Homeಮುಖಪುಟಲೋಕಸಭೆ ಭದ್ರತಾ ಲೋಪ: 'ಶೂ' ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

- Advertisement -
- Advertisement -

ಸಂಸತ್ ಭವನದ ಬಿಗಿ ಭದ್ರತೆ ದಾಟಿ ಲೋಕಸಭೆಯೊಳಗೆ ಪ್ರವೇಶಿಸಿ, ‘ಕಲರ್ ಸ್ಮೋಕ್’ ದಾಳಿ ನಡೆಸಿದ್ದವರಲ್ಲಿ ಒಬ್ಬನಾಗಿರುವ ಮೈಸೂರು ನಿವಾಸಿ ಮನೋರಂಜನ್, ಸಂಸತ್ತಿನಲ್ಲಿ ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದು ಬುಧವಾರ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ಮನೋರಂಜನ್, ಸಂಸತ್ತಿನ ಪ್ರವೇಶದ ಸಮಯದಲ್ಲಿ ಶೂಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಕಳೆದ ಜುಲೈನಲ್ಲೆ ಕಂಡುಕೊಂಡಿದ್ದ. ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮನೋರಂಜನ್ ‘ಕಂಡದ್ದು’ ಭದ್ರತಾ ಉಲ್ಲಂಘನೆಗೆ ಉಪಯುಕ್ತವಾಯಿತು. ‘ಜುಲೈನಲ್ಲಿ ದೆಹಲಿಗೆ ಬಂದಿದ್ದ ಮನೋರಂಜನ್, ಸಂಸದರ ಹೆಸರಿನಲ್ಲಿ ನೀಡಲಾದ ವಿಸಿಟರ್ ಪಾಸ್‌ನಲ್ಲಿ ಸಂಸತ್ ಪ್ರವೇಶಿಸಿದ್ದ ಎನ್ನಲಾಗಿದೆ. ಪರಿಶೀಲನೆ ವೇಳೆ ಬೂಟುಗಳನ್ನು ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ತಿಳಿದುಕೊಂಡಿದ್ದ.

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಐದು ಜನ ಪ್ರಮುಖ ಆರೋಪಿಗಳಾಗಿದ್ದಾರೆ.

ತಮ್ಮ ಯೋಜನೆಯಂತೆ, ಸಂಸತ್ ಪ್ರವೇಶಿಸುವ ಸಲುವಾಗಿ ಇವರೆಲ್ಲರೂ ಡಿಸೆಂಬರ್ 10 ರಂದು ದೆಹಲಿಯನ್ನು ತಲುಪಿದ್ದರು. ಅವರಿಗೆ ಗುರುಗ್ರಾಮದ ವಿಶಾಲ್ ಶರ್ಮಾ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಘಟನೆ ನಂತರ ಮನೋರಂಜನ್, ಸಾಗರ್, ನೀಲಂ ಮತ್ತು ಅನ್ಮೋಲ್ ಅವರನ್ನು ನಿನ್ನೆಯೇ ಬಂಧಿಸಲಾಗಿದ್ದು, ಅವರ ವಿರುದ್ಧ ಯುಎಪಿಎ ಆರೋಪವನ್ನು ಹೊರಿಸಲಾಗಿದೆ. ಇಂದು ವಿಶಾಲ್ ಶರ್ಮಾನನ್ನೂ ಕೂಡ ಬಂಧಿಸಲಾಗಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಲಲಿತ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಮೈಸೂರಿನಲ್ಲಿ ಭೇಟಿಯಾಗಿದ್ದರು. ಅಲ್ಲಿ ಅವರು ಸಂಸತ್ತಿಗೆ ನುಗ್ಗುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ನಂತರ ಅವರು ನೀಲಂ ಮತ್ತು ಅಮೋಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದರು.

ಘಟನೆ ನಂತರ ಲಲಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನಂತರ ಅದನ್ನು ಪಶ್ಚಿಮ ಬಂಗಾಳದ ವಿಶಾಲ್ ಶರ್ಮಾ ಮತ್ತು ನೀಲಾಕ್ಷ ಐಚ್ ಅವರಿಗೆ ಕಳುಹಿಸಿದ್ದಾರೆ. ಇಲ್ಲಿಯವರೆಗಿನ ತನಿಖೆಯಲ್ಲಿ ಯಾವುದೇ ಭಯೋತ್ಪಾದಕ ಸಂಘಟನೆಯ ಸಂಪರ್ಕ ಬಂಧಿತರಿಗೆ ಇರುವುದು ಪತ್ತೆಯಾಗಿಲ್ಲ. ಮನೋರಂಜನ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ ಎಂದು ಮೈಸೂರು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದರೆ ಆತ ‘ಕ್ರಾಂತಿಕಾರಿ’ಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

ಇನ್ನು ಅಮೋಲ್ ಡಿ. 9 ರಂದು ಸೇನಾ ನೇಮಕಾತಿಗಾಗಿ ದೆಹಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಈತ ಮಹಾರಾಷ್ಟ್ರದ ಕಲ್ಯಾಣ್‌ನಿಂದ ಸುಮಾರು ₹1,200 ಬೆಲೆಗೆ ಬಣ್ಣದ ಹೊಗೆ ಡಬ್ಬಿಗಳನ್ನು (ಸ್ಮೋಕ್ ಬಾಂಬ್) ಖರೀದಿಸಿದ್ದ ಎಂದು ತಿಳಿದುಬಂದಿದೆ.

ಆಶ್ರಯ ನೀಡಿದ್ದ ವಿಶಾಲ್ ಶರ್ಮಾ ಬಂಧನ:

ಲೋಕಸಭೆಯ ಭದ್ರತಾ ಲೋಪದ 5ನೇ ಶಂಕಿತ ಆರೋಪಿ ವಿಶಾಲ್ ಶರ್ಮಾ ಎಂಬಾತನನ್ನು ತನಿಖಾ ತಂಡ ಗುರುಗ್ರಾಮದಲ್ಲಿ ವಶಕ್ಕೆ ಪಡೆದಿದೆ. ಈತ ಯೋಜನೆ ರೂಪಿಸಿದ ನಾಲ್ವರಿಗೆ ಆಶ್ರಯ ನೀಡಿದ್ದಾನೆ ಎನ್ನಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಅಧಿವೇಶನದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಧುಮುಕಿ ಹಳದಿ ಬಣ್ಣದ ಹೊಗೆಯನ್ನು (ಸ್ಮೂಕ್ ಬಾಂಬ್) ಸ್ಪೋಟಿಸಿದರು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಕೂಡ ಹಳದಿ ಹೊಗೆ ಸ್ಪೋಟಿಸಿ ಘೋಷಣೆ ಕೂಗಿದರು. ಬಂಧಿತ ಐವರೂ ಕೂಡ ವಿಭಿನ್ನ ಹಿನ್ನೆಲೆಯವರಾಗಿದ್ದು, ಎಲ್ಲರೂ ನಿರುದ್ಯೋಗಿ ಯುವಕರು.

ಆರು ಆರೋಪಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದರೂ ಒಬ್ಬರಿಗೊಬ್ಬರು ಮೊದಲೇ ಪರಿಚಿತರಾಗಿದ್ದರು. ಬುಧವಾರ ಸಂಸತ್ತಿನಲ್ಲಿ ಅವರು ಏನು ಮಾಡುತ್ತಿದ್ದಾರೆಂಬುದು ಅವರ ಕುಟುಂಬದ ಸದಸ್ಯರಿಗೆ ತಿಳಿದಿರಲಿಲ್ಲ. ಬಂಧಿತರೆಲ್ಲರೂ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ತನಿಖೆ ವೇಳೆ ಅಮೋಲ್ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಂಧಿತರು ಯಾವುದಾದರೂ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ; ಕಲಾಪಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್-ಡಿಎಂಕೆ ಪಕ್ಷದ 14 ಸಂಸದರು ಲೋಕಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...