Homeಮುಖಪುಟಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

ಲೋಕಸಭೆ ಭದ್ರತಾ ಲೋಪ ಪ್ರಕರಣ: ‘ಸಂದೇಶ’ ರವಾನಿಸುವುದೆ ಏಕೈಕ ಉದ್ದೇಶವಾಗಿತ್ತಾ?

- Advertisement -
- Advertisement -

‘ಭದ್ರತೆ ಉಲ್ಲಂಘಿಸಿ ಸಂಸತ್ ಪ್ರವೇಶಿಸುವ ಯೋಜನೆಯಲ್ಲಿ ಯಾವುದೇ ರೀತಿಯ ಭಯೋತ್ಪಾದನೆ ಉದ್ದೇಶವಿರಲಿಲ್ಲ, ಸರ್ಕಾರಕ್ಕೆ ಹಾಗೂ ಮಾಧ್ಯಮಗಳಿಗೆ ಸಂದೇಶ ರವಾನಿಸುವುದು ಮಾತ್ರ ಮುಖ್ಯವಾಗಿತ್ತು’ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಎನ್ಎನ್-ನ್ಯೂಸ್ ವರದಿ ಮಾಡಿದೆ.

ಬಿಗಿ ಭದ್ರತೆ ಉಲ್ಲಂಘಿಸಿ ಸಂಸತ್ ಭವನ ಪ್ರವೇಶಿಸಿ, ಹಳದಿ ಬಣ್ಣದ ‘ಕಲರ್ ಬಾಂಬ್’ ಸಿಡಿಸಿದ ಕೃತ್ಯವು ಕೇವಲ ಸಂದೇಶ ರವಾನಿಸುವುದಾಗಿತ್ತು ಎಂದು ಪ್ರಕರಣದ ಆರನೇ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಲಲಿತ್ ಮೋಹನ್ ಝಾ ಅವರ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ವರದಿ ಮಾಡಿದೆ.

‘ಭದ್ರತೆ ಉಲ್ಲಂಘಿಸುವುದಕ್ಕೂ ಮೊದಲು ಝಾ ಅವರು ಸಂಸತ್ತು ಮತ್ತು ಅದರ ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ. ಮಾಧ್ಯಮಗಳ ಗಮನ ಸೆಳೆಯಬೇಕಾದರೆ ‘ಮೂರ್ಖತನದ ಮಾರ್ಗ’ದ ಅಗತ್ಯವಿದೆ ಎಂಬುದು ಗುಂಪಿಗೆ ತಿಳಿದಿತ್ತು. ಇದೇ ಕಾರಣಕ್ಕೆ ಸಂಸತ್ತಿನಲ್ಲಿ ಗದ್ದಲ ಉಂಟು ಮಾಡಿ, ದೇಶಕ್ಕೆ ಹಾಗೂ ವ್ಯವಸ್ಥೆಗೆ ಸಂದೇಶ ರವಾನಿಸುವುದು ಅವರ ಏಕೈಕ ತಂತ್ರವಾಗಿತ್ತು ಎನ್ನಲಾಗಿದೆ.

ಭದ್ರತೆ ಉಲ್ಲಂಘಿಸಿ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದ ನಂತರ ಝಾ ಅವರು ನಾಲ್ವರನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿದ್ದರು. ಲೊಕಸಭೆಯ ಭಾರಿ ಭದ್ರತಾ ವ್ಯವಸ್ಥೆಗಳಿಂದಾಗಿ ಸದನ ಪ್ರವೇಶಿಸುವ ಯೋಜನೆ ವಿಫಲವಾದರೂ, ಪ್ರಬಲವಾದ ಸಂದೇಶ ಕಳುಹಿಸಲು ಆವರಣದ ಹೊರಗೆ ಮತ್ತಿಬ್ಬರು ಹಣದಿ ಬಣ್ಣದ ಸ್ಮೋಕ್ ಬಾಂಬ್ ಹಿಡಿದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು. ಆ ಮೂಲಕ ಆಡಳಿತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಸಂದೇಶವನ್ನು ಶಾಸಕಾಂಗ ಮತ್ತು ಮಾಧ್ಯಮಗಳಿಗೆ ಅವರು ತಮ್ಮ ಪ್ರತಿಭಟನೆ ಮೂಲಕ ಹೇಳಿದ್ದಾರೆ ಎನ್ನಲಾಗಿದೆ.

ಲೋಕಸಭೆ ಹೊರಗೆ ನಡೆದ ಗದ್ದಲವನ್ನು ಇನ್ಸ್ಟ್ರಾಗ್ರಾಮ್ ಮೂಲಕ ಲೈವ್-ಸ್ಟ್ರೀಮ್ ಮಾಡಿದ ನಂತರ, ನನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬುದನ್ನು ಅರಿತ ಝಾ, ಬಸ್ ಮೂಲಕ ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿ ತಮ್ಮ ಮೊಬೈಲ್‌ನಲ್ಲಿದ್ದ ಎಲ್ಲ ತಾಂತ್ರಿಕ ಪುರಾವೆಗಳನ್ನು ನಾಶಪಡಿಸಿದ್ದರು.

ಆರೋಪಿಗಳಿಗೆ ಯಾವುದೆ ವಿದೇಶಿ ಸಂಪರ್ಕವಿಲ್ಲ, ಅವರು ಹಣ ಪಡೆದುಕೊಂಡಿದ್ದಾರೆ ಎಂಬುದಕ್ಕೂ ಯಾವುದೆ ವಿವರಗಳು ಇಲ್ಲಿಯವರೆಗೆ ಸಿಕ್ಕಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಂಸತ್ ಆವರಣದಲ್ಲಿ ಗದ್ದಲವನ್ನು ಸೃಷ್ಟಿಸಲು ಅವರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾರಾದರೂ ಪ್ರಚೋದನೆ ನೀಡಿದ್ದಾರಾ ಅಥವಾ ಯಾವುದಾದರೂ ರಾಜಕೀಯ ಪಕ್ಷಗಳೊಂದಿಗೆ ಆರೋಪಿಗಳ ಒಡನಾಟ ಇತ್ತ ಎಂಬುದರ ಬಗ್ಗೆ ತನಿಖಾ ತಂಡಗಳು ಹುಡುಕಾಟ ನಡೆಸುತ್ತಿವೆ.

ಭದ್ರತಾ ಉಲ್ಲಂಘನೆ ತನಿಖೆ ವಿಸ್ತರಣೆ:

ಗುಪ್ತಚರ ಇಲಾಖೆ ಉನ್ನತ ಮೂಲಗಳ ಪ್ರಕಾರ, ಆರೋಪಿಗಳ ಸಿದ್ಧಾಂತ ಮಾತ್ರ ಅವರನ್ನು ಈ ಮಟ್ಟಿಗೆ ಪ್ರೇರೇಪಿಸಲು ಸಾಧ್ಯವಿಲ್ಲ. ಆದ್ದರಿಂದ, ಲೋಕಸಭೆಯ ಭದ್ರತಾ ಉಲ್ಲಂಘನೆಯ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ತನಿಖಾ ತಂಡಗಳು ಚಿಂತನೆ ನಡೆಸಿವೆ ಎನ್ನಲಾಗಿದೆ.

ಆರು ಜನರ ಬಂಧನ:

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಸೆರೆಸಿಕ್ಕ ಪ್ರಮುಖ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ; ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...