Homeಕರ್ನಾಟಕಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

ಲೋಕಸಭೆ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹರನ್ನು ವಿಚಾರಣೆಗೆ ಒಳಪಡಿಸಬೇಕು: ಸಿಎಂ

- Advertisement -
- Advertisement -

ಲೋಕಸಭೆಯಲ್ಲಿ ಇಂದು ಸಂಭವಿಸಿದ ಭದ್ರತಾ ಲೋಪದ ಕುರಿತು ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಯುವಕರಿಗೆ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ’ ಎಂದಿದ್ದಾರೆ.

‘ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ.

‘ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...