Homeಕರ್ನಾಟಕಲೋಕಸಭೆ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ ಯಾಕೆ?

ಲೋಕಸಭೆ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ ಯಾಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ (ಮಾ.2) ಪ್ರಕಟಿಸಿದೆ. ಮೊದಲ ಹಂತದಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ತನ್ನ ಮೈತ್ರಿ ಪಾಲುದಾರ ಜನತಾ ದಳ (ಜಾತ್ಯತೀತ) ದೊಂದಿಗೆ ಸೀಟು ಹಂಚಿಕೆ ಮಾತುಕತೆಗಳು ನಡೆಯುತ್ತಿರುವುದರಿಂದ ಕರ್ನಾಟಕದಲ್ಲಿ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಲಿದೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ನಾಯಕರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸುವ ಮೊದಲು ಕೋರ್ ಕಮಿಟಿ ಸಭೆಗಳಲ್ಲಿ ಚರ್ಚಿಸಲಾಗುವುದು. ಜೆಡಿಎಸ್ ಜೊತೆ ಸೀಟು ಹಂಚಿಕೆ ಅಂತಿಮಗೊಂಡರೆ ಮುಂದಿನ ವಾರ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿರುವುದಾಗಿ ದಿ ಸೌತ್ ಫಸ್ಟ್ ವರದಿ ಮಾಡಿದೆ.

ಹೊಸ ಮುಖಗಳಿಗೆ ಹುಡುಕಾಟ:

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಹುಡುಕಾಟ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಉದಾಸಿ, ಜಿಎಸ್ ಬಸವರಾಜು ಮತ್ತು ಅಬ್ಬಯ್ಯ ನಾರಾಯಣಸ್ವಾಮಿಯಂತಹ ಪ್ರಮುಖ ವ್ಯಕ್ತಿಗಳು ಸೇರಿದಂತೆ ಹಲವಾರು ಹಾಲಿ ಸಂಸದರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಹಾಗಾಗಿ, ಹೊಸ ಅಭ್ಯರ್ಥಿಗಳನ್ನು ಹುಡುಕುವುದು ಬಿಜೆಪಿ ಅನಿವಾರ್ಯವಾಗಿದೆ.

ಹಾವೇರಿ-ಗದಗ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಚಿತ್ರದುರ್ಗ ಸಂಸದ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಅಲ್ಲದೆ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್, ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಕೂಡ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ 2024ರ ಚುನಾವಣೆಗೆ ಕರ್ನಾಟಕದಿಂದ ಸುಮಾರು ಎಂಟು ಹೊಸ ಮುಖಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಇದರಿಂದ ಬಹುತೇಕ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಸಿಗುವುದು ಖಚಿತ ಎನ್ನಬಹುದು ಎಂದು ಸೌತ್ ಫಸ್ಟ್ ಹೇಳಿದೆ.

ಗಮನಾರ್ಹ ಬೆಳವಣಿಗೆಯಲ್ಲಿ, ಕರ್ನಾಟಕ ಬಿಜೆಪಿಯ ಹಿರಿಯ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ವಿ ಸೋಮಣ್ಣ ಒಂದಾಗಿದ್ದಾರೆ. ಚುನಾವಣೆಗೆ ಮುಂಚಿತವಾಗಿ ಇಬ್ಬರು ನಾಯಕರ ಅಸಮಧಾನ ಕೊನೆಗೊಂಡಿದೆ. ಇಬ್ಬರು ನಾಯಕರ ನಡುವಿನ ಸಭೆ ಯಶಸ್ವಿಯಾಗಿದೆ. ಈ ಒಗ್ಗಟ್ಟು ಬಿಜೆಪಿಗೆ ಚುನಾವಣೆಯಲ್ಲಿ ಲಾಭ ತಂದು ಕೊಡಲಿದೆ ಎಂದು ಸೌತ್ ಫಸ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ : ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಕೈ ತಪ್ಪಿದ ಟಿಕೆಟ್: ಮಂಗಳೂರಿನ ಬಿಜೆಪಿ ಕಾರ್ಯಕ್ರಮ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...