Homeಮುಖಪುಟಲೋಕಸಭೆ ಫಲಿತಾಂಶ 'ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ': ಖರ್ಗೆ

ಲೋಕಸಭೆ ಫಲಿತಾಂಶ ‘ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ’: ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಜನಾದೇಶವು ವಿಭಜನೆ ಮತ್ತು ದ್ವೇಷ ರಾಜಕೀಯದ ‘ನಿರ್ಣಾಯಕ ನಿರಾಕರಣೆ’. ಇಂಡಿಯಾ ಒಕ್ಕೂಟ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ” ಕಾಂಗ್ರೆಸ್ ಮತ್ತೆ ಪುಟಿದೇಳುತ್ತಿರುವ ಸಂದರ್ಭದ ಕೆಲ ರಾಜ್ಯಗಳಲ್ಲಿ ತನ್ನ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲಿ ಸ್ವಲ್ಪ ಸಮಯ ಬೇಕಾಗಬಹುದು ಎಂದಿದ್ದಾರೆ.

“ನಾವು ಈ ಹಿಂದೆ ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿಯೂ ನಮ್ಮ ಸಾಧನೆ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ರಾಜ್ಯಗಳ ಬಗ್ಗೆ ಪ್ರತ್ಯೇಕ ಚರ್ಚೆ ಶೀಘ್ರದಲ್ಲೇ ನಡೆಸಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ ಪರ ಒಲವು ಹೊಂದಿರುವ ರಾಜ್ಯಗಳಲ್ಲಿ ನಮಗೆ ಇನ್ನೂ ಅವಕಾಶವಿದೆ. ಈ ಅವಕಾಶಗಳನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸದೆ, ನಮ್ಮ ಜನರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕು. ಈ ಕಾರ್ಯಯವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಪಕ್ಷ ಅಧಿಕಾರದಲ್ಲಿದ್ದರೂ, ಇಲ್ಲದಿದ್ದರೂ ಜನರ ನಡುವೆ 365 ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ ನಾಯಕರು ಮತ್ತು ಕಾರ್ಯಕರ್ತರ ಇಚ್ಛಾಶಕ್ತಿ ಮತ್ತು ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಅಭಿನಂದಿಸಿದೆ.

“ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಕಳೆದ 10 ವರ್ಷಗಳ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಮಣಿಪುರದ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲೂ ಪಕ್ಷ ಸ್ಥಾನಗಳನ್ನು ಪಡೆದುಕೊಂಡಿದೆ” ಎಂದಿದ್ದಾರೆ.

“ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇವೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಸಮಾಜದ ಎಲ್ಲಾ ವರ್ಗಗಳ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಲ್ಲದೆ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವಿರುವ ಸ್ಥಾನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಾನಗಳಲ್ಲಿಯೂ ಪಕ್ಷವು ಹೆಚ್ಚಳ ಕಂಡಿದೆ” ಎಂದು ಹೇಳಿದ್ದಾರೆ

ನಗರ ಪ್ರದೇಶಗಳಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ತೋರಿಸಬೇಕಿದೆ. ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆಯಾ ರಾಜ್ಯಗಳಲ್ಲಿ ಪಕ್ಷಗಳು ತನ್ನ ಶಕ್ತಿ ತೋರಿಸಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳಿಗೂ ನೆರವಾಗಿದೆ. ನಾವು ಚುನಾವಣಾ ಪ್ರಚಾರದ ಸಂದರ್ಭ ಪ್ರಸ್ತಾಪಿಸಿದ ವಿಷಯಗಳು ಭಾರತದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ನಾವು ಸಂಸತ್ತಿನಲ್ಲಿ ಮತ್ತು ಹೊರಗೆ ಆ ವಿಷಯಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸಬೇಕು ಎಂದಿದ್ದಾರೆ.

ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಪಕ್ಷದ ಹಿರಿಯ ನಾಯಕರು ಮತ್ತು ಸಿಡಬ್ಲ್ಯೂಸಿ ಸದಸ್ಯರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಿ ಸಂಘಟನೆ ಕ್ರಮಗಳನ್ನು ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು, ಇತರ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂದು (ಜೂನ್‌ 8) ಸಂಜೆ 5.30ಕ್ಕೆ ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ.

ಇದನ್ನೂ ಓದಿ : ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...