Homeಮುಖಪುಟಲೋಕಸಭೆ ಚುನಾವಣೆ: 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

ಲೋಕಸಭೆ ಚುನಾವಣೆ: 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ

- Advertisement -
- Advertisement -

ಬಹು ನಿರೀಕ್ಷೀತ ಲೋಕಸಭೆ ಚುನಾವಣೆಯ ಅಧಿಕೃತ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ವಾರಣಾಸಿಯಿಂದ ಸ್ಪರ್ಧಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಗುಜರಾತ್‌ನ ಗಾಂಧಿ ನಗರದಿಂದ ಸ್ಪರ್ಧಿಸಲಿರುವ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖರ ಹೆಸರು ಪಟ್ಟಿಯಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ವಾರಣಾಸಿಯಿಂದ ಕಣಕ್ಕಿಳಿಯಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಗುಜರಾತ್‌ನ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ. ಇನ್ನುಳಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಕ್ನೋದಿಂದ ಸ್ಪರ್ಧಿಸಲಿದ್ದು, 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಗೆಲುವು ಸಾಧಿಸಿದ್ದ ಉತ್ತರ ಪ್ರದೇಶದ ಅಮೇಥಿಯಿಂದ ಸಚಿವೆ ಸ್ಮೃತಿ ಇರಾನಿ ಕಣಕ್ಕಿಳಿಯಲಿದ್ದಾರೆ.

ಮೊದಲ ಪಟ್ಟಿಯಲ್ಲಿ 34 ಹಾಲಿ ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರಿದೆ. ಒಟ್ಟು 28 ಮಹಿಳೆಯರು, 50 ವರ್ಷದೊಳಗಿನ 47 ನಾಯಕರು ಮತ್ತು ಒಬಿಸಿ ಸಮುದಾಯದ 57 ಮಂದಿಗೆ ಮೊದಲ ಹಂತದಲ್ಲಿ ಟಿಕೆಟ್ ನೀಡಲಾಗಿದೆ. 195 ಅಭ್ಯರ್ಥಿಗಳ ಪೈಕಿ ಪ್ರಮುಖ ರಾಜ್ಯವಾದ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20 ಮತ್ತು ದೆಹಲಿಯ ಐದು ಮಂದಿ ಇದ್ದಾರೆ.

ಈ ಹಿಂದೆ ರಾಜ್ಯಸಭೆಯಿಂದ ಆಯ್ಕೆಯಾಗಿದ್ದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಈ ಬಾರಿ ಗುಜರಾತ್‌ನ ಪೋರಬಂದರ್‌ನಿಂದ ಸ್ಪರ್ಧಿಸಲಿದ್ದಾರೆ. ಕೇರಳದ ತಿರುವನಂತಪುರಂನಿಂದ ಮತ್ತೊಬ್ಬ ರಾಜ್ಯಸಭಾ ಸದಸ್ಯ ಹಾಗೂ ಸಚಿವ ರಾಜೀವ್ ಚಂದ್ರಶೇಖರ್ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್‌ ನಾಯಕ ಶಶಿ ತರೂರ್ ಈ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರು ಮತ್ತೊಮ್ಮೆ ಇಲ್ಲಿಂದ ಸ್ಪರ್ಧಿಸುವುದು ಬಹುತೇಖ ಖಚಿತವಾಗಿದ್ದು, ಹಾಗಾಗಿ, ಕುತೂಹಲಕಾರಿ ಸ್ಪರ್ಧೆ ನಿರೀಕ್ಷಿಸಲಾಗಿದೆ.

ಇತರ ಸಚಿವರ ಪೈಕಿ, ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರದೇಶದ ಗುನಾದಿಂದ ಸ್ಪರ್ಧಿಸಲಿದ್ದಾರೆ ಮತ್ತು ರಾಜ್ಯಸಭಾ ಸಂಸದ ಭೂಪೇಂದರ್ ಯಾದವ್ ರಾಜಸ್ಥಾನದ ಆಳ್ವಾರ್‌ನಿಂದ ಕಣಕ್ಕಿಳಿಯಲಿದ್ದಾರೆ.

ಬಿಜೆಪಿಯ ಅದ್ಭುತ ಗೆಲುವಿನ ಹೊರತಾಗಿಯೂ ಮಧ್ಯ ಪ್ರದೇಶದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಮೂಲಕ ಅವರು ರಾಷ್ಟ್ರ ಮಟ್ಟದ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ : ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...