Homeಮುಖಪುಟಲೋಕಸಭೆ ಭದ್ರತಾ ಲೋಪ: 'ಶೂ' ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

- Advertisement -
- Advertisement -

ಸಂಸತ್ ಭವನದ ಬಿಗಿ ಭದ್ರತೆ ದಾಟಿ ಲೋಕಸಭೆಯೊಳಗೆ ಪ್ರವೇಶಿಸಿ, ‘ಕಲರ್ ಸ್ಮೋಕ್’ ದಾಳಿ ನಡೆಸಿದ್ದವರಲ್ಲಿ ಒಬ್ಬನಾಗಿರುವ ಮೈಸೂರು ನಿವಾಸಿ ಮನೋರಂಜನ್, ಸಂಸತ್ತಿನಲ್ಲಿ ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಎಂದು ತಿಳಿದುಬಂದಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದು ಬುಧವಾರ ಲೋಕಸಭೆ ಪ್ರವೇಶಿಸಿದ ಕರ್ನಾಟಕದ ಮನೋರಂಜನ್, ಸಂಸತ್ತಿನ ಪ್ರವೇಶದ ಸಮಯದಲ್ಲಿ ಶೂಗಳನ್ನು ಪರಿಶೀಲಿಸುವುದಿಲ್ಲ ಎಂಬುದನ್ನು ಕಳೆದ ಜುಲೈನಲ್ಲೆ ಕಂಡುಕೊಂಡಿದ್ದ. ಹಳೆಯ ಸಂಸತ್ತಿನ ಕಟ್ಟಡದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮನೋರಂಜನ್ ‘ಕಂಡದ್ದು’ ಭದ್ರತಾ ಉಲ್ಲಂಘನೆಗೆ ಉಪಯುಕ್ತವಾಯಿತು. ‘ಜುಲೈನಲ್ಲಿ ದೆಹಲಿಗೆ ಬಂದಿದ್ದ ಮನೋರಂಜನ್, ಸಂಸದರ ಹೆಸರಿನಲ್ಲಿ ನೀಡಲಾದ ವಿಸಿಟರ್ ಪಾಸ್‌ನಲ್ಲಿ ಸಂಸತ್ ಪ್ರವೇಶಿಸಿದ್ದ ಎನ್ನಲಾಗಿದೆ. ಪರಿಶೀಲನೆ ವೇಳೆ ಬೂಟುಗಳನ್ನು ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ತಿಳಿದುಕೊಂಡಿದ್ದ.

ಪ್ರಕರಣದಲ್ಲಿ ಒಟ್ಟು ಆರು ಜನ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ರಾಜಸ್ಥಾನದಲ್ಲಿ ಪತ್ತೆಯಾಗಿರುವ ಲಲಿತ್ ಝಾ ಈ ಗುಂಪಿನ ನಾಯಕ ಎನ್ನಲಾಗುತ್ತಿದೆ. ವೃತ್ತಿಯಲ್ಲಿ ಶಿಕ್ಷಕನಾಗಿರುವ ಲಲಿತ್ ಕೋಲ್ಕತ್ತಾದ ನಿವಾಸಿ. ಅವರೆಲ್ಲರೂ ‘ಭಗತ್ ಸಿಂಗ್ ಫ್ಯಾನ್ ಪೇಜ್’ ಅನ್ನು ನಿರ್ವಹಿಸುತ್ತಿದ್ದರು. ಹುತಾತ್ಮ ಭಗತ್ ಸಿಂಗನಂತೆ ಏನನ್ನಾದರೂ ಕ್ರಾಂತಿ ಮಾಡಲು ಬಯಸಿದ್ದರು ಎನ್ನಲಾಗಿದ್ದು, ಲಲಿತ್ ಝಾ, ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಆಜಾದ್, ಅಮೋಲ್ ಶಿಂಧೆ ಅವರು ಬುಧವಾರ ಸಂಸತ್ತಿನ ಆಸುಪಾಸಿನಲ್ಲಿದ್ದ ಐದು ಜನ ಪ್ರಮುಖ ಆರೋಪಿಗಳಾಗಿದ್ದಾರೆ.

ತಮ್ಮ ಯೋಜನೆಯಂತೆ, ಸಂಸತ್ ಪ್ರವೇಶಿಸುವ ಸಲುವಾಗಿ ಇವರೆಲ್ಲರೂ ಡಿಸೆಂಬರ್ 10 ರಂದು ದೆಹಲಿಯನ್ನು ತಲುಪಿದ್ದರು. ಅವರಿಗೆ ಗುರುಗ್ರಾಮದ ವಿಶಾಲ್ ಶರ್ಮಾ ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು. ಘಟನೆ ನಂತರ ಮನೋರಂಜನ್, ಸಾಗರ್, ನೀಲಂ ಮತ್ತು ಅನ್ಮೋಲ್ ಅವರನ್ನು ನಿನ್ನೆಯೇ ಬಂಧಿಸಲಾಗಿದ್ದು, ಅವರ ವಿರುದ್ಧ ಯುಎಪಿಎ ಆರೋಪವನ್ನು ಹೊರಿಸಲಾಗಿದೆ. ಇಂದು ವಿಶಾಲ್ ಶರ್ಮಾನನ್ನೂ ಕೂಡ ಬಂಧಿಸಲಾಗಿದೆ.
ಸುಮಾರು ಒಂದೂವರೆ ವರ್ಷದ ಹಿಂದೆ ಲಲಿತ್, ಸಾಗರ್ ಶರ್ಮಾ ಮತ್ತು ಮನೋರಂಜನ್ ಮೈಸೂರಿನಲ್ಲಿ ಭೇಟಿಯಾಗಿದ್ದರು. ಅಲ್ಲಿ ಅವರು ಸಂಸತ್ತಿಗೆ ನುಗ್ಗುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ನಂತರ ಅವರು ನೀಲಂ ಮತ್ತು ಅಮೋಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದರು.

ಘಟನೆ ನಂತರ ಲಲಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ನಂತರ ಅದನ್ನು ಪಶ್ಚಿಮ ಬಂಗಾಳದ ವಿಶಾಲ್ ಶರ್ಮಾ ಮತ್ತು ನೀಲಾಕ್ಷ ಐಚ್ ಅವರಿಗೆ ಕಳುಹಿಸಿದ್ದಾರೆ. ಇಲ್ಲಿಯವರೆಗಿನ ತನಿಖೆಯಲ್ಲಿ ಯಾವುದೇ ಭಯೋತ್ಪಾದಕ ಸಂಘಟನೆಯ ಸಂಪರ್ಕ ಬಂಧಿತರಿಗೆ ಇರುವುದು ಪತ್ತೆಯಾಗಿಲ್ಲ. ಮನೋರಂಜನ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ ಎಂದು ಮೈಸೂರು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಗಮನಿಸಿದರೆ ಆತ ‘ಕ್ರಾಂತಿಕಾರಿ’ಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ‘ನನ್ನ ಮಗ ಮೋದಿ ಅಭಿಮಾನಿ’ ಎಂದ ಲೋಕಸಭೆಗೆ ನುಗ್ಗಿದ ಮನೋರಂಜನ್ ತಂದೆ!

ಇನ್ನು ಅಮೋಲ್ ಡಿ. 9 ರಂದು ಸೇನಾ ನೇಮಕಾತಿಗಾಗಿ ದೆಹಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಈತ ಮಹಾರಾಷ್ಟ್ರದ ಕಲ್ಯಾಣ್‌ನಿಂದ ಸುಮಾರು ₹1,200 ಬೆಲೆಗೆ ಬಣ್ಣದ ಹೊಗೆ ಡಬ್ಬಿಗಳನ್ನು (ಸ್ಮೋಕ್ ಬಾಂಬ್) ಖರೀದಿಸಿದ್ದ ಎಂದು ತಿಳಿದುಬಂದಿದೆ.

ಆಶ್ರಯ ನೀಡಿದ್ದ ವಿಶಾಲ್ ಶರ್ಮಾ ಬಂಧನ:

ಲೋಕಸಭೆಯ ಭದ್ರತಾ ಲೋಪದ 5ನೇ ಶಂಕಿತ ಆರೋಪಿ ವಿಶಾಲ್ ಶರ್ಮಾ ಎಂಬಾತನನ್ನು ತನಿಖಾ ತಂಡ ಗುರುಗ್ರಾಮದಲ್ಲಿ ವಶಕ್ಕೆ ಪಡೆದಿದೆ. ಈತ ಯೋಜನೆ ರೂಪಿಸಿದ ನಾಲ್ವರಿಗೆ ಆಶ್ರಯ ನೀಡಿದ್ದಾನೆ ಎನ್ನಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಅಧಿವೇಶನದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಧುಮುಕಿ ಹಳದಿ ಬಣ್ಣದ ಹೊಗೆಯನ್ನು (ಸ್ಮೂಕ್ ಬಾಂಬ್) ಸ್ಪೋಟಿಸಿದರು. ಸಂಸತ್ತಿನ ಹೊರಗೆ ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಕೂಡ ಹಳದಿ ಹೊಗೆ ಸ್ಪೋಟಿಸಿ ಘೋಷಣೆ ಕೂಗಿದರು. ಬಂಧಿತ ಐವರೂ ಕೂಡ ವಿಭಿನ್ನ ಹಿನ್ನೆಲೆಯವರಾಗಿದ್ದು, ಎಲ್ಲರೂ ನಿರುದ್ಯೋಗಿ ಯುವಕರು.

ಆರು ಆರೋಪಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿದ್ದರೂ ಒಬ್ಬರಿಗೊಬ್ಬರು ಮೊದಲೇ ಪರಿಚಿತರಾಗಿದ್ದರು. ಬುಧವಾರ ಸಂಸತ್ತಿನಲ್ಲಿ ಅವರು ಏನು ಮಾಡುತ್ತಿದ್ದಾರೆಂಬುದು ಅವರ ಕುಟುಂಬದ ಸದಸ್ಯರಿಗೆ ತಿಳಿದಿರಲಿಲ್ಲ. ಬಂಧಿತರೆಲ್ಲರೂ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ತನಿಖೆ ವೇಳೆ ಅಮೋಲ್ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ಬಂಧಿತರು ಯಾವುದಾದರೂ ಸಂಘ-ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ತಿಳಿದಿಲ್ಲ.

ಇದನ್ನೂ ಓದಿ; ಕಲಾಪಕ್ಕೆ ಅಡ್ಡಿ ಆರೋಪ; ಕಾಂಗ್ರೆಸ್-ಡಿಎಂಕೆ ಪಕ್ಷದ 14 ಸಂಸದರು ಲೋಕಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...