Homeಕರ್ನಾಟಕಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

- Advertisement -
- Advertisement -

ಲೋಕಸಭೆಯಲ್ಲಿ ಸಂಸದರು ಚರ್ಚೆ ನಡೆಸುತ್ತಿರುವಾಗಲೇ ವೀಕ್ಷಕರ ಗ್ಯಾಲರಿ ಮೂಲಕ ಇಬ್ಬರು ಯುವಕರು ಸದನದ ಒಳಗೆ ಪ್ರವೇಶಿಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ’ ಎಂದು ಆರೋಪಿಸಿದೆ.

‘ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆಗೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯ ಲೋಪವೂ ನಡೆಯುತ್ತಿರುವುದೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ  ಅವರು ಕೂಡಲೇ ಪ್ರಾತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದೆ.

‘2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮವಾಗಿ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಮತ್ತು ಈ ಉಲ್ಲಂಘನೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ಗಂಭೀರ ಭದ್ರತಾ ಲೋಪದ ತಳಹದಿಯನ್ನು ಪಡೆಯಲು ಸಂಪೂರ್ಣ ತನಿಖೆಯನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆ ಮತ್ತೆ ಮರುಕಳಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಬಂಧಿತ ಮನೋರಂಜನ್ ಮೈಸೂರು ನಿವಾಸಿ! ಮಗನನ್ನು ಗುರುತಿಸಿದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...