Homeಮುಖಪುಟಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

ಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

- Advertisement -
- Advertisement -

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದ ಐದನೇ ಆರೋಪಿ, ಕೋಲ್ಕತ್ತಾ ನಿವಾಸಿ ಲಲಿತ್ ಝಾ ಅವರನ್ನು ದೆಹಲಿ ಪೊಲೀಸರು ಗುರುವಾರ ಸಂಜೆ ದೆಹಲಿಯಲ್ಲಿ ಬಂಧಿಸಿದ್ದರು. ಇದೀಗ ಝಾ ಮತ್ತು ಟಿಎಂಸಿ ಶಾಸಕ ತಪಸ್ ರಾಯ್ ಇರುವ ಫೋಟೋವನ್ನು ಬಿಜೆಪಿ ಟ್ವೀಟ್ ಮಾಡಿದ್ದು, ಉಭಯ ಪಕ್ಷಗಳು ಎಕ್ಸ್‌ನಲ್ಲಿ ವಾಗ್ವಾದಕ್ಕಿಳಿದಿವೆ.
ಗುರುಗ್ರಾಮ ನಿವಾಸಿ 32 ವರ್ಷದ ಝಾ, 2020ರ ಫೆಬ್ರವರಿ 23ರಂದು ಸರಸ್ವತಿ ಪೂಜೆಯ ಕಾರ್ಯಕ್ರಮದಲ್ಲಿ ತೆಗೆದ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಟಿಎಂಸಿ ಶಾಸಕ ರಾಯ್ ಇದ್ದಾರೆ.

‘ನಮ್ಮ ಪ್ರಜಾಪ್ರಭುತ್ವದ ದೇಗುಲದ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಅವರು ಟಿಎಂಸಿಯ ತಪಸ್ ರಾಯ್ ಅವರೊಂದಿಗೆ ಬಹಳ ಸಮಯದಿಂದ ನಿಕಟ ಒಡನಾಟ ಹೊಂದಿದ್ದರು. ಅವರ ಸಹಕಾರದ ತನಿಖೆಗೆ ಈ ಪುರಾವೆ ಸಾಕಾಗುವುದಿಲ್ಲವೇ’ ಎಂದು ಬಿಜೆಪಿಯ ಪಶ್ಚಿಮ ಬಂಗಾಳದ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಯ್, ‘ಸಾಮಾಜಿಕ ಮಾಧ್ಯಮದ ಪೋಸ್ಟ್‌ಗೆ ಯಾವುದೇ ಮೌಲ್ಯವಿಲ್ಲ. ಒಬ್ಬ ಸಾರ್ವಜನಿಕ ಪ್ರತಿನಿಧಿಯಾಗಿ ನನಗೆ ಅನೇಕ ಬೆಂಬಲಿಗರು ಮತ್ತು ಸಹವರ್ತಿಗಳು ಇದ್ದಾರೆ. ಈ ಕುರಿತು ತನಿಖೆಯಾಗಲಿ; ಆರೋಪ ಸಾಬೀತಾದರೆ ರಾಜಕೀಯ ತ್ಯಜಿಸುತ್ತೇನೆ. ನಾವು ಸಾರ್ವಜನಿಕ ಜೀವನದಲ್ಲಿ ಇದ್ದೇವೆ, ಅನೇಕ ಜನರು ಫೋಟೋ ತೆಗೆದುಕೊಳ್ಳುತ್ತಾರೆ. ಇದು ಫೆಬ್ರವರಿ 2020 ರಲ್ಲಿ ನಡೆದಿದೆ, ಅಂದರೆ ನಾಲ್ಕು ವರ್ಷಗಳ ಹಿಂದೆ ಎಂದು ನಾನು ಕೇಳಿದೆ. ನನಗೆ ಆತನ ಪರಿಚಯವಿಲ್ಲ. ಸಂಸತ್ತಿನ ಭದ್ರತೆ ಗಂಭೀರ ವಿಷಯವಾಗಿದೆ. ಗಮನವನ್ನು ಬೇರೆಡೆಗೆ ತಿರುಗಿಸುವ ಬದಲು ಸೂಕ್ತ ತನಿಖೆಯಾಗಲಿ’ ಎಂದು ಆಗ್ರಹಿಸಿದ್ದಾರೆ.

‘ಲಲಿತ್ ಝಾ ಅವರಿಗಿರುವ ಟಿಎಂಸಿ ಸಂಪರ್ಕವು ಬೆಳಕಿಗೆ ಬಂದಿದೆ, ಟಿಎಂಸಿ ನಾಯಕರೊಂದಿಗಿನ ಅವರ ಹಲವಾರು ಚಿತ್ರಗಳು ವೈರಲ್ ಆಗಿವೆ’ ಎಂದು ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.

‘ಇಲ್ಲಿಯವರೆಗೆ, ಇಡೀ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕಾಂಗ್ರೆಸ್, ಸಿಪಿಐ (ಮಾವೋವಾದಿ) ಮತ್ತು ಈಗ ಟಿಎಂಸಿಯೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಂದು ಕಂಡುಬಂದಿದೆ. ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವುದು ಹತಾಶ I.N.D.I ಮೈತ್ರಿ ಎಂಬುದು ಸ್ಪಷ್ಟವಾಗುತ್ತಿದೆಯೇ’ ಎಂದಿದ್ದಾರೆ.

ಮಾಳವಿಯಾ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, ‘ನಾವು ಸತ್ಯವನ್ನು ಪರಿಶೀಲಿಸೋಣ… ಅಪರಾಧಿಗಳಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊರತುಪಡಿಸಿ ಬೇರೆ ಯಾರೂ ಪ್ರವೇಶ ಪಾಸ್ ನೀಡಲಿಲ್ಲ. ಸಾಮಾನ್ಯವಾಗಿ ಸಂಸತ್ತಿನ ಭದ್ರತೆಗಾಗಿ 300 ಜನ ಇರುತ್ತಿದ್ದರು. ಆದರೆ, ಕೇವಲ 176 ದೆಹಲಿ ಪೊಲೀಸ್ ಸಿಬ್ಬಂದಿ ಮಾತ್ರ ಅಂದು ಕರ್ತವ್ಯದಲ್ಲಿದ್ದರು. ಬಿಜೆಪಿಯ ಆಂತರಿಕ ವೈಫಲ್ಯಗಳು ಸಂಸತ್ತಿನ ಭದ್ರತೆ ಉಲ್ಲಂಘನೆಗೆ ಕಾರಣವಾಯಿತು. ಈಗ, ಈ ಕರ್ತವ್ಯಲೋಪಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವಾಗ, ಅವರ ತಪ್ಪಿನ ಗಮನವನ್ನು ಬೇರೆಡೆ ಸೆಳೆಯಲು ಮಾಳವಿಯಾ ಅವರಂತಹ ಬಿಜೆಪಿ ಪ್ರಚಾರಕರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ; ಸಂಸತ್ ಭದ್ರತಾ ಲೋಪ: ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....