Homeಮುಖಪುಟಲೋಕಸಭೆ ಫಲಿತಾಂಶ 'ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ': ಖರ್ಗೆ

ಲೋಕಸಭೆ ಫಲಿತಾಂಶ ‘ವಿಭಜನೆ, ದ್ವೇಷ ರಾಜಕಾರಣದ ನಿರ್ಣಾಯಕ ನಿರಾಕರಣೆ’: ಖರ್ಗೆ

- Advertisement -
- Advertisement -

ಲೋಕಸಭೆ ಚುನಾವಣೆಯ ಜನಾದೇಶವು ವಿಭಜನೆ ಮತ್ತು ದ್ವೇಷ ರಾಜಕೀಯದ ‘ನಿರ್ಣಾಯಕ ನಿರಾಕರಣೆ’. ಇಂಡಿಯಾ ಒಕ್ಕೂಟ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ” ಕಾಂಗ್ರೆಸ್ ಮತ್ತೆ ಪುಟಿದೇಳುತ್ತಿರುವ ಸಂದರ್ಭದ ಕೆಲ ರಾಜ್ಯಗಳಲ್ಲಿ ತನ್ನ ಸಾಮರ್ಥ್ಯ ಮತ್ತು ನಿರೀಕ್ಷೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿಲ್ಲ. ಅಲ್ಲಿ ಸ್ವಲ್ಪ ಸಮಯ ಬೇಕಾಗಬಹುದು ಎಂದಿದ್ದಾರೆ.

“ನಾವು ಈ ಹಿಂದೆ ವಿಧಾನಸಭಾ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿಯೂ ನಮ್ಮ ಸಾಧನೆ ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ರಾಜ್ಯಗಳ ಬಗ್ಗೆ ಪ್ರತ್ಯೇಕ ಚರ್ಚೆ ಶೀಘ್ರದಲ್ಲೇ ನಡೆಸಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ ಪರ ಒಲವು ಹೊಂದಿರುವ ರಾಜ್ಯಗಳಲ್ಲಿ ನಮಗೆ ಇನ್ನೂ ಅವಕಾಶವಿದೆ. ಈ ಅವಕಾಶಗಳನ್ನು ನಾವು ನಮ್ಮ ಸ್ವಂತ ಲಾಭಕ್ಕಾಗಿ ಬಳಸದೆ, ನಮ್ಮ ಜನರ ಅನುಕೂಲಕ್ಕಾಗಿ ಬಳಸಿಕೊಳ್ಳಬೇಕು. ಈ ಕಾರ್ಯಯವನ್ನು ಶೀಘ್ರದಲ್ಲೇ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಪಕ್ಷ ಅಧಿಕಾರದಲ್ಲಿದ್ದರೂ, ಇಲ್ಲದಿದ್ದರೂ ಜನರ ನಡುವೆ 365 ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿದೆ” ಎಂದು ಖರ್ಗೆ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡಿದ ನಾಯಕರು ಮತ್ತು ಕಾರ್ಯಕರ್ತರ ಇಚ್ಛಾಶಕ್ತಿ ಮತ್ತು ಸಂಕಲ್ಪವನ್ನು ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ ಅಭಿನಂದಿಸಿದೆ.

“ಆಡಳಿತ ಪಕ್ಷದ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ಜನರು ಧ್ವನಿ ಎತ್ತಿದ್ದಾರೆ. ಕಳೆದ 10 ವರ್ಷಗಳ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ನಾವು ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳು ಮತ್ತು ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಮಣಿಪುರದ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲೂ ಪಕ್ಷ ಸ್ಥಾನಗಳನ್ನು ಪಡೆದುಕೊಂಡಿದೆ” ಎಂದಿದ್ದಾರೆ.

“ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದೇವೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಸಮಾಜದ ಎಲ್ಲಾ ವರ್ಗಗಳ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದಲ್ಲದೆ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವಿರುವ ಸ್ಥಾನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಾನಗಳಲ್ಲಿಯೂ ಪಕ್ಷವು ಹೆಚ್ಚಳ ಕಂಡಿದೆ” ಎಂದು ಹೇಳಿದ್ದಾರೆ

ನಗರ ಪ್ರದೇಶಗಳಲ್ಲೂ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ತೋರಿಸಬೇಕಿದೆ. ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ಆಯಾ ರಾಜ್ಯಗಳಲ್ಲಿ ಪಕ್ಷಗಳು ತನ್ನ ಶಕ್ತಿ ತೋರಿಸಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳಿಗೂ ನೆರವಾಗಿದೆ. ನಾವು ಚುನಾವಣಾ ಪ್ರಚಾರದ ಸಂದರ್ಭ ಪ್ರಸ್ತಾಪಿಸಿದ ವಿಷಯಗಳು ಭಾರತದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ನಾವು ಸಂಸತ್ತಿನಲ್ಲಿ ಮತ್ತು ಹೊರಗೆ ಆ ವಿಷಯಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರಿಸಬೇಕು ಎಂದಿದ್ದಾರೆ.

ದೆಹಲಿಯ ಅಶೋಕ ಹೋಟೆಲ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಪಕ್ಷದ ಹಿರಿಯ ನಾಯಕರು ಮತ್ತು ಸಿಡಬ್ಲ್ಯೂಸಿ ಸದಸ್ಯರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಿ ಸಂಘಟನೆ ಕ್ರಮಗಳನ್ನು ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು, ಇತರ ನಾಯಕರು ಚರ್ಚೆಯಲ್ಲಿ ಭಾಗವಹಿಸಿದ್ದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಇಂದು (ಜೂನ್‌ 8) ಸಂಜೆ 5.30ಕ್ಕೆ ಲೋಕಸಭೆ ಮತ್ತು ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಲಿದೆ.

ಇದನ್ನೂ ಓದಿ : ಬಿಜೆಪಿ ಜೊತೆ ಅಧಿಕಾರಕ್ಕೇರಿದರೂ ಮುಸ್ಲಿಂ ವಿರೋಧಿ ನಿಲುವು ಬೆಂಬಲಿಸುವುದಿಲ್ಲ: ಜೆಡಿಯು ವಕ್ತಾರ ಕೆಸಿ ತ್ಯಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...