Homeಮುಖಪುಟಲೋಕಸಭೆ ಅಧಿವೇಶನ 2024: ನೀಟ್‌ ಬಗ್ಗೆ ಚರ್ಚೆಗೆ ಒತ್ತಾಯಿಸಿದ ರಾಹುಲ್‌ ಗಾಂಧಿ; ವಿಪಕ್ಷಗಳಿಂದ ಸಭಾತ್ಯಾಗ

ಲೋಕಸಭೆ ಅಧಿವೇಶನ 2024: ನೀಟ್‌ ಬಗ್ಗೆ ಚರ್ಚೆಗೆ ಒತ್ತಾಯಿಸಿದ ರಾಹುಲ್‌ ಗಾಂಧಿ; ವಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಲೋಕಸಭೆ ಅಧಿವೇಶನದಲ್ಲಿ ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಪ್ರತ್ಯೇಕ ಒಂದು ದಿನದ ಚರ್ಚೆಗೆ ಒತ್ತಾಯಿಸಿದ ಪ್ರತಿಪಕ್ಷ ಸದಸ್ಯರು, ಈ ಕುರಿತು ಸರ್ಕಾರದಿಂದ ಸ್ಪಷ್ಟ ಭರವಸೆ ಕೇಳಿದ ನಂತರ ಸಭಾತ್ಯಾಗ ನಡೆಸಿದರು.

ಲೋಕಸಭೆಯ ದಿನದ ಆರಂಭದ ಬಳಿಕ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೀಟ್‌ನಲ್ಲಿನ ಅಕ್ರಮಗಳ ವಿಷಯವನ್ನು ಪ್ರಸ್ತಾಪಿಸಿದರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದೊಂದಿಗೆ ಸದನ ಮುಗಿಯುವವರೆಗೆ ಪ್ರತ್ಯೇಕ ಚರ್ಚೆ ನಡೆಸಲಾಗುವುದಿಲ್ಲ ಎಂದು ಪ್ರತಿಪಾದಿಸಿದರು.

“ನಾವು ನೀಟ್ ಕುರಿತು ಒಂದು ದಿನದ ಚರ್ಚೆಯನ್ನು ಬಯಸಿದ್ದೇವೆ; ಇದು ಪ್ರಮುಖ ವಿಷಯವಾಗಿದೆ. ಎರಡು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. 70 ಸಂದರ್ಭಗಳಲ್ಲಿ ಪೇಪರ್ ಸೋರಿಕೆಯಾಗಿದೆ. ನೀವು ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಾವು ಸಂತೋಷಪಡುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯ ಉಪ ನಾಯಕರಾದ ರಾಜನಾಥ್ ಸಿಂಗ್, ಸದನವು ಕೆಲವು ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಹೊಂದಿದೆ ಮತ್ತು ಆರೋಗ್ಯಕರ ಸಂಪ್ರದಾಯವನ್ನು ಹೊಂದಿದೆ, ಅದು ಈ ಸದನದ ಶಕ್ತಿಯಾಗಿದೆ ಎಂದರು.

“ಸಂಸತ್ ಸದಸ್ಯನಾಗಿ ನನ್ನ ದಶಕಗಳ ಸುದೀರ್ಘ ಅಧಿಕಾರಾವಧಿಯಲ್ಲಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಬೇರೆ ಯಾವುದೇ ವಿಷಯವನ್ನು ಎಂದಿಗೂ ತೆಗೆದುಕೊಂಡಿಲ್ಲ. ವಂದನಾ ನಿರ್ಣಯವನ್ನು ಅಂಗೀಕರಿಸಿದ ನಂತರ ಇತರ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು” ಎಂದು ಸಿಂಗ್ ಹೇಳಿದರು.

ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಹುಲ್, ಮತ್ತು ಇತರ ವಿರೋಧ ಪಕ್ಷದ ನಾಯಕರು, ವಂದನಾ ನಿರ್ಣಯದ ಮೇಲಿನ ಚರ್ಚೆಯ ನಂತರ ಸದನವು ಈ ವಿಷಯವನ್ನು ಚರ್ಚಿಸಬೇಕೆಂದು ಒತ್ತಾಯಿಸಿದರು; ಜೊತೆಗೆ, ಸರ್ಕಾರದಿಂದ ನಿರ್ದಿಷ್ಟ ಭರವಸೆಯನ್ನು ಕೋರಿದರು.

“ನೀಟ್ ವಿಷಯವು ನಮಗೆ ಬಹಳ ಮುಖ್ಯವಾಗಿದೆ ಎಂದು ನಾವು ಸಂಸತ್ತಿನಿಂದ ವಿದ್ಯಾರ್ಥಿಗಳಿಗೆ ಸಂದೇಶವನ್ನು ಕಳುಹಿಸಬಹುದು” ಎಂದು ರಾಹುಲ್ ಗಾಂಧಿ ಆಡಳಿತ ಪಕ್ಷದ ಮೇಲೆ ಒತ್ತಡ ಹೇರಿದರು.

‘ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಬೇರೆ ಯಾವುದೇ ಚರ್ಚೆಯನ್ನು ತೆಗೆದುಕೊಳ್ಳುವ ಸಂಪ್ರದಾಯವಿಲ್ಲ’ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿ, ಸದಸ್ಯರು ನೀಟ್ ಮೇಲಿನ ಚರ್ಚೆಗೆ ಪ್ರತ್ಯೇಕ ನೋಟಿಸ್ ನೀಡಬಹುದು ಎಂದು ಸಲಹೆ ನೀಡಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಆರಂಭಿಸಲು ಸ್ಪೀಕರ್ ಬಿಜೆಪಿ ಸದಸ್ಯ ಅನುರಾಗ್ ಠಾಕೂರ್ ಅವರನ್ನು ಕರೆಯುತ್ತಿದ್ದಂತೆ ಪ್ರತಿಪಕ್ಷಗಳ ಸದಸ್ಯರು ಗದ್ದಲ ಆರಂಭಿಸಿದರು. ನೀಟ್ ಕುರಿತು ಪ್ರತ್ಯೇಕ ಚರ್ಚೆ ನಡೆಸುವ ಕುರಿತು ಸರ್ಕಾರದಿಂದ ಸ್ಪಷ್ಟ ಭರವಸೆ ನೀಡುವಂತೆ ಪ್ರತಿಪಕ್ಷದ ಸದಸ್ಯರು ಪಟ್ಟು ಹಿಡಿದು, ಸಭಾತ್ಯಾಗ ನಡೆಸಿದರು.

ಇದನ್ನೂ ಓದಿ; ‘ಇಂಜಿನಿಯರ್ ರಶೀದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಬಹುದು..’; ಎನ್‌ಐಎ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...