Homeಮುಖಪುಟಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು; ಪ್ರತಿಪಕ್ಷಗಳ 30 ಸಂಸದರು ಅಮಾನತು

ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು; ಪ್ರತಿಪಕ್ಷಗಳ 30 ಸಂಸದರು ಅಮಾನತು

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕನಿಷ್ಠ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.

ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದಲ್ಲದೆ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಒಟ್ಟು 46 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯಿಸುವಂತೆ ಆಗ್ರಹಿಸಿ ಪ್ರತಿಭಟಿಸಿದವರಾಗಿದ್ದಾರೆ.

ಅಮಾನತುಗೊಂಡ ಸಂಸದರಲ್ಲಿ ಲೋಕಸಭೆಯ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು  ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದ್ದಾರೆ.

ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರ್ಕಾರವು ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ ಮತ್ತು ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ. ಆದರೆ ಸರಕಾರವು ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಅವರಿಗೆ ಬಹುಮತವಿದೆ, ಅವರು ಅಧಿಕಾರವನ್ನು ಹಿಡಿದಿದ್ದಾರೆ. ಅವರು ಸಂಸತ್ತನ್ನು ಪಕ್ಷದ ಕಚೇರಿಯಂತೆ ನಡೆಸಲು ಬಯಸುತ್ತಾರೆ. ಆದರೆ ಅದು ಸಂಭವಿಸಬಾರದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೌರವ್ ಗೊಗೊಯ್, ಬಿಜೆಪಿ ಸರ್ಕಾರವು ಪ್ರತಿಪಕ್ಷಗಳನ್ನು ಕೆಡವಲು ಪ್ರಯತ್ನಿಸುತ್ತಿದೆ ಮತ್ತು ಗೃಹ ಸಚಿವರು ಭದ್ರತಾ ಲೋಪದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಲೋಕಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯಿಸುವಂತೆ ಆಗ್ರಹಿಸಿದ ತಮ್ಮ ಬೇಡಿಕೆಯನ್ನು ಈಡೇರಿಸದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ. ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿದೆ. ಆಘಾತಕಾರಿ ಘಟನೆಗಳ ಕುರಿತು ಉಭಯ ಸದನಗಳಲ್ಲಿ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು  ಪ್ರತಿ ಪಕ್ಷಗಳು ಒತ್ತಾಯಿಸುತ್ತಿವೆ. ಇದು ಸರಳ, ನೇರ ಮತ್ತು ನ್ಯಾಯಸಮ್ಮತ ಬೇಡಿಕೆಯಾಗಿದೆ. ಆದರೆ ಗೃಹ ಸಚಿವರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯ ಹೇಳಿಕೆ ನೀಡಲು ನಿರಾಕರಿಸಿದ್ದಾರೆ ಎಂದು ರಮೇಶ್ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಗೃಹ ಸಚಿವರ ಹೇಳಿಕೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸದನದ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ ಮತ್ತು ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...