Homeಕರ್ನಾಟಕಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

- Advertisement -
- Advertisement -

ಲೋಕಸಭೆಯಲ್ಲಿ ಸಂಸದರು ಚರ್ಚೆ ನಡೆಸುತ್ತಿರುವಾಗಲೇ ವೀಕ್ಷಕರ ಗ್ಯಾಲರಿ ಮೂಲಕ ಇಬ್ಬರು ಯುವಕರು ಸದನದ ಒಳಗೆ ಪ್ರವೇಶಿಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ’ ಎಂದು ಆರೋಪಿಸಿದೆ.

‘ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆಗೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯ ಲೋಪವೂ ನಡೆಯುತ್ತಿರುವುದೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ  ಅವರು ಕೂಡಲೇ ಪ್ರಾತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದೆ.

‘2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮವಾಗಿ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಮತ್ತು ಈ ಉಲ್ಲಂಘನೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ಗಂಭೀರ ಭದ್ರತಾ ಲೋಪದ ತಳಹದಿಯನ್ನು ಪಡೆಯಲು ಸಂಪೂರ್ಣ ತನಿಖೆಯನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆ ಮತ್ತೆ ಮರುಕಳಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ಬಂಧಿತ ಮನೋರಂಜನ್ ಮೈಸೂರು ನಿವಾಸಿ! ಮಗನನ್ನು ಗುರುತಿಸಿದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...