Homeಮುಖಪುಟಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

ಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಲೋಪದ ನಂತರ, ಸರ್ಕಾರ ಉತ್ತರಿಸಬೇಕು ಎಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬೇಡಿಕೆ ಇಟ್ಟಿದ್ದವು. ಸದನದಲ್ಲಿ ಉಂಟಾದ ಗದ್ದಲದಿಂದಾಗಿ ಕಾಂಗ್ರೆಸ್-ಡಿಎಂಕೆ ಪಕ್ಷದ ಹದಿಮೂರು ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದರು. ಆದರೂ ಪಟ್ಟು ಬಿಡದ ಸಂಸದರು, ‘ಗೃಹ ಸಚಿವ ಅಮಿತ್ ಶಾ ಸಮಜಾಯಿಷಿ ನೀಡಲೇಬೇಕು’ ಎಂದು ಶುಕ್ರವಾರವೂ ಧರಣಿ ಮುಂದುವರಿಸಿದ್ದರು.

ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ‘ಲೋಕಸಭೆ ಭದ್ರತೆಯು ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ, ಸರ್ಕಾರ ಉತ್ತರಿಸಬೇಕಾಗಿಲ್ಲ. ಈ ವಿಷಯದಲ್ಲಿ ಗೃಹ ಸಚಿವರನ್ನು ಏಕೆ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಎಕ್ಸ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

1974 ಮತ್ತು 1994 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಗಳನ್ನು ಉಲ್ಲೇಖಿಸಿದ ದುಬೆ, ಲೋಕಸಭೆಯ ಭದ್ರತೆಯ ಜವಾಬ್ದಾರಿಯು ಲೋಕಸಭೆಯ ಕಾರ್ಯದರ್ಶಿಯ ಮೇಲಿದೆ ಎಂದು ಒತ್ತಿ ಹೇಳಿದರು. 1974ರಲ್ಲಿ ವ್ಯಕ್ತಿಯೊಬ್ಬರು ಎರಡು ಪಿಸ್ತೂಲ್‌ಗಳೊಂದಿಗೆ ಲೋಕಸಭೆಗೆ ಪ್ರವೇಶಿಸಿದಾಗ, ಜನಸಂಘದ ಪ್ರತಿಪಕ್ಷಗಳು ಅದನ್ನು ವಿವಾದಗೊಳಿಸಲಿಲ್ಲ. ಅಂದಿನ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಲಿಲ್ಲ’ ಎಂದರು.

ಇತ್ತೀಚಿನ ಭದ್ರತಾ ಉಲ್ಲಂಘನೆ ಮತ್ತು ಈ ಹಿಂದೆ ನಡೆದಿರುವ ಘಟನೆಗಳಿಗೆ ಹೋಲಿಸಿ ಮಾತನಾಡಿರುವ ದುಬೆ ಅವರ ಎಕ್ಸ್ ಪೋಸ್ಟ್‌ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಡಿಸೆಂಬರ್ 13ರಂದು ನಡೆದ ಭದ್ರತಾ ಲೋಪ ಘಟನೆಯ ಗಂಭೀರತೆಯನ್ನು ಒತ್ತಿ ಹೇಳಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಸರ್ಕಾರವು ಉತ್ತರದಾಯಿತ್ವವನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

‘ಇಂದು, ಉಸೇನ್ ಬೋಲ್ಟ್ ಅವರ ಓಟಕ್ಕಿಂತ ವೇಗವಾಗಿ ಸದನವನ್ನು ಮುಂದೂಡಲಾಗಿದೆ. ಏಕೆಂದರೆ, ನಾವು ಪ್ರಧಾನಿ ಅಥವಾ ಗೃಹ ಸಚಿವರಿಂದ ಉತ್ತರವನ್ನು ಕೋರುತ್ತಿದ್ದೇವೆ. ಅವರು ಖಾಸಗಿ ಟಿವಿ ಚಾನೆಲ್‌ನಲ್ಲಿ ಸುದೀರ್ಘ ವಿವರಣೆಯನ್ನು ನೀಡಿದ್ದಾರೆ. ಆದರೆ, ಈವರೆಗೂ ಸದನದಲ್ಲಿ ಹೇಳಿಕೆ ನೀಡಿಲ್ಲ’ ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಸರ್ಕಾರದ ನಡೆಗೆ ಚಿದಂಬರಂ ಕಿಡಿ:

ಭದ್ರತಾ ವೈಪಲ್ಯದ ಬಗ್ಗೆ ಉತ್ತರ ಕೊಡದ ಸರ್ಕಾರದ ನಡೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ‘ಬಿಜೆಪಿಯ ಆಡಳಿತದಲ್ಲಿ ರಾಜಕೀಯ ಹೊಸ ಆಳಕ್ಕೆ ಇಳಿದಿದೆ. ಡಿಸೆಂಬರ್ 13 ರಂದು ಭೀಕರ ಭದ್ರತಾ ಉಲ್ಲಂಘನೆಯ ಕುರಿತು ಸಂಸತ್ತಿನಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಅಥವಾ ಗೌರವಾನ್ವಿತ ಗೃಹ ಸಚಿವರು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಬಯಸಿದರೆ, ಅವರ ಸದಸ್ಯರನ್ನು ಅಮಾನತುಗೊಳಿಸಲಾಗುತ್ತದೆ. ಭದ್ರತೆಯನ್ನು ಉಲ್ಲಂಘಿಸಿದ ಸಂಸದರಿಗೆ ಅಮಾನತು ಅಡ್ಡಿಯಾಗುವುದಿಲ್ಲ. ಇದು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಉದ್ದೇಶ ಹೊಂದಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...