Homeಮುಖಪುಟಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದ್ದು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ದೇಶದಲ್ಲಿಯೇ ಅತಿ ಹೆಚ್ಚಿನ ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಎರಡನೇ ಸ್ಥಾನವನ್ನು ಹೊಂದಿರುವ (48) ಮಹಾರಾಷ್ಟ್ರದಲ್ಲಿ ಐದು ಪಕ್ಷಗಳು ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ಲೆಕ್ಕಾಚಾರದಲ್ಲಿ ತೊಡಗಿವೆ. ಇದೇ ಸಂದರ್ಭದಲ್ಲಿ ಶಿವಸೇನೆಯನ್ನು ಇಬ್ಭಾಗ ಮಾಡಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಸಿಎಂ ಆಗಿರುವ ಏಕನಾಥ್ ಶಿಂಧೆ ಬಣದೊಂದಿಗೆ ಚುನಾವಣೆ ಎದುರಿಸಬೇಕಾಗಿರುವ ಬಿಜೆಪಿ ಪಕ್ಷವು ಹಿನ್ನಡೆ ಅನುಭವಿಸುವ ಆತಂಕದಲ್ಲಿದೆ.

2019ರ ಕಳೆದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಜೊತೆಗಿನ ಮೈತ್ರಿಯೊಂದಿಗ ಚುನಾವಣೆ ಎದುರಿಸಿ 48 ಕ್ಷೇತ್ರಗಳಲ್ಲಿ 41 ಕ್ಷೇತ್ರಗಳನ್ನು ಗೆದ್ದುಕೊಳ್ಳುವಲ್ಲಿ ಸಫಲವಾಗಿದ್ದವು. ಅದರಲ್ಲಿ ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಶಿವಸೇನೆ 18 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಮತ್ತೊಂದು ಮೈತ್ರಿಕೂಟ ಎನ್‌ಸಿಪಿ 4 ಸ್ಥಾನ ಗೆದ್ದರೆ ಕಾಂಗ್ರೆಸ್ ಒಂದು ಸ್ಥಾನಕ್ಕೆ ಕುಸಿದಿತ್ತು. AIMIM 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು.

ಬಿಜೆಪಿ ಪಕ್ಷವು 2019ರಲ್ಲಿ ನೀಡಿದ ಅಭೂತಪೂರ್ವ ಯಶಸ್ಸನ್ನು ಮರುಗಳಿಸಲು ಬಯಸುತ್ತಿದೆ. ಆದರೆ ಆಗ ತನ್ನೊಂದಿಗೆ ಇದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಬ್ಭಾಗವಾಗಿದ್ದು, ಉದ್ಧವ್ ಬಣ ವಿರೋಧಿ ಮಹಾವಿಕಾಸ್ ಅಘಾಡಿ (ಎನ್‌ಸಿಪಿ, ಕಾಂಗ್ರೆಸ್, ಶಿವಸೇನೆ) ಪಾಳಯ ಸೇರಿದೆ. ಬದಲಿಗೆ ಏಕನಾಥ್ ಶಿಂಧೆಯ ಶಿವಸೇನೆ ಬಣ ಬಿಜೆಪಿ ಜೊತೆಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವುದು ಕಷ್ಟ. ಹಾಗಾದಲ್ಲಿ ಬಿಜೆಪಿ ಗೆಲ್ಲುವುದು ಸಹ ಕಷ್ಟ ಎಂದು ಬಿಜೆಪಿ ಚಿಂತಿಸುತ್ತಿದೆ.

ಮೇ ಮಧ್ಯಭಾಗದಲ್ಲಿ ಲೋಕಸಭಾ ಚುನಾವಣೆಯ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಸಭೆ ನಡೆಸಿದರು. ಅಲ್ಲಿ ಶಿಂಧೆ ಬಣದ ಶಿವಸೇನೆಯು ಕೂಡಲೇ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಬೇಕು. ಲೋಕಸಭಾ ಚುನಾವಣೆಗೆ ತಯಾರಿ ನಡೆಸಬೇಕು. ಪಕ್ಷ ಎಲ್ಲೆಲ್ಲಿ ಪ್ರಭಾವ ಬೀರಬಹುದು ಎಂಬುದರ ಸಮೀಕ್ಷೆ ನಡೆಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಇದಾರಿಂದಾಗಿ ಸಿಎಂ ಏಕನಾಥ್ ಶಿಂಧೆ ತಮ್ಮ ಪಕ್ಷದ ಮುಖಂಡರಿಗೆ ಪ್ರಚಾರ ಸಭೆಗಳನ್ನು ಏರ್ಪಡಿಸಲು ಮತ್ತು ಸರ್ಕಾರದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ್ದಾರೆ.

ಇನ್ನೊಂದೆಡೆ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೂ ಈಗಾಗಲೇ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸುತ್ತಿದೆ. ಪಕ್ಕದ ಕರ್ನಾಟಕದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿರುವುದು ಅವರಿಗೆ ಆತ್ಮ ವಿಶ್ವಾಸ ತುಂಬಿದೆ. ಉದ್ಧವ್ ಠಾಕ್ರೆ ಬಣ ಚುನಾವಣೆಯಲ್ಲಿ ಗೆದ್ದು ಶಿಂಧೆ ಬಣದ ಎದುರು ಸೇಡು ತೀರಿಸಿಕೊಳ್ಳಲು ಯತ್ನಿಸುತ್ತಿದೆ. ಒಟ್ಟು 48 ಸೀಟುಗಳಲ್ಲಿ ಮೂರು ಪಕ್ಷಗಳು ತಲಾ 16 ಸೀಟುಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ಬಿಜೆಪಿಯ ಹಿಂದುತ್ವ ಮತ್ತು ಶಿವಸೇನೆಯ ಪ್ರಾದೇಶಿಕ ಹಿರಿಮೆ ಕೆಲಸ ಮಾಡಿತ್ತು. ಆದರೆ ಈಗ ಶಿವಸೇನೆ ಇಬ್ಭಾಗವಾಗಿರುವುದರಿಂದ ಏಕನಾಥ್ ಶಿಂಧೆ ಬಣವು ಅಧಿಕಾರಕ್ಕಾಗಿ ಬಿಜೆಪಿ ಜೊತೆಗೆ ಕೈಜೋಡಿಸಿ ಬಾಳಸಾಹೇಬ್ ಠಾಕ್ರೆ ಕುಟುಂಬಕ್ಕೆ ದ್ರೋಹವೆಸಗಿಸಿದೆ ಎಂಬ ಕಥನ ಬಿತ್ತಲು ಉದ್ಧವ್ ಬಣ ಯತ್ನಿಸುತ್ತಿದೆ. ಇನ್ನೊಂದೆಡೆ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಬಾಳಾ ಸಾಹೇಬ್ ಠಾಕ್ರೆಯವರ ಹಿಂದುತ್ವದ ಸಿದ್ದಾಂತಕ್ಕೆ ಉದ್ಧವ್ ಠಾಕ್ರೆ ದ್ರೋಹವೆಸಗಿದರು ಎಂದು ಶಿಂಧೆ ಬಣ ಆರೋಪಿಸುತ್ತಿದೆ. ಇಬ್ಬರಲ್ಲಿ ಜನ ಯಾರ ಮಾತಿಗೆ ಬೆಲೆ ಕೊಡುತ್ತಾರೆ ಎಂಬುದು ಮುಂದಿನ ಮಹಾಚುನಾವಣೆಯಲ್ಲಿ ತಿಳಿಯಲಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...