Homeಮುಖಪುಟಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

ಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಲೋಪದ ನಂತರ, ಸರ್ಕಾರ ಉತ್ತರಿಸಬೇಕು ಎಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬೇಡಿಕೆ ಇಟ್ಟಿದ್ದವು. ಸದನದಲ್ಲಿ ಉಂಟಾದ ಗದ್ದಲದಿಂದಾಗಿ ಕಾಂಗ್ರೆಸ್-ಡಿಎಂಕೆ ಪಕ್ಷದ ಹದಿಮೂರು ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದರು. ಆದರೂ ಪಟ್ಟು ಬಿಡದ ಸಂಸದರು, ‘ಗೃಹ ಸಚಿವ ಅಮಿತ್ ಶಾ ಸಮಜಾಯಿಷಿ ನೀಡಲೇಬೇಕು’ ಎಂದು ಶುಕ್ರವಾರವೂ ಧರಣಿ ಮುಂದುವರಿಸಿದ್ದರು.

ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ‘ಲೋಕಸಭೆ ಭದ್ರತೆಯು ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ, ಸರ್ಕಾರ ಉತ್ತರಿಸಬೇಕಾಗಿಲ್ಲ. ಈ ವಿಷಯದಲ್ಲಿ ಗೃಹ ಸಚಿವರನ್ನು ಏಕೆ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಎಕ್ಸ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

1974 ಮತ್ತು 1994 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಗಳನ್ನು ಉಲ್ಲೇಖಿಸಿದ ದುಬೆ, ಲೋಕಸಭೆಯ ಭದ್ರತೆಯ ಜವಾಬ್ದಾರಿಯು ಲೋಕಸಭೆಯ ಕಾರ್ಯದರ್ಶಿಯ ಮೇಲಿದೆ ಎಂದು ಒತ್ತಿ ಹೇಳಿದರು. 1974ರಲ್ಲಿ ವ್ಯಕ್ತಿಯೊಬ್ಬರು ಎರಡು ಪಿಸ್ತೂಲ್‌ಗಳೊಂದಿಗೆ ಲೋಕಸಭೆಗೆ ಪ್ರವೇಶಿಸಿದಾಗ, ಜನಸಂಘದ ಪ್ರತಿಪಕ್ಷಗಳು ಅದನ್ನು ವಿವಾದಗೊಳಿಸಲಿಲ್ಲ. ಅಂದಿನ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಲಿಲ್ಲ’ ಎಂದರು.

ಇತ್ತೀಚಿನ ಭದ್ರತಾ ಉಲ್ಲಂಘನೆ ಮತ್ತು ಈ ಹಿಂದೆ ನಡೆದಿರುವ ಘಟನೆಗಳಿಗೆ ಹೋಲಿಸಿ ಮಾತನಾಡಿರುವ ದುಬೆ ಅವರ ಎಕ್ಸ್ ಪೋಸ್ಟ್‌ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಡಿಸೆಂಬರ್ 13ರಂದು ನಡೆದ ಭದ್ರತಾ ಲೋಪ ಘಟನೆಯ ಗಂಭೀರತೆಯನ್ನು ಒತ್ತಿ ಹೇಳಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಸರ್ಕಾರವು ಉತ್ತರದಾಯಿತ್ವವನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

‘ಇಂದು, ಉಸೇನ್ ಬೋಲ್ಟ್ ಅವರ ಓಟಕ್ಕಿಂತ ವೇಗವಾಗಿ ಸದನವನ್ನು ಮುಂದೂಡಲಾಗಿದೆ. ಏಕೆಂದರೆ, ನಾವು ಪ್ರಧಾನಿ ಅಥವಾ ಗೃಹ ಸಚಿವರಿಂದ ಉತ್ತರವನ್ನು ಕೋರುತ್ತಿದ್ದೇವೆ. ಅವರು ಖಾಸಗಿ ಟಿವಿ ಚಾನೆಲ್‌ನಲ್ಲಿ ಸುದೀರ್ಘ ವಿವರಣೆಯನ್ನು ನೀಡಿದ್ದಾರೆ. ಆದರೆ, ಈವರೆಗೂ ಸದನದಲ್ಲಿ ಹೇಳಿಕೆ ನೀಡಿಲ್ಲ’ ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಸರ್ಕಾರದ ನಡೆಗೆ ಚಿದಂಬರಂ ಕಿಡಿ:

ಭದ್ರತಾ ವೈಪಲ್ಯದ ಬಗ್ಗೆ ಉತ್ತರ ಕೊಡದ ಸರ್ಕಾರದ ನಡೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ‘ಬಿಜೆಪಿಯ ಆಡಳಿತದಲ್ಲಿ ರಾಜಕೀಯ ಹೊಸ ಆಳಕ್ಕೆ ಇಳಿದಿದೆ. ಡಿಸೆಂಬರ್ 13 ರಂದು ಭೀಕರ ಭದ್ರತಾ ಉಲ್ಲಂಘನೆಯ ಕುರಿತು ಸಂಸತ್ತಿನಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಅಥವಾ ಗೌರವಾನ್ವಿತ ಗೃಹ ಸಚಿವರು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಬಯಸಿದರೆ, ಅವರ ಸದಸ್ಯರನ್ನು ಅಮಾನತುಗೊಳಿಸಲಾಗುತ್ತದೆ. ಭದ್ರತೆಯನ್ನು ಉಲ್ಲಂಘಿಸಿದ ಸಂಸದರಿಗೆ ಅಮಾನತು ಅಡ್ಡಿಯಾಗುವುದಿಲ್ಲ. ಇದು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಉದ್ದೇಶ ಹೊಂದಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...