Homeಮುಖಪುಟಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

ಲೋಕಸಭೆ ಭದ್ರತಾ ಲೋಪ: ಮತ್ತೋರ್ವ ಆರೋಪಿ ಮಹೇಶ್ ಬಂಧನ, 7 ದಿನ ಪೊಲೀಸ್ ವಶಕ್ಕೆ

- Advertisement -
- Advertisement -

ಲೋಕಸಭೆ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿಯನ್ನು ದೆಹಲಿ ಪೊಲೀಸರು  ಬಂಧಿಸಿದ್ದು, ಪ್ರಕರಣದ ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ್ ಕುಮಾವತ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದ ಮರುದಿನ ಶರಣಾಗಲು ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ಬಂದಿದ್ದ ಲಲಿತ್ ಝಾ ಅವರೊಂದಿಗೆ ಮಹೇಶ್ ಕುಮಾವತ್ ಕೂಡ ಆಗಮಿಸಿದ್ದರು. ಇಬ್ಬರನ್ನೂ ತನಿಖಾಧಿಕಾರಿಗಳ ವಶಕ್ಕೆ ನೀಡಲಾಗಿದ್ದು, ಅಂದಿನಿಂದಲೆ ಮಹೇಶ್ ಅವರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದ ಆರೋಪಿಗಳು ಈ ಹಿಂದೆ ನಿರ್ವಹಣೆ ಮಾಡುತ್ತಿದ್ದ ಭಗತ್ ಸಿಂಗ್ ಫ್ಯಾನ್ ಕ್ಲಬ್ ಪೇಜ್ ನ ಸದಸ್ಯನಾಗಿದ್ದು, ಸಾಕ್ಷ್ಯ ನಾಶ, ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಕುಮಾವತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಆರೋಪಿಗಳ ಮೊಬೈಲ್ ಫೋನ್ ನಲ್ಲಿದ್ದ ಸಾಕ್ಷ್ಯ ನಾಶಪಡಿಸುವ ಕೆಲಸದಲ್ಲಿ ಕುಮಾವತ್ ಭಾಗಿಯಾಗಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಸಿದ ನಂತರ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿಯು ದೇಶದಲ್ಲಿ ಅರಾಜಕತೆಯನ್ನು ಹರಡುವ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಪ್ರಾಸಿಕ್ಯೂಟರ್, ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ವಾದ ಮಂಡಿಸಿದರು.

ಪೊಲೀಸರು ಈಗಾಗಲೇ ಪ್ರಕರಣದ ಮಾಸ್ಟರ್ ಮೈಡ್ ಲಲಿತ್ ಝಾ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈತನೆ ಭದ್ರತೆ ಉಲ್ಲಂಘನೆಯ ಕೃತ್ಯದ ಹಿಂದಿನ ‘ಮಾಸ್ಟರ್ ಮೈಂಡ್’ ಎನ್ನುವುದಕ್ಕೆ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗುರುವಾರ ರಾತ್ರಿಯೇ ಝಾ ಅವರನ್ನು ಬಂಧಿಸಿದ ನಂತರ ಶುಕ್ರವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ.

ಅಲ್ಲದೆ, ಆರೋಪಿಯು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ; ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...