Homeಮುಖಪುಟವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

- Advertisement -
- Advertisement -

‘ಪಕ್ಷಪಾತ’ದ ಆರೋಪ ಹೊರಿಸಿ ವಿಪಕ್ಷಗಳು ‘ಅವಿಶ್ವಾಸ ನೋಟಿಸ್’ ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್ ಮತ್ತು ಜಗದಾಂಬಿಕಾ ಪಾಲ್ ಕುಳಿತಿರುವುದು ಕಂಡು ಬಂತು.

ಬಜೆಟ್ ಅಧಿವೇಶನದ ಎರಡನೇ ಭಾಗದ ಮೊದಲ ದಿನವಾದ ಮಾರ್ಚ್ 9ರಂದು ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಅಲ್ಲಿಯವರೆಗೆ ‘ನೈತಿಕ ಹೊಣೆ ಹೊತ್ತು’ ಸದನಕ್ಕೆ ಹಾಜರಾಗದಿರಲು ಸ್ಪೀಕರ್ ನಿರ್ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಅವಿಶ್ವಾಸ ನೋಟಿಸ್ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸದನದ ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ನಿರ್ದೇಶನ ನೀಡಿದ್ದಾರೆ. ನೋಟಿಸ್‌ನಲ್ಲಿ ಕೆಲವು ತಾಂತ್ರಿಕ ದೋಷಗಳಿವೆಯೆಂದು ಲೋಕಸಭಾ ಸಚಿವಾಲಯ ತಿಳಿಸಿದೆ. ಅದನ್ನು ಸರಿಪಡಿಸಿದ ನಂತರ ಮಾರ್ಚ್ 9ರಂದು ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ.

ಕಾಂಗ್ರೆಸ್‌ ನೇತೃತ್ವದ ಅವಿಶ್ವಾಸ ನಿರ್ಣಯದ ನೋಟಿಸ್‌ ಅನ್ನು ಮಂಗಳವಾರ (ಫೆ.10) ಲೋಕಸಭೆ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಇದಕ್ಕೆ ವಿಪಕ್ಷಗಳ 118 ಸಂಸದರು ಸಹಿ ಹಾಕಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ‘ಪಕ್ಷಪಾತ’ ಮಾಡುತ್ತಿದ್ದಾರೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎನ್ನುವುದು ವಿಪಕ್ಷಗಳ ಪ್ರಮುಖ ಆರೋಪವಾಗಿದೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ

ಗದ್ದಲದ ನಡುವೆಯೇ ಬುಧವಾರ (ಫೆ.11) ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು “ಸಂಪೂರ್ಣ ಶರಣಾಗತಿ” ಎಂದು ಕರೆದು, ಇದರಿಂದ ಭಾರತದ ಇಂಧನ ಭದ್ರತೆ ಮತ್ತು ದತ್ತಾಂಶದ ಮೇಲೆ ಪೆಟ್ಟು ಬೀಳಲಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಮಾತನಾಡುವಾಗ ಸಚಿವರಾದ ಕಿರಣ್ ರಿಜಿಜು, ಪ್ರಲ್ಹಾದ್ ಜೋಶಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಮಧ್ಯಪ್ರವೇಶಿಸಿ, ಹಲವು ವಿಷಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಪೀಠದಲ್ಲಿದ್ದ ಜಗದಾಂಬಿಕ ಪಾಲ್ ಕೂಡ ಕೆಲ ವಿಷಯಗಳನ್ನು ಉಲ್ಲೇಖಿಸಲು ರಾಹುಲ್ ಗಾಂಧಿಗೆ ಅವಕಾಶ ನಿರಾಕರಿಸಿದರು.

ಗದ್ದಲದ ನಡುವೆಯೇ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ‘ಕೈಗಾರಿಕಾ ಸಂಬಂಧಗಳ ಸಂಹಿತೆ (ತಿದ್ದುಪಡಿ) ವಿಧೇಯಕ, 2026’ ಅನ್ನು ಸದನದಲ್ಲಿ ಮಂಡಿಸಿದರು.

8 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಮತ್ತು ವಿವಿಧ ವಿಷಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ವಿರೋಧ ಪಕ್ಷದ ಸದಸ್ಯರು ಇಂದೂ ಕೂಡ ಸದನದ ಬಾವಿಗಿಳಿದು ಪ್ರತಿಭಟಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...