Homeಮುಖಪುಟಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

ಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

- Advertisement -
- Advertisement -

‘ಭದ್ರತೆ ಉಲ್ಲಂಘಿಸಿ ಸಂಸತ್ ಪ್ರವೇಶಿಸುವ ಯೋಜನೆಯಲ್ಲಿ ಯಾವುದೇ ರೀತಿಯ ಭಯೋತ್ಪಾದನೆ ಉದ್ದೇಶವಿರಲಿಲ್ಲ, ಸರ್ಕಾರಕ್ಕೆ ಹಾಗೂ ಮಾಧ್ಯಮಗಳಿಗೆ ಸಂದೇಶ ರವಾನಿಸುವುದು ಮಾತ್ರ ಮುಖ್ಯವಾಗಿತ್ತು’ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಎನ್ಎನ್-ನ್ಯೂಸ್ ವರದಿ ಮಾಡಿದೆ.

ಬಿಗಿ ಭದ್ರತೆ ಉಲ್ಲಂಘಿಸಿ ಸಂಸತ್ ಭವನ ಪ್ರವೇಶಿಸಿ, ಹಳದಿ ಬಣ್ಣದ ‘ಕಲರ್ ಬಾಂಬ್’ ಸಿಡಿಸಿದ ಕೃತ್ಯವು ಕೇವಲ ಸಂದೇಶ ರವಾನಿಸುವುದಾಗಿತ್ತು ಎಂದು ಪ್ರಕರಣದ ಆರನೇ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಲಲಿತ್ ಮೋಹನ್ ಝಾ ಅವರ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ವರದಿ ಮಾಡಿದೆ.

‘ಭದ್ರತೆ ಉಲ್ಲಂಘಿಸುವುದಕ್ಕೂ ಮೊದಲು ಝಾ ಅವರು ಸಂಸತ್ತು ಮತ್ತು ಅದರ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಮಾಧ್ಯಮಗಳ ಗಮನ ಸೆಳೆಯಬೇಕಾದರೆ ‘ಮೂರ್ಖತನದ ಮಾರ್ಗ’ದ ಅಗತ್ಯವಿದೆ ಎಂಬುದು ಗುಂಪಿಗೆ ತಿಳಿದಿತ್ತು. ಇದೇ ಕಾರಣಕ್ಕೆ ಸಂಸತ್ತಿನಲ್ಲಿ ಗದ್ದಲ ಉಂಟು ಮಾಡಿ, ದೇಶಕ್ಕೆ ಹಾಗೂ ವ್ಯವಸ್ಥೆಗೆ ಸಂದೇಶ ರವಾನಿಸುವುದು ಅವರ ಏಕೈಕ ತಂತ್ರವಾಗಿತ್ತು ಎನ್ನಲಾಗಿದೆ.

ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದ ನಂತರ ಝಾ ಅವರು ನಾಲ್ವರನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದರು. ಲೊಕಸಭೆಯ ಭಾರಿ ಭದ್ರತಾ ವ್ಯವಸ್ಥೆಗಳಿಂದಾಗಿ ಸದನ ಪ್ರವೇಶಿಸುವ ಯೋಜನೆ ವಿಫಲವಾದರೂ, ಪ್ರಬಲವಾದ ಸಂದೇಶ ಕಳುಹಿಸಲು ಆವರಣದ ಹೊರಗೆ ಮತ್ತಿಬ್ಬರು ಹಣದಿ ಬಣ್ಣದ ಸ್ಮೋಕ್ ಬಾಂಬ್ ಹಿಡಿದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು. ಆ ಮೂಲಕ ಆಡಳಿತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶವನ್ನು ಶಾಸಕಾಂಗ ಮತ್ತು ಮಾಧ್ಯಮಗಳಿಗೆ ಅವರು ತಮ್ಮ ಪ್ರತಿಭಟನೆ ಮೂಲಕ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆ ಹೊರಗೆ ನಡೆದ ಗದ್ದಲವನ್ನು ಇನ್ಸ್ಟ್ರಾಗ್ರಾಮ್ ಮೂಲಕ ಲೈವ್-ಸ್ಟ್ರೀಮ್ ಮಾಡಿದ ನಂತರ, ನನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬುದನ್ನು ಅರಿತ ಝಾ, ಬಸ್ ಮೂಲಕ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ತಮ್ಮ ಮೊಬೈಲ್‌ನಲ್ಲಿದ್ದ ಎಲ್ಲ ತಾಂತ್ರಿಕ ಪುರಾವೆಗಳನ್ನು ನಾಶಪಡಿಸಿದ್ದರು.

ಆರೋಪಿಗಳಿಗೆ ಯಾವುದೆ ವಿದೇಶಿ ಸಂಪರ್ಕವಿಲ್ಲ, ಅವರು ಹಣ ಪಡೆದುಕೊಂಡಿದ್ದಾರೆ ಎಂಬುದಕ್ಕೂ ಯಾವುದೆ ವಿವರಗಳು ಇಲ್ಲಿಯವರೆಗೆ ಸಿಕ್ಕಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಂಸತ್ ಆವರಣದಲ್ಲಿ ಗದ್ದಲವನ್ನು ಸೃಷ್ಟಿಸಲು ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾರಾದರೂ ಪ್ರಚೋದನೆ ನೀಡಿದ್ದಾರಾ ಅಥವಾ ಯಾವುದಾದರೂ ರಾಜಕೀಯ ಪಕ್ಷಗಳೊಂದಿಗೆ ಆರೋಪಿಗಳ ಒಡನಾಟ ಇತ್ತ ಎಂಬುದರ ಬಗ್ಗೆ ತನಿಖಾ ತಂಡಗಳು ಹುಡುಕಾಟ ನಡೆಸುತ್ತಿವೆ.

ಭದ್ರತಾ ಉಲ್ಲಂಘನೆ ತನಿಖೆ ವಿಸ್ತರಣೆ:

ಗುಪ್ತಚರ ಇಲಾಖೆ ಉನ್ನತ ಮೂಲಗಳ ಪ್ರಕಾರ, ಆರೋಪಿಗಳ ಸಿದ್ಧಾಂತ ಮಾತ್ರ ಅವರನ್ನು ಈ ಮಟ್ಟಿಗೆ ಪ್ರೇರೇಪಿಸಲು ಸಾಧ್ಯವಿಲ್ಲ. ಆದ್ದರಿಂದ, ಲೋಕಸಭೆಯ ಭದ್ರತಾ ಉಲ್ಲಂಘನೆಯ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ತನಿಖಾ ತಂಡಗಳು ಚಿಂತನೆ ನಡೆಸಿವೆ ಎನ್ನಲಾಗಿದೆ.

ಆರು ಜನರ ಬಂಧನ:

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಸೆರೆಸಿಕ್ಕ ಪ್ರಮುಖ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...