Homeಮುಖಪುಟಲೋಕಸಭೆ ಭದ್ರತಾ ಲೋಪ: 'ಶೂ' ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

- Advertisement -
- Advertisement -

ಸಂಸತ್ ಭವನದ ಬಿಗಿ ಭದ್ರತೆ ದಾಟಿ ಲೋಕಸಭೆಯೊಳಗೆ ಪ್ರವೇಶಿಸಿ, ‘ಕಲರ್ ಸ್ಮೋಕ್’ ದಾಳಿ ನಡೆಸಿದ್ದವರಲ್ಲಿ ಒಬ್ಬನಾಗಿರುವ ಮೈಸೂರು ನಿವಾಸಿ ಮನೋರಂಜನ್, ಸಂಸತ್ತಿನಲ್ಲಿ ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದು ಬುಧವಾರ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ಮನೋರಂಜನ್, ಸಂಸತ್ತಿನ ಪ್ರವೇಶದ ಸಮಯದಲ್ಲಿ ಶೂಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಕಳೆದ ಜುಲೈನಲ್ಲೆ ಕಂಡುಕೊಂಡಿದ್ದ. ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮನೋರಂಜನ್ ‘ಕಂಡದ್ದು’ ಭದ್ರತಾ ಉಲ್ಲಂಘನೆಗೆ ಉಪಯುಕ್ತವಾಯಿತು. ‘ಜುಲೈನಲ್ಲಿ ದೆಹಲಿಗೆ ಬಂದಿದ್ದ ಮನೋರಂಜನ್, ಸಂಸದರ ಹೆಸರಿನಲ್ಲಿ ನೀಡಲಾದ ವಿಸಿಟರ್ ಪಾಸ್‌ನಲ್ಲಿ ಸಂಸತ್ ಪ್ರವೇಶಿಸಿದ್ದ ಎನ್ನಲಾಗಿದೆ. ಪರಿಶೀಲನೆ ವೇಳೆ ಬೂಟುಗಳನ್ನು ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ತಿಳಿದುಕೊಂಡಿದ್ದ.

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಐದು ಜನ ಪ್ರಮುಖ ಆರೋಪಿಗಳಾಗಿದ್ದಾರೆ.

ತಮ್ಮ ಯೋಜನೆಯಂತೆ, ಸಂಸತ್ ಪ್ರವೇಶಿಸುವ ಸಲುವಾಗಿ ಇವರೆಲ್ಲರೂ ಡಿಸೆಂಬರ್ 10 ರಂದು ದೆಹಲಿಯನ್ನು ತಲುಪಿದ್ದರು. ಅವರಿಗೆ ಗುರುಗ್ರಾಮದ ವಿಶಾಲ್ ಶರ್ಮಾ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಘಟನೆ ನಂತರ ಮನೋರಂಜನ್, ಸಾಗರ್, ನೀಲಂ ಮತ್ತು ಅನ್ಮೋಲ್ ಅವರನ್ನು ನಿನ್ನೆಯೇ ಬಂಧಿಸಲಾಗಿದ್ದು, ಅವರ ವಿರುದ್ಧ ಯುಎಪಿಎ ಆರೋಪವನ್ನು ಹೊರಿಸಲಾಗಿದೆ. ಇಂದು ವಿಶಾಲ್ ಶರ್ಮಾನನ್ನೂ ಕೂಡ ಬಂಧಿಸಲಾಗಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಲಲಿತ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಮೈಸೂರಿನಲ್ಲಿ ಭೇಟಿಯಾಗಿದ್ದರು. ಅಲ್ಲಿ ಅವರು ಸಂಸತ್ತಿಗೆ ನುಗ್ಗುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ನಂತರ ಅವರು ನೀಲಂ ಮತ್ತು ಅಮೋಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದರು.

ಘಟನೆ ನಂತರ ಲಲಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನಂತರ ಅದನ್ನು ಪಶ್ಚಿಮ ಬಂಗಾಳದ ವಿಶಾಲ್ ಶರ್ಮಾ ಮತ್ತು ನೀಲಾಕ್ಷ ಐಚ್ ಅವರಿಗೆ ಕಳುಹಿಸಿದ್ದಾರೆ. ಇಲ್ಲಿಯವರೆಗಿನ ತನಿಖೆಯಲ್ಲಿ ಯಾವುದೇ ಭಯೋತ್ಪಾದಕ ಸಂಘಟನೆಯ ಸಂಪರ್ಕ ಬಂಧಿತರಿಗೆ ಇರುವುದು ಪತ್ತೆಯಾಗಿಲ್ಲ. ಮನೋರಂಜನ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ ಎಂದು ಮೈಸೂರು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದರೆ ಆತ ‘ಕ್ರಾಂತಿಕಾರಿ’ಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

ಇನ್ನು ಅಮೋಲ್ ಡಿ. 9 ರಂದು ಸೇನಾ ನೇಮಕಾತಿಗಾಗಿ ದೆಹಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಈತ ಮಹಾರಾಷ್ಟ್ರದ ಕಲ್ಯಾಣ್‌ನಿಂದ ಸುಮಾರು ₹1,200 ಬೆಲೆಗೆ ಬಣ್ಣದ ಹೊಗೆ ಡಬ್ಬಿಗಳನ್ನು (ಸ್ಮೋಕ್ ಬಾಂಬ್) ಖರೀದಿಸಿದ್ದ ಎಂದು ತಿಳಿದುಬಂದಿದೆ.

ಆಶ್ರಯ ನೀಡಿದ್ದ ವಿಶಾಲ್ ಶರ್ಮಾ ಬಂಧನ:

ಲೋಕಸಭೆಯ ಭದ್ರತಾ ಲೋಪದ 5ನೇ ಶಂಕಿತ ಆರೋಪಿ ವಿಶಾಲ್ ಶರ್ಮಾ ಎಂಬಾತನನ್ನು ತನಿಖಾ ತಂಡ ಗುರುಗ್ರಾಮದಲ್ಲಿ ವಶಕ್ಕೆ ಪಡೆದಿದೆ. ಈತ ಯೋಜನೆ ರೂಪಿಸಿದ ನಾಲ್ವರಿಗೆ ಆಶ್ರಯ ನೀಡಿದ್ದಾನೆ ಎನ್ನಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಅಧಿವೇಶನದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಧುಮುಕಿ ಹಳದಿ ಬಣ್ಣದ ಹೊಗೆಯನ್ನು (ಸ್ಮೂಕ್ ಬಾಂಬ್) ಸ್ಪೋಟಿಸಿದರು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಕೂಡ ಹಳದಿ ಹೊಗೆ ಸ್ಪೋಟಿಸಿ ಘೋಷಣೆ ಕೂಗಿದರು. ಬಂಧಿತ ಐವರೂ ಕೂಡ ವಿಭಿನ್ನ ಹಿನ್ನೆಲೆಯವರಾಗಿದ್ದು, ಎಲ್ಲರೂ ನಿರುದ್ಯೋಗಿ ಯುವಕರು.

ಆರು ಆರೋಪಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದರೂ ಒಬ್ಬರಿಗೊಬ್ಬರು ಮೊದಲೇ ಪರಿಚಿತರಾಗಿದ್ದರು. ಬುಧವಾರ ಸಂಸತ್ತಿನಲ್ಲಿ ಅವರು ಏನು ಮಾಡುತ್ತಿದ್ದಾರೆಂಬುದು ಅವರ ಕುಟುಂಬದ ಸದಸ್ಯರಿಗೆ ತಿಳಿದಿರಲಿಲ್ಲ. ಬಂಧಿತರೆಲ್ಲರೂ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ತನಿಖೆ ವೇಳೆ ಅಮೋಲ್ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಂಧಿತರು ಯಾವುದಾದರೂ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ; ಕಲಾಪಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್-ಡಿಎಂಕೆ ಪಕ್ಷದ 14 ಸಂಸದರು ಲೋಕಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...