Homeಮುಖಪುಟಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಲೋಕಸಭೆ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿಯನ್ನು ದೆಹಲಿ ಪೊಲೀಸರು  ಬಂಧಿಸಿದ್ದು, ಪ್ರಕರಣದ ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ್ ಕುಮಾವತ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದ ಮರುದಿನ ಶರಣಾಗಲು ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ಬಂದಿದ್ದ ಲಲಿತ್ ಝಾ ಅವರೊಂದಿಗೆ ಮಹೇಶ್ ಕುಮಾವತ್ ಕೂಡ ಆಗಮಿಸಿದ್ದರು. ಇಬ್ಬರನ್ನೂ ತನಿಖಾಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಅಂದಿನಿಂದಲೆ ಮಹೇಶ್ ಅವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದ ಆರೋಪಿಗಳು ಈ ಹಿಂದೆ ನಿರ್ವಹಣೆ ಮಾಡುತ್ತಿದ್ದ ಭಗತ್ ಸಿಂಗ್ ಫ್ಯಾನ್ ಕ್ಲಬ್ ಪೇಜ್ ನ ಸದಸ್ಯನಾಗಿದ್ದು, ಸಾಕ್ಷ್ಯ ನಾಶ, ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಕುಮಾವತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಆರೋಪಿಗಳ ಮೊಬೈಲ್ ಫೋನ್ ನಲ್ಲಿದ್ದ ಸಾಕ್ಷ್ಯ ನಾಶಪಡಿಸುವ ಕೆಲಸದಲ್ಲಿ ಕುಮಾವತ್ ಭಾಗಿಯಾಗಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಸಿದ ನಂತರ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿಯು ದೇಶದಲ್ಲಿ ಅರಾಜಕತೆಯನ್ನು ಹರಡುವ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಪ್ರಾಸಿಕ್ಯೂಟರ್, ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ವಾದ ಮಂಡಿಸಿದರು.

ಪೊಲೀಸರು ಈಗಾಗಲೇ ಪ್ರಕರಣದ ಮಾಸ್ಟರ್ ಮೈಡ್ ಲಲಿತ್ ಝಾ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈತನೆ ಭದ್ರತೆ ಉಲ್ಲಂಘನೆಯ ಕೃತ್ಯದ ಹಿಂದಿನ ‘ಮಾಸ್ಟರ್ ಮೈಂಡ್’ ಎನ್ನುವುದಕ್ಕೆ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗುರುವಾರ ರಾತ್ರಿಯೇ ಝಾ ಅವರನ್ನು ಬಂಧಿಸಿದ ನಂತರ ಶುಕ್ರವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.

ಅಲ್ಲದೆ, ಆರೋಪಿಯು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ; ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...