ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು (ಮಾ.21) ಬಿಡುಗಡೆ ಮಾಡಿದೆ.
ಒಟ್ಟು 9 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ತಮಿಳುನಾಡನ್ನು ಮಾತ್ರ ಒಳಗೊಂಡಿದೆ. ತೆಲಂಗಾಣದ ರಾಜ್ಯಪಾಲೆ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ತಮಿಳಿಸೈ ಸೌಂದರರಾಜನ್, ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೆಸರು ಪಟ್ಟಿಯಲ್ಲಿದೆ.
ತಮಿಳಿಸೈ ಸೌಂದರರಾಜನ್ ಅವರಿಗೆ ಚೆನ್ನೈ ದಕ್ಷಿಣದ ಟಿಕೆಟ್ ನೀಡಲಾಗಿದ್ದು, ನೀಲಗಿರಿಯಿಂದ ಕೇಂದ್ರ ಸಚಿವ ಎಲ್ ಮುರುಗನ್, ಕೊಯಮತ್ತೂರಿನಿಂದ ಕೆ ಅಣ್ಣಾಮಲೈ ಮತ್ತು ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ.
The Central Election Committee of the Bharatiya Janata Party has decided the following names for the ensuing General Elections to the Lok Sabha. Here is the third list. pic.twitter.com/5beaatODJh
— BJP (@BJP4India) March 21, 2024
ಚೆನ್ನೈ ಸೆಂಟ್ರಲ್ನಿಂದ ವಿನೋಜ್ ಪಿ ಸೆಲ್ವಂ, ವೆಲ್ಲೂರಿನಿಂದ ಎಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್ ಮತ್ತು ತಿರುನಲ್ವೇಲಿಯಿಂದ ನೈನಾರ್ ನಾಗೇಂದ್ರನ್ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.
ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ.
ಬಿಜೆಪಿ ಪ್ರಕಟಿಸಿದ್ದ ಎರಡನೇ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರಿತ್ತು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಮನೋಹರ್ ಲಾಲ್ ಖಟ್ಟರ್, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿತ್ತು.
ಬಿಜೆಪಿ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಎರಡನೇ ಪಟ್ಟಿಯಲ್ಲಿ 72 ಮತ್ತು ಮೂರನೇ ಪಟ್ಟಿ 9 ಸೇರಿ 276 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಇದನ್ನೂ ಓದಿ: ‘ರಾಜಕೀಯ ವಿರೋಧಿಗಳಷ್ಟೇ ಅಲ್ಲ, ಅವರು ಮನುಕುಲದ ಶತ್ರುಗಳು..’; ಬಿಜೆಪಿ ವಿರುದ್ಧ ಸ್ಟಾಲಿನ್ ಆಕ್ರೋಶ