Homeಮುಖಪುಟಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

ಲೋಕಸಭೆ ಭದ್ರತಾ ಲೋಪ: ಉತ್ತರಿಸಬೇಕಾಗಿರುವುದು ಸಚಿವಾಲಯ, ಸರ್ಕಾರವಲ್ಲ: ನಿಶಿಕಾಂತ್ ದುಬೆ

- Advertisement -
- Advertisement -

ಬುಧವಾರ ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಲೋಪದ ನಂತರ, ಸರ್ಕಾರ ಉತ್ತರಿಸಬೇಕು ಎಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಬೇಡಿಕೆ ಇಟ್ಟಿದ್ದವು. ಸದನದಲ್ಲಿ ಉಂಟಾದ ಗದ್ದಲದಿಂದಾಗಿ ಕಾಂಗ್ರೆಸ್-ಡಿಎಂಕೆ ಪಕ್ಷದ ಹದಿಮೂರು ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದರು. ಆದರೂ ಪಟ್ಟು ಬಿಡದ ಸಂಸದರು, ‘ಗೃಹ ಸಚಿವ ಅಮಿತ್ ಶಾ ಸಮಜಾಯಿಷಿ ನೀಡಲೇಬೇಕು’ ಎಂದು ಶುಕ್ರವಾರವೂ ಧರಣಿ ಮುಂದುವರಿಸಿದ್ದರು.

ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ‘ಲೋಕಸಭೆ ಭದ್ರತೆಯು ಕಾರ್ಯದರ್ಶಿಗಳ ಜವಾಬ್ದಾರಿಯಾಗಿದೆ, ಸರ್ಕಾರ ಉತ್ತರಿಸಬೇಕಾಗಿಲ್ಲ. ಈ ವಿಷಯದಲ್ಲಿ ಗೃಹ ಸಚಿವರನ್ನು ಏಕೆ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಎಕ್ಸ್‌ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.

1974 ಮತ್ತು 1994 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಗಳನ್ನು ಉಲ್ಲೇಖಿಸಿದ ದುಬೆ, ಲೋಕಸಭೆಯ ಭದ್ರತೆಯ ಜವಾಬ್ದಾರಿಯು ಲೋಕಸಭೆಯ ಕಾರ್ಯದರ್ಶಿಯ ಮೇಲಿದೆ ಎಂದು ಒತ್ತಿ ಹೇಳಿದರು. 1974ರಲ್ಲಿ ವ್ಯಕ್ತಿಯೊಬ್ಬರು ಎರಡು ಪಿಸ್ತೂಲ್‌ಗಳೊಂದಿಗೆ ಲೋಕಸಭೆಗೆ ಪ್ರವೇಶಿಸಿದಾಗ, ಜನಸಂಘದ ಪ್ರತಿಪಕ್ಷಗಳು ಅದನ್ನು ವಿವಾದಗೊಳಿಸಲಿಲ್ಲ. ಅಂದಿನ ಪ್ರಧಾನಿ ಮತ್ತು ಗೃಹ ಸಚಿವರ ಹೆಸರನ್ನು ಉಲ್ಲೇಖಿಸಲಿಲ್ಲ’ ಎಂದರು.

ಇತ್ತೀಚಿನ ಭದ್ರತಾ ಉಲ್ಲಂಘನೆ ಮತ್ತು ಈ ಹಿಂದೆ ನಡೆದಿರುವ ಘಟನೆಗಳಿಗೆ ಹೋಲಿಸಿ ಮಾತನಾಡಿರುವ ದುಬೆ ಅವರ ಎಕ್ಸ್ ಪೋಸ್ಟ್‌ಗೆ ವಿರೋಧ ಪಕ್ಷದ ನಾಯಕರು ಕಿಡಿಕಾರಿದ್ದಾರೆ. ಡಿಸೆಂಬರ್ 13ರಂದು ನಡೆದ ಭದ್ರತಾ ಲೋಪ ಘಟನೆಯ ಗಂಭೀರತೆಯನ್ನು ಒತ್ತಿ ಹೇಳಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಸರ್ಕಾರವು ಉತ್ತರದಾಯಿತ್ವವನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

‘ಇಂದು, ಉಸೇನ್ ಬೋಲ್ಟ್ ಅವರ ಓಟಕ್ಕಿಂತ ವೇಗವಾಗಿ ಸದನವನ್ನು ಮುಂದೂಡಲಾಗಿದೆ. ಏಕೆಂದರೆ, ನಾವು ಪ್ರಧಾನಿ ಅಥವಾ ಗೃಹ ಸಚಿವರಿಂದ ಉತ್ತರವನ್ನು ಕೋರುತ್ತಿದ್ದೇವೆ. ಅವರು ಖಾಸಗಿ ಟಿವಿ ಚಾನೆಲ್‌ನಲ್ಲಿ ಸುದೀರ್ಘ ವಿವರಣೆಯನ್ನು ನೀಡಿದ್ದಾರೆ. ಆದರೆ, ಈವರೆಗೂ ಸದನದಲ್ಲಿ ಹೇಳಿಕೆ ನೀಡಿಲ್ಲ’ ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಸರ್ಕಾರದ ನಡೆಗೆ ಚಿದಂಬರಂ ಕಿಡಿ:

ಭದ್ರತಾ ವೈಪಲ್ಯದ ಬಗ್ಗೆ ಉತ್ತರ ಕೊಡದ ಸರ್ಕಾರದ ನಡೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ‘ಬಿಜೆಪಿಯ ಆಡಳಿತದಲ್ಲಿ ರಾಜಕೀಯ ಹೊಸ ಆಳಕ್ಕೆ ಇಳಿದಿದೆ. ಡಿಸೆಂಬರ್ 13 ರಂದು ಭೀಕರ ಭದ್ರತಾ ಉಲ್ಲಂಘನೆಯ ಕುರಿತು ಸಂಸತ್ತಿನಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಅಥವಾ ಗೌರವಾನ್ವಿತ ಗೃಹ ಸಚಿವರು ಹೇಳಿಕೆ ನೀಡಬೇಕೆಂದು ಪ್ರತಿಪಕ್ಷಗಳು ಬಯಸಿದರೆ, ಅವರ ಸದಸ್ಯರನ್ನು ಅಮಾನತುಗೊಳಿಸಲಾಗುತ್ತದೆ. ಭದ್ರತೆಯನ್ನು ಉಲ್ಲಂಘಿಸಿದ ಸಂಸದರಿಗೆ ಅಮಾನತು ಅಡ್ಡಿಯಾಗುವುದಿಲ್ಲ. ಇದು ಪ್ರತಿಪಕ್ಷಗಳ ಬಾಯಿ ಮುಚ್ಚಿಸುವ ಉದ್ದೇಶ ಹೊಂದಿದೆ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ; ವೈದ್ಯಕೀಯ ಗರ್ಭಪಾತ ಕಾಯ್ದೆ; ಮಾರ್ಗಸೂಚಿ ಹೊರಡಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...