Homeಮುಖಪುಟಯೆಚೂರಿ, ದೇವರಾಜನ್ ಭಾಷಣದ 'ಸರ್ವಾಧಿಕಾರಿ-ಮುಸ್ಲಿಂ' ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

ಯೆಚೂರಿ, ದೇವರಾಜನ್ ಭಾಷಣದ ‘ಸರ್ವಾಧಿಕಾರಿ-ಮುಸ್ಲಿಂ’ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

- Advertisement -
- Advertisement -

ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನ (ಡಿಡಿ) ವಿರೋಧ ಪಕ್ಷದ ನಾಯಕರ ಭಾಷಣಗಳನ್ನು ಪ್ರಸಾರಕ್ಕೂ ಮುನ್ನ ಸೆನ್ಸಾರ್ ಮಾಡಿವೆ ಎಂದು ವರದಿಯಾಗಿದೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ “ಕೋಮುವಾದ, ಸರ್ವಾಧಿಕಾರಿ ಆಡಳಿತ”, “ಕಠಿಣ ಕಾನೂನುಗಳು” ಎಂಬ ಪದಗುಚ್ಛಗಳನ್ನು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ (ಎಐಎಫ್‌ಬಿ) ನಾಯಕ ಜಿ ದೇವರಾಜನ್ ಅವರು ಬಳಸಿದ್ದ “ಮುಸ್ಲಿಮರು” ಎಂಬ ಪದವನ್ನು ಸೆನ್ಸಾರ್ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ.

ಚುನಾವಣಾ ಚಿಹ್ನೆಗಳ (ಮೀಸಲು ಮತ್ತು ಹಂಚಿಕೆ) ನಿಬಂಧನೆಗಳ ಆದೇಶ 1968ರಡಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 59 ರಾಜ್ಯ ಪಕ್ಷಗಳು ಚುನಾವಣಾ ಪ್ರಚಾರದ ಸುದ್ದಿ ಪ್ರಸಾರದ ಅರ್ಹತೆ ಹೊಂದಿವೆ. ಈ ಪಕ್ಷಗಳ ರಾಷ್ಟ್ರ ಹಾಗೂ ರಾಜ್ಯ ಪ್ರತಿನಿಧಿಗಳ ಚುನಾವಣಾ ಪ್ರಚಾರದ ಭಾಷಣವನ್ನು ಪ್ರಸಾರ ಮಾಡಲು ಅನುಮತಿಸಲಾಗಿರುವುದನ್ನು ಏಪ್ರಿಲ್‌ನಲ್ಲಿ ಹೊರಡಿಸಿರುವ ಚುನಾವಣಾ ಆಯೋಗದ ಆದೇಶದಲ್ಲಿ ತಿಳಿಸಲಾಗಿತ್ತು.

ಪ್ರಸಾರ ಭಾರತಿಯ ಅಧಿಕಾರಿಯೊಬ್ಬರು ಸೆನ್ಸಾರ್ ಆದೇಶವನ್ನು ಸಮರ್ಥಿಸಿಕೊಂಡಿದ್ದು, ಎಐಆರ್ ಮತ್ತು ಡಿಡಿ ಎರಡೂ ಸಂಸ್ಥೆಗಳು ಚುನಾವಣಾ ಆಯೋಗ ನಿಗದಿಪಡಿಸಿದ ‘ನಡವಳಿಕೆ ನಿಯಮಗಳನ್ನು’ ಅನುಸರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ರಾಜಕೀಯ ನಾಯಕರ ಭಾಷಣದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಎಂದು ಅವರು ಹೇಳಿದ್ದು, ಮುಖ್ಯಮಂತ್ರಿಗಳ ಪಠ್ಯಗಳನ್ನು ಸಹ ಸರಿಪಡಿಸಿದ ನಿದರ್ಶನಗಳಿವೆ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೀತಾರಾಮ್ ಯೆಚೂರಿ, “ನನ್ನ ಭಾಷಣದ ಹಿಂದಿ ಆವೃತ್ತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇಂಗ್ಲಿಷ್ ತರ್ಜುಮೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.

ಜಿ ದೇವರಾಜನ್‌ ಮಾತನಾಡಿ, “ನಾನು ನನ್ನ ಭಾಷಣದಲ್ಲಿ ಸಿಎಎಯಿಂದ ಮುಸ್ಲಿಮರಿಗೆ ಆಗುತ್ತಿರುವ ತಾರತಮ್ಯಗಳ ಬಗ್ಗೆ ಉಲ್ಲೇಖಿಸಿದ್ದೆ. ಅವರು ‘ಮುಸ್ಲಿಂ’ ಪದವನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ನಾನು ಸಿಎಎ ಕಾನೂನಿನಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರದ ಮಾಧ್ಯಮಗಳಿಗೆ ಮನವರಿಕೆ ಮಾಡಿದರೂ, ಅವರು ಆ ಪದವನ್ನು ಉಳಿಸಿಕೊಳ್ಳದೆ ಅಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೂರದರ್ಶನದ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಸೀತಾರಾಮ್ ಯೆಚೂರಿ ಅವರು ಸೆನ್ಸಾರ್ ಅನ್ನು ಪ್ರತಿಭಟಿಸಿದ್ದಾರೆ. ಭಾಷಣದಿಂದ ನಿರ್ದಿಷ್ಟ ಪದಗಳನ್ನು ಅಳಿಸುವುದು ಭಿನ್ನಾಭಿಪ್ರಾಯದ ಹಕ್ಕಿನ ನಿರಾಕರಣೆಯಾಗಿದೆ ಎಂದು ಯೆಚೂರಿ ಹೇಳಿದ್ದಾರೆ. ಎಐಅಆರ್‌ಗೂ ಅವರು ಪತ್ರ ಬರೆದಿದ್ದಾರೆ ಎಂದು ವರದಿ ಹೇಳಿದೆ.

ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭಾಷಣಗಳ ಉಚಿತ ಪ್ರಸಾರ ಯೋಜನೆಯನ್ನು ಜನವರಿ 1998ರಲ್ಲಿ ಪರಿಚಯಿಸಲಾಗಿದೆ. ಈ ಮೂಲಕ ಚುನಾವಣೆಯ ಸಂದರ್ಭದಲ್ಲಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಸಮಾನವಾಗಿ ಬಳಸುವ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...