Homeಮುಖಪುಟಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

102 ಕ್ಷೇತ್ರಗಳ 16.63 ಕೋಟಿ ಮತದಾರರಿಂದ ಹಕ್ಕು ಚಲಾವಣೆ

- Advertisement -
- Advertisement -

ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ದೇಶದ 107 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಇದಕ್ಕಾಗಿ 1.87 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 35.67 ಲಕ್ಷ ಮಂದಿ ಇಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ.

ಮತದಾನವು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಅವಧಿ ಮುಕ್ತಾಯಗೊಳ್ಳುವ ಮುನ್ನ ಬಂದು ಸರತಿ ಸಾಲಿನಲ್ಲಿ ನಿಲ್ಲುವ ಮತದಾರರಿಗೆ ಮತ ಚಲಾಯಿಸಲು 60 ನಿಮಿಷಗಳ ಹೆಚ್ಚುವರಿ ಕಾಲಾವಕಾಶ ಇರಲಿದೆ. ಜೂನ್ 4ರಂದು ಫಲಿತಾಂಶ ಹೊರ ಬೀಳಲಿದೆ.

ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಕರೆದೊಯ್ಯಲು 41 ಹೆಲಿಕಾಫ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸುಮಾರು ಒಂದು ಲಕ್ಷ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇಂದು ಮತದಾನ ನಡೆಯುವ ಕ್ಷೇತ್ರಗಳ ಪೈಕಿ 8 ಕಡೆಗಳಲ್ಲಿ ಕೇಂದ್ರ ಸಚಿವರು, ಎರಡು ಕಡೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಒಂದು ಕ್ಷೇತ್ರದಲ್ಲಿ ಮಾಜಿ ರಾಜ್ಯಪಾಲೆ ಅಭ್ಯರ್ಥಿಗಳಾಗಿದ್ದಾರೆ.

ತಮಿಳುನಾಡಿನ ಎಲ್ಲಾ 39, ಉತ್ತರಾಖಂಡದ ಎಲ್ಲಾ 5, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದ ಎಲ್ಲಾ 2 ಸ್ಥಾನಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜಸ್ಥಾನದ 25 ಸ್ಥಾನಗಳಲ್ಲಿ 12, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ 6, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 5, ಅಸ್ಸಾಂನ 14 ಸ್ಥಾನಗಳಲ್ಲಿ 5, ಬಿಹಾರದ 40 ಸ್ಥಾನಗಳಲ್ಲಿ 4, ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ 1 ಮತ್ತು ಪುದುಚ್ಚೇರಿ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಲಕ್ಷದೀಪ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಈ ಬಾರಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವೆ ನೇರ ಹಣಾಹಣಿಯಿದೆ. ಬಿಜೆಪಿ ಮತ್ತೊಮ್ಮೆ ಮೋದಿ ಹೆಸರೇಳಿಕೊಂಡು ಮತ ಕೇಳಿದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಬಿಜೆಪಿ ವಿರುದ್ದ ನಿರುದ್ಯೋಗ, ಹಣದುಬ್ಬರ, ಚುನಾವಣಾ ಬಾಂಡ್ ಇತ್ಯಾದಿ ಆರೋಪಗಳನ್ನು ಮಾಡಿದೆ.

ಬಿಜೆಪಿ ಅಥವಾ ಎನ್‌ಡಿಎ ಹಿಂದಿ ಭಾಷಿಕರು ಹೆಚ್ಚಾಗಿರುವ ಉತ್ತರ ಭಾರತವನ್ನು ನೆಚ್ಚಿಕೊಂಡರೆ, ಕಾಂಗ್ರೆಸ್ ಅಥವಾ ಇಂಡಿಯಾ ಭಾಷಾ ವೈವಿದ್ಯತೆಯ ದಕ್ಷಿಣ ಭಾರತದ ಮೇಲೆ ಭರವಸೆ ಇಟ್ಟಿದೆ. ದಕ್ಷಿಣದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರಗಳಿವೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಜನ ಬೆಂಬಲವಿದೆ. ಇವೆಲ್ಲವೂ ಗೆಲುವಿಗೆ ಸಹಕಾರಿಯಾಗಲಿದೆ ಎಂಬುವುದು ಕಾಂಗ್ರೆಸ್ ವಿಶ್ವಾಸ.

ಈ ಬಾರಿಯ ಲೋಕಸಭೆ ಚುನಾವಣೆಯ ಮತದಾನ ಏಪ್ರಿಲ್ 19 ರಿಂದ ಜೂನ್ 1, 2024ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ದೇಶದಾದ್ಯಂತ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ : ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...