Homeಮುಖಪುಟಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

- Advertisement -
- Advertisement -

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು.

ಅಮಾನತು ವಾಪಸ್ ಪಡೆಯುವ ವೇಳೆ, ಸದನದ ಒಳಗೆ ಅಥವಾ ಸಂಸತ್ತಿನ ಸಂಕೀರ್ಣದಲ್ಲಿ ಯಾವುದೇ ರೀತಿಯ ಫಲಕಗಳು, ಪೋಸ್ಟರ್‌ಗಳು, ಫೋಟೋಗಳು ಅಥವಾ ಕೃತಕ ಬುದ್ಧಿಮತ್ತೆಯಿಂದ ರಚಿತವಾದ ಚಿತ್ರಗಳನ್ನು ಪ್ರದರ್ಶಿಸಬಾರದು ಎಂದು ಸ್ಪೀಕರ್ ಒತ್ತಿ ಹೇಳಿದರು.

ಎಂಟು ವಿರೋಧ ಪಕ್ಷದ ಸಂಸದರ ಅಮಾನತು ಮರು ಪರಿಶೀಲಿಸುವಂತೆ ಕಾಂಗ್ರೆಸ್ ಸದಸ್ಯ ಕೆ. ಸುರೇಶ್ ಸದನಕ್ಕೆ ಮನವಿ ಮಾಡಿದ್ದರು. ಸದನದಲ್ಲಿ ಏನೇ ನಡೆದಿದ್ದರೂ ಅದು ವಿಷಾದನೀಯ. ಸದನದ ಸುಗಮ ಕಾರ್ಯನಿರ್ವಹಣೆಗೆ ತಮ್ಮ ಪಕ್ಷ ಸಹಕರಿಸಲು ಸಿದ್ಧವಾಗಿದೆ ಎಂದರು.

ಹಲವು ವಿಪಕ್ಷ ಸಂಸದ ಮನವಿಗಳ ಹಿನ್ನೆಲೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನದ ಸುಗಮ ಕಾರ್ಯನಿರ್ವಹಣೆಗೆ ‘ಲಕ್ಷ್ಮಣ ರೇಖೆ’ಯನ್ನು ಎಳೆಯುವ ಅವಶ್ಯಕತೆಯಿದೆ ಎಂದು ಹೇಳಿದರು. ಇದನ್ನು ಆಡಳಿತ ಮತ್ತು ವಿರೋಧ ಪಕ್ಷಗಳು ಒಪ್ಪಿಕೊಂಡವು.

ಸದನದಲ್ಲಿ ಅಥವಾ ಸಂಸತ್ತಿನ ಸಂಕೀರ್ಣದ ಒಳಗೆ ಯಾವುದೇ ಫಲಕಗಳು, ಪೋಸ್ಟರ್‌ಗಳು, ಫೋಟೋಗಳು ಅಥವಾ ಕೃತಕ ಬುದ್ಧಿಮತ್ತೆ (ಎಐ) ರಚಿತ ಚಿತ್ರಗಳನ್ನು ಪ್ರದರ್ಶಿಸದಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದು ಸ್ಪೀಕರ್ ಬಿರ್ಲಾ ಹೇಳಿದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಬೇಕು ಮತ್ತು ಎಲ್ಲರೂ ಸಹಕರಿಸಬೇಕು ಎಂಬುವುದು ಎಲ್ಲರ ಅಭಿಪ್ರಾಯವಾಗಿದೆ ಎಂದರು.

ನಂತರ ರಿಜಿಜು ಅವರು ಏಳು ಕಾಂಗ್ರೆಸ್ ಸಂಸದರು ಮತ್ತು ಒಬ್ಬರು ಸಿಪಿಐ-ಎಂ ಸಂಸದ ಅಮಾನತು ರದ್ದುಗೊಳಿಸುವ ನಿರ್ಣಯವನ್ನು ಮಂಡಿಸಿದರು, ಅದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಕಾಂಗ್ರೆಸ್‌ ಸಂಸದರಾದ ಹೈಬಿ ಈಡನ್, ಸಿ ಕಿರಣ್ ಕುಮಾರ್ ರೆಡ್ಡಿ, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಂ ಟ್ಯಾಗೋರ್, ಪ್ರಶಾಂತ್ ಪಡೋಲೆ ಮತ್ತು ಡೀನ್ ಕುರಿಯಾಕೋಸ್ ಹಾಗೂ ಪಿಐ(ಎಂ) ಎಸ್‌. ವೆಂಕಟೇಶನ್ ಅಮಾನತುಗೊಂಡಿದ್ದರು.

ಸಂಸತ್ತಿನ ಬಜೆಟ್‌ ಅಧಿವೇಶನದ ಮೊದಲ ಹಂತದಲ್ಲಿ ಲೋಕಸಭೆ ಅಂಗೀಕರಿಸಿದ ನಿರ್ಣಯಗಳ ವಿರುದ್ದ ಪ್ರತಿಭಟಿಸುವಾಗ ಅಶಿಸ್ತು ತೋರಿದ್ದಾರೆ ಎಂಬ ಕಾರಣ ನೀಡಿ ಸಂಸದರನ್ನು ಅಮಾನತು ಮಾಡಲಾಗಿತ್ತು.

ಏಪ್ರಿಲ್ 12ರಂದು ಕೊನೆಗೊಳ್ಳುವ ಬಜೆಟ್ ಅಧಿವೇಶನ ಸಂಪೂರ್ಣ ಅವಧಿಗೆ ಸಂಸದರನ್ನು ಅಮಾನತುಗೊಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...