Homeಮುಖಪುಟಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

ಲೋಕಸಭೆ ಭದ್ರತಾ ಲೋಪ: 5ನೇ ಆರೋಪಿಗೆ ಟಿಎಂಸಿ ಸಂಪರ್ಕವಿದೆ ಎಂದ ಬಿಜೆಪಿ

- Advertisement -
- Advertisement -

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದ ಐದನೇ ಆರೋಪಿ, ಕೋಲ್ಕತ್ತಾ ನಿವಾಸಿ ಲಲಿತ್ ಝಾ ಅವರನ್ನು ದೆಹಲಿ ಪೊಲೀಸರು ಗುರುವಾರ ಸಂಜೆ ದೆಹಲಿಯಲ್ಲಿ ಬಂಧಿಸಿದ್ದರು. ಇದೀಗ ಝಾ ಮತ್ತು ಟಿಎಂಸಿ ಶಾಸಕ ತಪಸ್ ರಾಯ್ ಇರುವ ಫೋಟೋವನ್ನು ಬಿಜೆಪಿ ಟ್ವೀಟ್ ಮಾಡಿದ್ದು, ಉಭಯ ಪಕ್ಷಗಳು ಎಕ್ಸ್‌ನಲ್ಲಿ ವಾಗ್ವಾದಕ್ಕಿಳಿದಿವೆ.
ಗುರುಗ್ರಾಮ ನಿವಾಸಿ 32 ವರ್ಷದ ಝಾ, 2020ರ ಫೆಬ್ರವರಿ 23ರಂದು ಸರಸ್ವತಿ ಪೂಜೆಯ ಕಾರ್ಯಕ್ರಮದಲ್ಲಿ ತೆಗೆದ ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಟಿಎಂಸಿ ಶಾಸಕ ರಾಯ್ ಇದ್ದಾರೆ.

‘ನಮ್ಮ ಪ್ರಜಾಪ್ರಭುತ್ವದ ದೇಗುಲದ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಅವರು ಟಿಎಂಸಿಯ ತಪಸ್ ರಾಯ್ ಅವರೊಂದಿಗೆ ಬಹಳ ಸಮಯದಿಂದ ನಿಕಟ ಒಡನಾಟ ಹೊಂದಿದ್ದರು. ಅವರ ಸಹಕಾರದ ತನಿಖೆಗೆ ಈ ಪುರಾವೆ ಸಾಕಾಗುವುದಿಲ್ಲವೇ’ ಎಂದು ಬಿಜೆಪಿಯ ಪಶ್ಚಿಮ ಬಂಗಾಳದ ಅಧ್ಯಕ್ಷ ಸುಕಾಂತ ಮಜುಂದಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಯ್, ‘ಸಾಮಾಜಿಕ ಮಾಧ್ಯಮದ ಪೋಸ್ಟ್‌ಗೆ ಯಾವುದೇ ಮೌಲ್ಯವಿಲ್ಲ. ಒಬ್ಬ ಸಾರ್ವಜನಿಕ ಪ್ರತಿನಿಧಿಯಾಗಿ ನನಗೆ ಅನೇಕ ಬೆಂಬಲಿಗರು ಮತ್ತು ಸಹವರ್ತಿಗಳು ಇದ್ದಾರೆ. ಈ ಕುರಿತು ತನಿಖೆಯಾಗಲಿ; ಆರೋಪ ಸಾಬೀತಾದರೆ ರಾಜಕೀಯ ತ್ಯಜಿಸುತ್ತೇನೆ. ನಾವು ಸಾರ್ವಜನಿಕ ಜೀವನದಲ್ಲಿ ಇದ್ದೇವೆ, ಅನೇಕ ಜನರು ಫೋಟೋ ತೆಗೆದುಕೊಳ್ಳುತ್ತಾರೆ. ಇದು ಫೆಬ್ರವರಿ 2020 ರಲ್ಲಿ ನಡೆದಿದೆ, ಅಂದರೆ ನಾಲ್ಕು ವರ್ಷಗಳ ಹಿಂದೆ ಎಂದು ನಾನು ಕೇಳಿದೆ. ನನಗೆ ಆತನ ಪರಿಚಯವಿಲ್ಲ. ಸಂಸತ್ತಿನ ಭದ್ರತೆ ಗಂಭೀರ ವಿಷಯವಾಗಿದೆ. ಗಮನವನ್ನು ಬೇರೆಡೆಗೆ ತಿರುಗಿಸುವ ಬದಲು ಸೂಕ್ತ ತನಿಖೆಯಾಗಲಿ’ ಎಂದು ಆಗ್ರಹಿಸಿದ್ದಾರೆ.

‘ಲಲಿತ್ ಝಾ ಅವರಿಗಿರುವ ಟಿಎಂಸಿ ಸಂಪರ್ಕವು ಬೆಳಕಿಗೆ ಬಂದಿದೆ, ಟಿಎಂಸಿ ನಾಯಕರೊಂದಿಗಿನ ಅವರ ಹಲವಾರು ಚಿತ್ರಗಳು ವೈರಲ್ ಆಗಿವೆ’ ಎಂದು ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.

‘ಇಲ್ಲಿಯವರೆಗೆ, ಇಡೀ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕಾಂಗ್ರೆಸ್, ಸಿಪಿಐ (ಮಾವೋವಾದಿ) ಮತ್ತು ಈಗ ಟಿಎಂಸಿಯೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಂದು ಕಂಡುಬಂದಿದೆ. ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವುದು ಹತಾಶ I.N.D.I ಮೈತ್ರಿ ಎಂಬುದು ಸ್ಪಷ್ಟವಾಗುತ್ತಿದೆಯೇ’ ಎಂದಿದ್ದಾರೆ.

ಮಾಳವಿಯಾ ಪೋಸ್ಟ್‌ಗೆ ತಿರುಗೇಟು ಕೊಟ್ಟಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, ‘ನಾವು ಸತ್ಯವನ್ನು ಪರಿಶೀಲಿಸೋಣ… ಅಪರಾಧಿಗಳಿಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೊರತುಪಡಿಸಿ ಬೇರೆ ಯಾರೂ ಪ್ರವೇಶ ಪಾಸ್ ನೀಡಲಿಲ್ಲ. ಸಾಮಾನ್ಯವಾಗಿ ಸಂಸತ್ತಿನ ಭದ್ರತೆಗಾಗಿ 300 ಜನ ಇರುತ್ತಿದ್ದರು. ಆದರೆ, ಕೇವಲ 176 ದೆಹಲಿ ಪೊಲೀಸ್ ಸಿಬ್ಬಂದಿ ಮಾತ್ರ ಅಂದು ಕರ್ತವ್ಯದಲ್ಲಿದ್ದರು. ಬಿಜೆಪಿಯ ಆಂತರಿಕ ವೈಫಲ್ಯಗಳು ಸಂಸತ್ತಿನ ಭದ್ರತೆ ಉಲ್ಲಂಘನೆಗೆ ಕಾರಣವಾಯಿತು. ಈಗ, ಈ ಕರ್ತವ್ಯಲೋಪಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವಾಗ, ಅವರ ತಪ್ಪಿನ ಗಮನವನ್ನು ಬೇರೆಡೆ ಸೆಳೆಯಲು ಮಾಳವಿಯಾ ಅವರಂತಹ ಬಿಜೆಪಿ ಪ್ರಚಾರಕರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ; ಸಂಸತ್ ಭದ್ರತಾ ಲೋಪ: ಬಂಧಿತ ನಾಲ್ವರು 7 ದಿನ ಪೊಲೀಸ್ ಕಸ್ಟಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...