Homeಮುಖಪುಟಮಣಿಪುರದ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರದ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಮಣಿಪುರದ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಪಕ್ಷ ಆಗ್ರಹಿಸಿದ್ದು, ಮತದಾನದ ವೇಳೆ ಮತ ಗಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರವೆಸಗಲಾಗಿದೆ ಎಂದು ಆರೋಪಿಸಿದೆ.

“ನಾವು ಭಾರತೀಯ ಚುನಾವಣಾ ಆಯೋಗ, ಮಣಿಪುರದ ಮುಖ್ಯ ಚುನಾವಣಾ ಅಧಿಕಾರಿ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಚುನಾವಣಾ ಆಕ್ರಮದ ಕುರಿತು ದೂರು ನೀಡಿದ್ದೇವೆ” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೇಶಾಮ್ ಮೇಘಚಂದ್ರ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಒಳ ಮಣಿಪುರ ಲೋಕಸಭಾ ಕ್ಷೇತ್ರದ 36 ಮತ್ತು ಹೊರ ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ನಾವು ಆಗ್ರಹಿಸಿದ್ದೇವೆ. ಕೆಲವು ದಿನಗಳಿಂದ ಅಪರಿಚಿತ ಶಸ್ತ್ರಧಾರಿ ದುಷ್ಕರ್ಮಿಗಳು ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಮತ್ತು ಪಕ್ಷದ ಚುನಾವಣಾ ಏಜೆಂಟರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ತೌಬಲ್ ಜಿಲ್ಲೆಯ ವಾಂಗ್‌ಖೇಮ್ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಮೇಘಚಂದ್ರ ಅವರು, “ಏಜೆಂಟರು ಮತಗಟ್ಟೆಗಳ ಒಳಗೆ ಕುಳಿತುಕೊಳ್ಳಲು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರಾದ ಮತದಾರರು ಬೇರೆ ಬೇರೆ ಮತಗಟ್ಟೆಗಳಲ್ಲಿ ಮತ ಚಲಾಯಿಸಲು ಅವಕಾಶ ಇರಲಿಲ್ಲ ಎಂದು ಆರೋಪಿಸಿದ್ದಾರೆ.

ಒಳ ಮಣಿಪುರದ 36 ಮತಗಟ್ಟೆಗಳಲ್ಲಿ ಆಂಡ್ರೊ ಮತ್ತು ಯೈಸ್ಕುಲ್ ವಿಧಾನಸಭಾ ಕ್ಷೇತ್ರಗಳ ತಲಾ ಒಂದು ಬೂತ್, ಕೊಂತೌಜಮ್ ವಿಧಾನಸಭಾ ಕ್ಷೇತ್ರದ ಎರಡು, ಹೀಂಗಾಂಗ್, ಖುರೈ, ಓಯಿನಾಮ್ ಮತ್ತು ಮೊಯಿರಾಂಗ್ ವಿಧಾನಸಭಾ ಕ್ಷೇತ್ರಗಳ ತಲಾ ಮೂರು, ಕ್ಷೇತ್ರಿಗಾವ್ ವಿಧಾನಸಭಾ ಕ್ಷೇತ್ರದ ನಾಲ್ಕು, ಥೋಂಗ್ಜು ಮತ್ತು ಸೆಕ್ಮಾಯಿ ವಿಧಾನಸಭಾ ಕ್ಷೇತ್ರಗಳ ತಲಾ ಐದು ಮತಗಟ್ಟೆಗಳು ಮತ್ತು ಕೀರಾವ್ ವಿಧಾನಸಭಾ ಕ್ಷೇತ್ರದ ಆರು ಮತಗಟ್ಟೆಗಳು ಸೇರಿವೆ. ಹೊರ ಮಣಿಪುರದ 11 ಮತಗಟ್ಟೆಗಳು ಸುಗ್ನು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ ಎಂದು ಮೇಘಚಂದ್ರ ಮಾಹಿತಿ ನೀಡಿದ್ದಾರೆ.

ಮತದಾರರ ಹಕ್ಕುಗಳನ್ನು ಕಡೆಗಣಿಸಿ, ಪ್ರಜಾಪ್ರಭುತ್ವದ ಸಂಪೂರ್ಣ ಹಾಳುಗೆಡವಿರುವುದು ಚುನಾವಣೆಯಲ್ಲಿ ಬಹಿರಂಗಗೊಂಡಿದೆ. ಆಡಳಿತದಿಂದ ಇಂತಹ ಕೃತ್ಯ ದುರದೃಷ್ಟಕರ. ಜನರು ವಿರೋಧ ಪಕ್ಷವಾದ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುವಂತೆ ಎಂದು ಸಿಪಿಐ(ಎಂ) ಕಾರ್ಯದರ್ಶಿ ಕ್ಷೇತ್ರಿಮಯುಮ್ ಸಾಂತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ‘ಚುನಾವಣಾ ಬಾಂಡ್’ ಯೋಜನೆ ಬಿಜೆಪಿ ಮತ್ತೆ ಜಾರಿಗೆ ತರಲಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...