ನಿಸುತ್ತಿದೆ. ಒಟ್ಟು 48 ಸೀಟುಗಳಲ್ಲಿ ಮೂರು ಪಕ್ಷಗಳು ತಲಾ 16 ಸೀಟುಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ಬಿಜೆಪಿಯ ಹಿಂದುತ್ವ ಮತ್ತು ಶಿವಸೇನೆಯ ಪ್ರಾದೇಶಿಕ ಹಿರಿಮೆ ಕೆಲಸ ಮಾಡಿತ್ತು. ಆದರೆ ಈಗ ಶಿವಸೇನೆ ಇಬ್ಭಾಗವಾಗಿರುವುದರಿಂದ ಏಕನಾಥ್ ಶಿಂಧೆ ಬಣವು ಅಧಿಕಾರಕ್ಕಾಗಿ ಬಿಜೆಪಿ ಜೊತೆಗೆ ಕೈಜೋಡಿಸಿ ಬಾಳಸಾಹೇಬ್ ಠಾಕ್ರೆ ಕುಟುಂಬಕ್ಕೆ ದ್ರೋಹವೆಸಗಿಸಿದೆ ಎಂಬ ಕಥನ ಬಿತ್ತಲು ಉದ್ಧವ್ ಬಣ ಯತ್ನಿಸುತ್ತಿದೆ. ಇನ್ನೊಂದೆಡೆ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಬಾಳಾ ಸಾಹೇಬ್ ಠಾಕ್ರೆಯವರ ಹಿಂದುತ್ವದ ಸಿದ್ದಾಂತಕ್ಕೆ ಉದ್ಧವ್ ಠಾಕ್ರೆ ದ್ರೋಹವೆಸಗಿದರು ಎಂದು ಶಿಂಧೆ ಬಣ ಆರೋಪಿಸುತ್ತಿದೆ. ಇಬ್ಬರಲ್ಲಿ ಜನ ಯಾರ ಮಾತಿಗೆ ಬೆಲೆ ಕೊಡುತ್ತಾರೆ ಎಂಬುದು ಮುಂದಿನ ಮಹಾಚುನಾವಣೆಯಲ್ಲಿ ತಿಳಿಯಲಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...