Homeಮುಖಪುಟಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

102 ಕ್ಷೇತ್ರಗಳ 16.63 ಕೋಟಿ ಮತದಾರರಿಂದ ಹಕ್ಕು ಚಲಾವಣೆ

- Advertisement -
- Advertisement -

ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ದೇಶದ 107 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಇದಕ್ಕಾಗಿ 1.87 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 35.67 ಲಕ್ಷ ಮಂದಿ ಇಂದು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ.

ಮತದಾನವು ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಅವಧಿ ಮುಕ್ತಾಯಗೊಳ್ಳುವ ಮುನ್ನ ಬಂದು ಸರತಿ ಸಾಲಿನಲ್ಲಿ ನಿಲ್ಲುವ ಮತದಾರರಿಗೆ ಮತ ಚಲಾಯಿಸಲು 60 ನಿಮಿಷಗಳ ಹೆಚ್ಚುವರಿ ಕಾಲಾವಕಾಶ ಇರಲಿದೆ. ಜೂನ್ 4ರಂದು ಫಲಿತಾಂಶ ಹೊರ ಬೀಳಲಿದೆ.

ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಯನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಕರೆದೊಯ್ಯಲು 41 ಹೆಲಿಕಾಫ್ಟರ್‌ಗಳು, 84 ವಿಶೇಷ ರೈಲುಗಳು ಹಾಗೂ ಸುಮಾರು ಒಂದು ಲಕ್ಷ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇಂದು ಮತದಾನ ನಡೆಯುವ ಕ್ಷೇತ್ರಗಳ ಪೈಕಿ 8 ಕಡೆಗಳಲ್ಲಿ ಕೇಂದ್ರ ಸಚಿವರು, ಎರಡು ಕಡೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಒಂದು ಕ್ಷೇತ್ರದಲ್ಲಿ ಮಾಜಿ ರಾಜ್ಯಪಾಲೆ ಅಭ್ಯರ್ಥಿಗಳಾಗಿದ್ದಾರೆ.

ತಮಿಳುನಾಡಿನ ಎಲ್ಲಾ 39, ಉತ್ತರಾಖಂಡದ ಎಲ್ಲಾ 5, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದ ಎಲ್ಲಾ 2 ಸ್ಥಾನಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜಸ್ಥಾನದ 25 ಸ್ಥಾನಗಳಲ್ಲಿ 12, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ 6, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 5, ಅಸ್ಸಾಂನ 14 ಸ್ಥಾನಗಳಲ್ಲಿ 5, ಬಿಹಾರದ 40 ಸ್ಥಾನಗಳಲ್ಲಿ 4, ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ 1 ಮತ್ತು ಪುದುಚ್ಚೇರಿ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಲಕ್ಷದೀಪ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.

ಈ ಬಾರಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವೆ ನೇರ ಹಣಾಹಣಿಯಿದೆ. ಬಿಜೆಪಿ ಮತ್ತೊಮ್ಮೆ ಮೋದಿ ಹೆಸರೇಳಿಕೊಂಡು ಮತ ಕೇಳಿದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಬಿಜೆಪಿ ವಿರುದ್ದ ನಿರುದ್ಯೋಗ, ಹಣದುಬ್ಬರ, ಚುನಾವಣಾ ಬಾಂಡ್ ಇತ್ಯಾದಿ ಆರೋಪಗಳನ್ನು ಮಾಡಿದೆ.

ಬಿಜೆಪಿ ಅಥವಾ ಎನ್‌ಡಿಎ ಹಿಂದಿ ಭಾಷಿಕರು ಹೆಚ್ಚಾಗಿರುವ ಉತ್ತರ ಭಾರತವನ್ನು ನೆಚ್ಚಿಕೊಂಡರೆ, ಕಾಂಗ್ರೆಸ್ ಅಥವಾ ಇಂಡಿಯಾ ಭಾಷಾ ವೈವಿದ್ಯತೆಯ ದಕ್ಷಿಣ ಭಾರತದ ಮೇಲೆ ಭರವಸೆ ಇಟ್ಟಿದೆ. ದಕ್ಷಿಣದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರಗಳಿವೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಜನ ಬೆಂಬಲವಿದೆ. ಇವೆಲ್ಲವೂ ಗೆಲುವಿಗೆ ಸಹಕಾರಿಯಾಗಲಿದೆ ಎಂಬುವುದು ಕಾಂಗ್ರೆಸ್ ವಿಶ್ವಾಸ.

ಈ ಬಾರಿಯ ಲೋಕಸಭೆ ಚುನಾವಣೆಯ ಮತದಾನ ಏಪ್ರಿಲ್ 19 ರಿಂದ ಜೂನ್ 1, 2024ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ದೇಶದಾದ್ಯಂತ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ : ಇವಿಎಂ-ವಿವಿಪ್ಯಾಟ್ ಎಲ್ಲಾ ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...