Homeಮುಖಪುಟಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

ಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಲೋಪದ ನಂತರ, ಸರ್ಕಾರ ಉತ್ತರಿಸಬೇಕು ಎಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬೇಡಿಕೆ ಇಟ್ಟಿದ್ದವು. ಸದನದಲ್ಲಿ ಉಂಟಾದ ಗದ್ದಲದಿಂದಾಗಿ ಕಾಂಗ್ರೆಸ್-ಡಿಎಂಕೆ ಪಕ್ಷದ ಹದಿಮೂರು ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದರು. ಆದರೂ ಪಟ್ಟು ಬಿಡದ ಸಂಸದರು, ‘ಗೃಹ ಸಚಿವ ಅಮಿತ್ ಶಾ ಸಮಜಾಯಿಷಿ ನೀಡಲೇಬೇಕು’ ಎಂದು ಶುಕ್ರವಾರವೂ ಧರಣಿ ಮುಂದುವರಿಸಿದ್ದರು.

ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ‘ಲೋಕಸಭೆ ಭದ್ರತೆಯು ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ, ಸರ್ಕಾರ ಉತ್ತರಿಸಬೇಕಾಗಿಲ್ಲ. ಈ ವಿಷಯದಲ್ಲಿ ಗೃಹ ಸಚಿವರನ್ನು ಏಕೆ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಎಕ್ಸ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

1974 ಮತ್ತು 1994 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಗಳನ್ನು ಉಲ್ಲೇಖಿಸಿದ ದುಬೆ, ಲೋಕಸಭೆಯ ಭದ್ರತೆಯ ಜವಾಬ್ದಾರಿಯು ಲೋಕಸಭೆಯ ಕಾರ್ಯದರ್ಶಿಯ ಮೇಲಿದೆ ಎಂದು ಒತ್ತಿ ಹೇಳಿದರು. 1974ರಲ್ಲಿ ವ್ಯಕ್ತಿಯೊಬ್ಬರು ಎರಡು ಪಿಸ್ತೂಲ್‌ಗಳೊಂದಿಗೆ ಲೋಕಸಭೆಗೆ ಪ್ರವೇಶಿಸಿದಾಗ, ಜನಸಂಘದ ಪ್ರತಿಪಕ್ಷಗಳು ಅದನ್ನು ವಿವಾದಗೊಳಿಸಲಿಲ್ಲ. ಅಂದಿನ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಲಿಲ್ಲ’ ಎಂದರು.

ಇತ್ತೀಚಿನ ಭದ್ರತಾ ಉಲ್ಲಂಘನೆ ಮತ್ತು ಈ ಹಿಂದೆ ನಡೆದಿರುವ ಘಟನೆಗಳಿಗೆ ಹೋಲಿಸಿ ಮಾತನಾಡಿರುವ ದುಬೆ ಅವರ ಎಕ್ಸ್ ಪೋಸ್ಟ್‌ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಡಿಸೆಂಬರ್ 13ರಂದು ನಡೆದ ಭದ್ರತಾ ಲೋಪ ಘಟನೆಯ ಗಂಭೀರತೆಯನ್ನು ಒತ್ತಿ ಹೇಳಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಸರ್ಕಾರವು ಉತ್ತರದಾಯಿತ್ವವನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

‘ಇಂದು, ಉಸೇನ್ ಬೋಲ್ಟ್ ಅವರ ಓಟಕ್ಕಿಂತ ವೇಗವಾಗಿ ಸದನವನ್ನು ಮುಂದೂಡಲಾಗಿದೆ. ಏಕೆಂದರೆ, ನಾವು ಪ್ರಧಾನಿ ಅಥವಾ ಗೃಹ ಸಚಿವರಿಂದ ಉತ್ತರವನ್ನು ಕೋರುತ್ತಿದ್ದೇವೆ. ಅವರು ಖಾಸಗಿ ಟಿವಿ ಚಾನೆಲ್‌ನಲ್ಲಿ ಸುದೀರ್ಘ ವಿವರಣೆಯನ್ನು ನೀಡಿದ್ದಾರೆ. ಆದರೆ, ಈವರೆಗೂ ಸದನದಲ್ಲಿ ಹೇಳಿಕೆ ನೀಡಿಲ್ಲ’ ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಸರ್ಕಾರದ ನಡೆಗೆ ಚಿದಂಬರಂ ಕಿಡಿ:

ಭದ್ರತಾ ವೈಪಲ್ಯದ ಬಗ್ಗೆ ಉತ್ತರ ಕೊಡದ ಸರ್ಕಾರದ ನಡೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ‘ಬಿಜೆಪಿಯ ಆಡಳಿತದಲ್ಲಿ ರಾಜಕೀಯ ಹೊಸ ಆಳಕ್ಕೆ ಇಳಿದಿದೆ. ಡಿಸೆಂಬರ್ 13 ರಂದು ಭೀಕರ ಭದ್ರತಾ ಉಲ್ಲಂಘನೆಯ ಕುರಿತು ಸಂಸತ್ತಿನಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಅಥವಾ ಗೌರವಾನ್ವಿತ ಗೃಹ ಸಚಿವರು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಬಯಸಿದರೆ, ಅವರ ಸದಸ್ಯರನ್ನು ಅಮಾನತುಗೊಳಿಸಲಾಗುತ್ತದೆ. ಭದ್ರತೆಯನ್ನು ಉಲ್ಲಂಘಿಸಿದ ಸಂಸದರಿಗೆ ಅಮಾನತು ಅಡ್ಡಿಯಾಗುವುದಿಲ್ಲ. ಇದು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಉದ್ದೇಶ ಹೊಂದಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...