Homeಮುಖಪುಟಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

ಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

- Advertisement -
- Advertisement -

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದ ಐದನೇ ಆರೋಪಿ, ಕೋಲ್ಕತ್ತಾ ನಿವಾಸಿ ಲಲಿತ್ ಝಾ ಅವರನ್ನು ದೆಹಲಿ ಪೊಲೀಸರು ಗುರುವಾರ ಸಂಜೆ ದೆಹಲಿಯಲ್ಲಿ ಬಂಧಿಸಿದ್ದರು. ಇದೀಗ ಝಾ ಮತ್ತು ಟಿಎಂಸಿ ಶಾಸಕ ತಪಸ್ ರಾಯ್ ಇರುವ ಫೋಟೋವನ್ನು ಬಿಜೆಪಿ ಟ್ವೀಟ್ ಮಾಡಿದ್ದು, ಉಭಯ ಪಕ್ಷಗಳು ಎಕ್ಸ್‌ನಲ್ಲಿ ವಾಗ್ವಾದಕ್ಕಿಳಿದಿವೆ.
ಗುರುಗ್ರಾಮ ನಿವಾಸಿ 32 ವರ್ಷದ ಝಾ, 2020ರ ಫೆಬ್ರವರಿ 23ರಂದು ಸರಸ್ವತಿ ಪೂಜೆಯ ಕಾರ್ಯಕ್ರಮದಲ್ಲಿ ತೆಗೆದ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಟಿಎಂಸಿ ಶಾಸಕ ರಾಯ್ ಇದ್ದಾರೆ.

‘ನಮ್ಮ ಪ್ರಜಾಪ್ರಭುತ್ವದ ದೇಗುಲದ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಅವರು ಟಿಎಂಸಿಯ ತಪಸ್ ರಾಯ್ ಅವರೊಂದಿಗೆ ಬಹಳ ಸಮಯದಿಂದ ನಿಕಟ ಒಡನಾಟ ಹೊಂದಿದ್ದರು. ಅವರ ಸಹಕಾರದ ತನಿಖೆಗೆ ಈ ಪುರಾವೆ ಸಾಕಾಗುವುದಿಲ್ಲವೇ’ ಎಂದು ಬಿಜೆಪಿಯ ಪಶ್ಚಿಮ ಬಂಗಾಳದ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಯ್, ‘ಸಾಮಾಜಿಕ ಮಾಧ್ಯಮದ ಪೋಸ್ಟ್‌ಗೆ ಯಾವುದೇ ಮೌಲ್ಯವಿಲ್ಲ. ಒಬ್ಬ ಸಾರ್ವಜನಿಕ ಪ್ರತಿನಿಧಿಯಾಗಿ ನನಗೆ ಅನೇಕ ಬೆಂಬಲಿಗರು ಮತ್ತು ಸಹವರ್ತಿಗಳು ಇದ್ದಾರೆ. ಈ ಕುರಿತು ತನಿಖೆಯಾಗಲಿ; ಆರೋಪ ಸಾಬೀತಾದರೆ ರಾಜಕೀಯ ತ್ಯಜಿಸುತ್ತೇನೆ. ನಾವು ಸಾರ್ವಜನಿಕ ಜೀವನದಲ್ಲಿ ಇದ್ದೇವೆ, ಅನೇಕ ಜನರು ಫೋಟೋ ತೆಗೆದುಕೊಳ್ಳುತ್ತಾರೆ. ಇದು ಫೆಬ್ರವರಿ 2020 ರಲ್ಲಿ ನಡೆದಿದೆ, ಅಂದರೆ ನಾಲ್ಕು ವರ್ಷಗಳ ಹಿಂದೆ ಎಂದು ನಾನು ಕೇಳಿದೆ. ನನಗೆ ಆತನ ಪರಿಚಯವಿಲ್ಲ. ಸಂಸತ್ತಿನ ಭದ್ರತೆ ಗಂಭೀರ ವಿಷಯವಾಗಿದೆ. ಗಮನವನ್ನು ಬೇರೆಡೆಗೆ ತಿರುಗಿಸುವ ಬದಲು ಸೂಕ್ತ ತನಿಖೆಯಾಗಲಿ’ ಎಂದು ಆಗ್ರಹಿಸಿದ್ದಾರೆ.

‘ಲಲಿತ್ ಝಾ ಅವರಿಗಿರುವ ಟಿಎಂಸಿ ಸಂಪರ್ಕವು ಬೆಳಕಿಗೆ ಬಂದಿದೆ, ಟಿಎಂಸಿ ನಾಯಕರೊಂದಿಗಿನ ಅವರ ಹಲವಾರು ಚಿತ್ರಗಳು ವೈರಲ್ ಆಗಿವೆ’ ಎಂದು ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.

‘ಇಲ್ಲಿಯವರೆಗೆ, ಇಡೀ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕಾಂಗ್ರೆಸ್, ಸಿಪಿಐ (ಮಾವೋವಾದಿ) ಮತ್ತು ಈಗ ಟಿಎಂಸಿಯೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಂದು ಕಂಡುಬಂದಿದೆ. ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವುದು ಹತಾಶ I.N.D.I ಮೈತ್ರಿ ಎಂಬುದು ಸ್ಪಷ್ಟವಾಗುತ್ತಿದೆಯೇ’ ಎಂದಿದ್ದಾರೆ.

ಮಾಳವಿಯಾ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, ‘ನಾವು ಸತ್ಯವನ್ನು ಪರಿಶೀಲಿಸೋಣ… ಅಪರಾಧಿಗಳಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊರತುಪಡಿಸಿ ಬೇರೆ ಯಾರೂ ಪ್ರವೇಶ ಪಾಸ್ ನೀಡಲಿಲ್ಲ. ಸಾಮಾನ್ಯವಾಗಿ ಸಂಸತ್ತಿನ ಭದ್ರತೆಗಾಗಿ 300 ಜನ ಇರುತ್ತಿದ್ದರು. ಆದರೆ, ಕೇವಲ 176 ದೆಹಲಿ ಪೊಲೀಸ್ ಸಿಬ್ಬಂದಿ ಮಾತ್ರ ಅಂದು ಕರ್ತವ್ಯದಲ್ಲಿದ್ದರು. ಬಿಜೆಪಿಯ ಆಂತರಿಕ ವೈಫಲ್ಯಗಳು ಸಂಸತ್ತಿನ ಭದ್ರತೆ ಉಲ್ಲಂಘನೆಗೆ ಕಾರಣವಾಯಿತು. ಈಗ, ಈ ಕರ್ತವ್ಯಲೋಪಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವಾಗ, ಅವರ ತಪ್ಪಿನ ಗಮನವನ್ನು ಬೇರೆಡೆ ಸೆಳೆಯಲು ಮಾಳವಿಯಾ ಅವರಂತಹ ಬಿಜೆಪಿ ಪ್ರಚಾರಕರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ; ಸಂಸತ್ ಭದ್ರತಾ ಲೋಪ: ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...