Homeಕರ್ನಾಟಕಲೋಕಸಭೆ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ ಯಾಕೆ?

ಲೋಕಸಭೆ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರಿಲ್ಲ ಯಾಕೆ?

- Advertisement -
- Advertisement -

ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ (ಮಾ.2) ಪ್ರಕಟಿಸಿದೆ. ಮೊದಲ ಹಂತದಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ತನ್ನ ಮೈತ್ರಿ ಪಾಲುದಾರ ಜನತಾ ದಳ (ಜಾತ್ಯತೀತ) ದೊಂದಿಗೆ ಸೀಟು ಹಂಚಿಕೆ ಮಾತುಕತೆಗಳು ನಡೆಯುತ್ತಿರುವುದರಿಂದ ಕರ್ನಾಟಕದಲ್ಲಿ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಲಿದೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ನಾಯಕರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸುವ ಮೊದಲು ಕೋರ್ ಕಮಿಟಿ ಸಭೆಗಳಲ್ಲಿ ಚರ್ಚಿಸಲಾಗುವುದು. ಜೆಡಿಎಸ್ ಜೊತೆ ಸೀಟು ಹಂಚಿಕೆ ಅಂತಿಮಗೊಂಡರೆ ಮುಂದಿನ ವಾರ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿರುವುದಾಗಿ ದಿ ಸೌತ್ ಫಸ್ಟ್ ವರದಿ ಮಾಡಿದೆ.

ಹೊಸ ಮುಖಗಳಿಗೆ ಹುಡುಕಾಟ:

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಹೊಸ ಮುಖಗಳಿಗೆ ಹುಡುಕಾಟ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಉದಾಸಿ, ಜಿಎಸ್ ಬಸವರಾಜು ಮತ್ತು ಅಬ್ಬಯ್ಯ ನಾರಾಯಣಸ್ವಾಮಿಯಂತಹ ಪ್ರಮುಖ ವ್ಯಕ್ತಿಗಳು ಸೇರಿದಂತೆ ಹಲವಾರು ಹಾಲಿ ಸಂಸದರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಹಾಗಾಗಿ, ಹೊಸ ಅಭ್ಯರ್ಥಿಗಳನ್ನು ಹುಡುಕುವುದು ಬಿಜೆಪಿ ಅನಿವಾರ್ಯವಾಗಿದೆ.

ಹಾವೇರಿ-ಗದಗ ಸಂಸದ ಶಿವಕುಮಾರ್ ಉದಾಸಿ, ತುಮಕೂರು ಸಂಸದ ಜಿ.ಎಸ್.ಬಸವರಾಜು, ಚಿತ್ರದುರ್ಗ ಸಂಸದ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಅಲ್ಲದೆ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್, ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಕೂಡ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ 2024ರ ಚುನಾವಣೆಗೆ ಕರ್ನಾಟಕದಿಂದ ಸುಮಾರು ಎಂಟು ಹೊಸ ಮುಖಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಇದರಿಂದ ಬಹುತೇಕ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಸಿಗುವುದು ಖಚಿತ ಎನ್ನಬಹುದು ಎಂದು ಸೌತ್ ಫಸ್ಟ್ ಹೇಳಿದೆ.

ಗಮನಾರ್ಹ ಬೆಳವಣಿಗೆಯಲ್ಲಿ, ಕರ್ನಾಟಕ ಬಿಜೆಪಿಯ ಹಿರಿಯ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ವಿ ಸೋಮಣ್ಣ ಒಂದಾಗಿದ್ದಾರೆ. ಚುನಾವಣೆಗೆ ಮುಂಚಿತವಾಗಿ ಇಬ್ಬರು ನಾಯಕರ ಅಸಮಧಾನ ಕೊನೆಗೊಂಡಿದೆ. ಇಬ್ಬರು ನಾಯಕರ ನಡುವಿನ ಸಭೆ ಯಶಸ್ವಿಯಾಗಿದೆ. ಈ ಒಗ್ಗಟ್ಟು ಬಿಜೆಪಿಗೆ ಚುನಾವಣೆಯಲ್ಲಿ ಲಾಭ ತಂದು ಕೊಡಲಿದೆ ಎಂದು ಸೌತ್ ಫಸ್ಟ್ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ : ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಕೈ ತಪ್ಪಿದ ಟಿಕೆಟ್: ಮಂಗಳೂರಿನ ಬಿಜೆಪಿ ಕಾರ್ಯಕ್ರಮ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...