Homeಮುಖಪುಟಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದ ಸಿಎಂ ಶಿಂಧೆ ಬಣಕ್ಕೆ ಹಿನ್ನಡೆಯಾಗುವ ಆತಂಕದಲ್ಲಿ ಬಿಜೆಪಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿ ಇದ್ದು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಯಾರಿಯನ್ನು ಆರಂಭಿಸಿವೆ. ದೇಶದಲ್ಲಿಯೇ ಅತಿ ಹೆಚ್ಚಿನ ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದ ನಂತರದ ಎರಡನೇ ಸ್ಥಾನವನ್ನು ಹೊಂದಿರುವ (48) ಮಹಾರಾಷ್ಟ್ರದಲ್ಲಿ ಐದು ಪಕ್ಷಗಳು ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ಲೆಕ್ಕಾಚಾರದಲ್ಲಿ ತೊಡಗಿವೆ. ಇದೇ ಸಂದರ್ಭದಲ್ಲಿ ಶಿವಸೇನೆಯನ್ನು ಇಬ್ಭಾಗ ಮಾಡಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಸಿಎಂ ಆಗಿರುವ ಏಕನಾಥ್ ಶಿಂಧೆ ಬಣದೊಂದಿಗೆ ಚುನಾವಣೆ ಎದುರಿಸಬೇಕಾಗಿರುವ ಬಿಜೆಪಿ ಪಕ್ಷವು ಹಿನ್ನಡೆ ಅನುಭವಿಸುವ ಆತಂಕದಲ್ಲಿದೆ.

2019ರ ಕಳೆದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಜೊತೆಗಿನ ಮೈತ್ರಿಯೊಂದಿಗ ಚುನಾವಣೆ ಎದುರಿಸಿ 48 ಕ್ಷೇತ್ರಗಳಲ್ಲಿ 41 ಕ್ಷೇತ್ರಗಳನ್ನು ಗೆದ್ದುಕೊಳ್ಳುವಲ್ಲಿ ಸಫಲವಾಗಿದ್ದವು. ಅದರಲ್ಲಿ ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಶಿವಸೇನೆ 18 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಮತ್ತೊಂದು ಮೈತ್ರಿಕೂಟ ಎನ್‌ಸಿಪಿ 4 ಸ್ಥಾನ ಗೆದ್ದರೆ ಕಾಂಗ್ರೆಸ್ ಒಂದು ಸ್ಥಾನಕ್ಕೆ ಕುಸಿದಿತ್ತು. AIMIM 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು.

ಬಿಜೆಪಿ ಪಕ್ಷವು 2019ರಲ್ಲಿ ನೀಡಿದ ಅಭೂತಪೂರ್ವ ಯಶಸ್ಸನ್ನು ಮರುಗಳಿಸಲು ಬಯಸುತ್ತಿದೆ. ಆದರೆ ಆಗ ತನ್ನೊಂದಿಗೆ ಇದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಬ್ಭಾಗವಾಗಿದ್ದು, ಉದ್ಧವ್ ಬಣ ವಿರೋಧಿ ಮಹಾವಿಕಾಸ್ ಅಘಾಡಿ (ಎನ್‌ಸಿಪಿ, ಕಾಂಗ್ರೆಸ್, ಶಿವಸೇನೆ) ಪಾಳಯ ಸೇರಿದೆ. ಬದಲಿಗೆ ಏಕನಾಥ್ ಶಿಂಧೆಯ ಶಿವಸೇನೆ ಬಣ ಬಿಜೆಪಿ ಜೊತೆಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಹೆಚ್ಚಿನ ಮತಗಳು ಬರುವುದು ಕಷ್ಟ. ಹಾಗಾದಲ್ಲಿ ಬಿಜೆಪಿ ಗೆಲ್ಲುವುದು ಸಹ ಕಷ್ಟ ಎಂದು ಬಿಜೆಪಿ ಚಿಂತಿಸುತ್ತಿದೆ.

ಮೇ ಮಧ್ಯಭಾಗದಲ್ಲಿ ಲೋಕಸಭಾ ಚುನಾವಣೆಯ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಸಭೆ ನಡೆಸಿದರು. ಅಲ್ಲಿ ಶಿಂಧೆ ಬಣದ ಶಿವಸೇನೆಯು ಕೂಡಲೇ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಬೇಕು. ಲೋಕಸಭಾ ಚುನಾವಣೆಗೆ ತಯಾರಿ ನಡೆಸಬೇಕು. ಪಕ್ಷ ಎಲ್ಲೆಲ್ಲಿ ಪ್ರಭಾವ ಬೀರಬಹುದು ಎಂಬುದರ ಸಮೀಕ್ಷೆ ನಡೆಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ. ಇದಾರಿಂದಾಗಿ ಸಿಎಂ ಏಕನಾಥ್ ಶಿಂಧೆ ತಮ್ಮ ಪಕ್ಷದ ಮುಖಂಡರಿಗೆ ಪ್ರಚಾರ ಸಭೆಗಳನ್ನು ಏರ್ಪಡಿಸಲು ಮತ್ತು ಸರ್ಕಾರದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದ್ದಾರೆ.

ಇನ್ನೊಂದೆಡೆ ಮಹಾವಿಕಾಸ್ ಅಘಾಡಿ ಮೈತ್ರಿಕೂಟವೂ ಈಗಾಗಲೇ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸುತ್ತಿದೆ. ಪಕ್ಕದ ಕರ್ನಾಟಕದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಳಿಸಿರುವುದು ಅವರಿಗೆ ಆತ್ಮ ವಿಶ್ವಾಸ ತುಂಬಿದೆ. ಉದ್ಧವ್ ಠಾಕ್ರೆ ಬಣ ಚುನಾವಣೆಯಲ್ಲಿ ಗೆದ್ದು ಶಿಂಧೆ ಬಣದ ಎದುರು ಸೇಡು ತೀರಿಸಿಕೊಳ್ಳಲು ಯತ್ನಿಸುತ್ತಿದೆ. ಒಟ್ಟು 48 ಸೀಟುಗಳಲ್ಲಿ ಮೂರು ಪಕ್ಷಗಳು ತಲಾ 16 ಸೀಟುಗಳನ್ನು ಹಂಚಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕಳೆದ ಬಾರಿ ಬಿಜೆಪಿಯ ಹಿಂದುತ್ವ ಮತ್ತು ಶಿವಸೇನೆಯ ಪ್ರಾದೇಶಿಕ ಹಿರಿಮೆ ಕೆಲಸ ಮಾಡಿತ್ತು. ಆದರೆ ಈಗ ಶಿವಸೇನೆ ಇಬ್ಭಾಗವಾಗಿರುವುದರಿಂದ ಏಕನಾಥ್ ಶಿಂಧೆ ಬಣವು ಅಧಿಕಾರಕ್ಕಾಗಿ ಬಿಜೆಪಿ ಜೊತೆಗೆ ಕೈಜೋಡಿಸಿ ಬಾಳಸಾಹೇಬ್ ಠಾಕ್ರೆ ಕುಟುಂಬಕ್ಕೆ ದ್ರೋಹವೆಸಗಿಸಿದೆ ಎಂಬ ಕಥನ ಬಿತ್ತಲು ಉದ್ಧವ್ ಬಣ ಯತ್ನಿಸುತ್ತಿದೆ. ಇನ್ನೊಂದೆಡೆ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಬಾಳಾ ಸಾಹೇಬ್ ಠಾಕ್ರೆಯವರ ಹಿಂದುತ್ವದ ಸಿದ್ದಾಂತಕ್ಕೆ ಉದ್ಧವ್ ಠಾಕ್ರೆ ದ್ರೋಹವೆಸಗಿದರು ಎಂದು ಶಿಂಧೆ ಬಣ ಆರೋಪಿಸುತ್ತಿದೆ. ಇಬ್ಬರಲ್ಲಿ ಜನ ಯಾರ ಮಾತಿಗೆ ಬೆಲೆ ಕೊಡುತ್ತಾರೆ ಎಂಬುದು ಮುಂದಿನ ಮಹಾಚುನಾವಣೆಯಲ್ಲಿ ತಿಳಿಯಲಿದೆ.

ಇದನ್ನೂ ಓದಿ: ಸುಪ್ರೀಂ ತೀರ್ಪು ವಿರೋಧಿಸಿ ಕೇಂದ್ರ ಸುಗ್ರೀವಾಜ್ಞೆ; ಎಎಪಿ ಪರ ನಿಲ್ಲುವುದೇ ಕಾಂಗ್ರೆಸ್? ಮುಖಂಡರ ಸಭೆಗೆ ಖರ್ಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...