Homeಮುಖಪುಟಲೋಕಸಭೆಯಲ್ಲಿ 'ಅಗೌರವ'ದ ಹೇಳಿಕೆ - ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

ಲೋಕಸಭೆಯಲ್ಲಿ ‘ಅಗೌರವ’ದ ಹೇಳಿಕೆ – ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಎನ್‌ಡಿಎ ಸರ್ಕಾರವು ಸೊರೊಸ್‌ ಅವರನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಮಣಿಪುರ ಇಡೀ ಮಾನವೀಯ ಬಿಕ್ಕಟ್ಟಿನಲ್ಲಿದೆ. ರಾಜ್ಯದಾದ್ಯಂತ ಜನರು ಭಯ ಮತ್ತು ಅನಿಶ್ಚಿತತೆಯಿಂದ ಬದುಕುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮೇ 2023 ರ ವೇಳೆ ರಾಜ್ಯದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಪ್ರಾರಂಭವಾದಾಗಿನಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, 22 ನವೆಂಬರ್‌ನಿಂದ ಕನಿಷ್ಠ 7 ಜನರು ಕೊಲ್ಲಲ್ಪಟ್ಟಿದ್ದಾರೆ.

ಮಣಿಪುರದ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿಭಾಯಿಸಲಾಗುತ್ತಿದೆ ಎಂದು ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ. “ಅವರು ಇದಕ್ಕೆ [ಕಾಂಗ್ರೆಸ್] ಪ್ರತಿಕ್ರಿಯಿಸಬೇಕು. ಜಾರ್ಜ್ ಸೊರೊಸ್ ಮತ್ತು ಈ ಎಲ್ಲಾ ಆಂತರಿಕ ಗೊಂದಲಗಳ ನಡುವೆ ಏನು ಸಂಬಂಧವಿದೆ ಎಂಬುದನ್ನು ರಾಷ್ಟ್ರಕ್ಕೆ ತಿಳಿಸಬೇಕು. ದೇಶದಲ್ಲಿನ ಆಂತರಿಕ ಗೊಂದಲಗಳಿಗೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದ್ದು, ಅವರು ವಿದೇಶಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಪರಿಸ್ಥಿತಿಗೆ ಕಾಂಗ್ರೆಸ್ “ಮಾತ್ರ ಹೊಣೆ” ಎಂದು ಗೋಯಲ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಅವರಿಗೆ ಏನು ಸಂಬಂಧವಿದೆ?… ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಮತ್ತು ಜಾರ್ಜ್ ಸೊರೊಸ್ ಅವರಂತಹ ಅನುದಾನಿತ ಸಂಸ್ಥೆಗಳು ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ಹೇಳಿಕೆ ವಿರುದ್ಧ ಗುರುವಾರ ಬಿರ್ಲಾ ಅವರಿಗೆ ನೀಡಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಟಾಗೋರ್ ಅವರು, ಸಚಿವ ಗೊಗೋಯ್‌ ಅವರ ಟೀಕೆಗಳನ್ನು ಉಲ್ಲೇಖಿಸಿದ್ದಾರೆ. “ಸಚಿವರು ಸದನದಲ್ಲಿ ಇಂತಹ ಅವಹೇಳನಕಾರಿ ಉಲ್ಲೇಖಗಳನ್ನು ಮಾಡಲು ಅವಕಾಶ ನೀಡಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ಹೇಳಿದರು. ಸಚಿವರ ಈ ಟೀಕೆಗಳು “ಮಾನಹಾನಿಕರ ಮತ್ತು ಅಮಾನವೀಯ” ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಇದನ್ನೂ ಓದಿ: ‘ಒಬ್ಬ ವ್ಯಕ್ತಿಗಾಗಿ, 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...