Homeಮುಖಪುಟಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

ಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

- Advertisement -
- Advertisement -

‘ಭದ್ರತೆ ಉಲ್ಲಂಘಿಸಿ ಸಂಸತ್ ಪ್ರವೇಶಿಸುವ ಯೋಜನೆಯಲ್ಲಿ ಯಾವುದೇ ರೀತಿಯ ಭಯೋತ್ಪಾದನೆ ಉದ್ದೇಶವಿರಲಿಲ್ಲ, ಸರ್ಕಾರಕ್ಕೆ ಹಾಗೂ ಮಾಧ್ಯಮಗಳಿಗೆ ಸಂದೇಶ ರವಾನಿಸುವುದು ಮಾತ್ರ ಮುಖ್ಯವಾಗಿತ್ತು’ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಎನ್ಎನ್-ನ್ಯೂಸ್ ವರದಿ ಮಾಡಿದೆ.

ಬಿಗಿ ಭದ್ರತೆ ಉಲ್ಲಂಘಿಸಿ ಸಂಸತ್ ಭವನ ಪ್ರವೇಶಿಸಿ, ಹಳದಿ ಬಣ್ಣದ ‘ಕಲರ್ ಬಾಂಬ್’ ಸಿಡಿಸಿದ ಕೃತ್ಯವು ಕೇವಲ ಸಂದೇಶ ರವಾನಿಸುವುದಾಗಿತ್ತು ಎಂದು ಪ್ರಕರಣದ ಆರನೇ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಲಲಿತ್ ಮೋಹನ್ ಝಾ ಅವರ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ವರದಿ ಮಾಡಿದೆ.

‘ಭದ್ರತೆ ಉಲ್ಲಂಘಿಸುವುದಕ್ಕೂ ಮೊದಲು ಝಾ ಅವರು ಸಂಸತ್ತು ಮತ್ತು ಅದರ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಮಾಧ್ಯಮಗಳ ಗಮನ ಸೆಳೆಯಬೇಕಾದರೆ ‘ಮೂರ್ಖತನದ ಮಾರ್ಗ’ದ ಅಗತ್ಯವಿದೆ ಎಂಬುದು ಗುಂಪಿಗೆ ತಿಳಿದಿತ್ತು. ಇದೇ ಕಾರಣಕ್ಕೆ ಸಂಸತ್ತಿನಲ್ಲಿ ಗದ್ದಲ ಉಂಟು ಮಾಡಿ, ದೇಶಕ್ಕೆ ಹಾಗೂ ವ್ಯವಸ್ಥೆಗೆ ಸಂದೇಶ ರವಾನಿಸುವುದು ಅವರ ಏಕೈಕ ತಂತ್ರವಾಗಿತ್ತು ಎನ್ನಲಾಗಿದೆ.

ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದ ನಂತರ ಝಾ ಅವರು ನಾಲ್ವರನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದರು. ಲೊಕಸಭೆಯ ಭಾರಿ ಭದ್ರತಾ ವ್ಯವಸ್ಥೆಗಳಿಂದಾಗಿ ಸದನ ಪ್ರವೇಶಿಸುವ ಯೋಜನೆ ವಿಫಲವಾದರೂ, ಪ್ರಬಲವಾದ ಸಂದೇಶ ಕಳುಹಿಸಲು ಆವರಣದ ಹೊರಗೆ ಮತ್ತಿಬ್ಬರು ಹಣದಿ ಬಣ್ಣದ ಸ್ಮೋಕ್ ಬಾಂಬ್ ಹಿಡಿದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು. ಆ ಮೂಲಕ ಆಡಳಿತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶವನ್ನು ಶಾಸಕಾಂಗ ಮತ್ತು ಮಾಧ್ಯಮಗಳಿಗೆ ಅವರು ತಮ್ಮ ಪ್ರತಿಭಟನೆ ಮೂಲಕ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆ ಹೊರಗೆ ನಡೆದ ಗದ್ದಲವನ್ನು ಇನ್ಸ್ಟ್ರಾಗ್ರಾಮ್ ಮೂಲಕ ಲೈವ್-ಸ್ಟ್ರೀಮ್ ಮಾಡಿದ ನಂತರ, ನನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬುದನ್ನು ಅರಿತ ಝಾ, ಬಸ್ ಮೂಲಕ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ತಮ್ಮ ಮೊಬೈಲ್‌ನಲ್ಲಿದ್ದ ಎಲ್ಲ ತಾಂತ್ರಿಕ ಪುರಾವೆಗಳನ್ನು ನಾಶಪಡಿಸಿದ್ದರು.

ಆರೋಪಿಗಳಿಗೆ ಯಾವುದೆ ವಿದೇಶಿ ಸಂಪರ್ಕವಿಲ್ಲ, ಅವರು ಹಣ ಪಡೆದುಕೊಂಡಿದ್ದಾರೆ ಎಂಬುದಕ್ಕೂ ಯಾವುದೆ ವಿವರಗಳು ಇಲ್ಲಿಯವರೆಗೆ ಸಿಕ್ಕಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಂಸತ್ ಆವರಣದಲ್ಲಿ ಗದ್ದಲವನ್ನು ಸೃಷ್ಟಿಸಲು ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾರಾದರೂ ಪ್ರಚೋದನೆ ನೀಡಿದ್ದಾರಾ ಅಥವಾ ಯಾವುದಾದರೂ ರಾಜಕೀಯ ಪಕ್ಷಗಳೊಂದಿಗೆ ಆರೋಪಿಗಳ ಒಡನಾಟ ಇತ್ತ ಎಂಬುದರ ಬಗ್ಗೆ ತನಿಖಾ ತಂಡಗಳು ಹುಡುಕಾಟ ನಡೆಸುತ್ತಿವೆ.

ಭದ್ರತಾ ಉಲ್ಲಂಘನೆ ತನಿಖೆ ವಿಸ್ತರಣೆ:

ಗುಪ್ತಚರ ಇಲಾಖೆ ಉನ್ನತ ಮೂಲಗಳ ಪ್ರಕಾರ, ಆರೋಪಿಗಳ ಸಿದ್ಧಾಂತ ಮಾತ್ರ ಅವರನ್ನು ಈ ಮಟ್ಟಿಗೆ ಪ್ರೇರೇಪಿಸಲು ಸಾಧ್ಯವಿಲ್ಲ. ಆದ್ದರಿಂದ, ಲೋಕಸಭೆಯ ಭದ್ರತಾ ಉಲ್ಲಂಘನೆಯ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ತನಿಖಾ ತಂಡಗಳು ಚಿಂತನೆ ನಡೆಸಿವೆ ಎನ್ನಲಾಗಿದೆ.

ಆರು ಜನರ ಬಂಧನ:

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಸೆರೆಸಿಕ್ಕ ಪ್ರಮುಖ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...