Homeಮುಖಪುಟಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಆಡಳಿತಾರೂಢ ಬಿಜೆಪಿ ಭಾರತದಲ್ಲಿ "ರಾಜ" ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ,  ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಪ್ರತಿಯೊಂದು ಬಂದರು, ಪ್ರತಿ ವಿಮಾನ ನಿಲ್ದಾಣ, ಟವರ್‌, ಪ್ರಸರಣ, ಗಣಿಗಾರಿಕೆ, ಹಸಿರು ಇಂಧನ, ಅನಿಲ ವಿತರಣೆ, ಖಾದ್ಯ ತೈಲ ಎಲ್ಲಾ ಒಬ್ಬ ವ್ಯಕ್ತಿ ಪಡೆಯುತ್ತಿದ್ದಾರೆ. ಎಲ್ಲೆಡೆ ಕೇವಲ ಅದಾನಿ ಇದ್ದಾರೆ. ದೇಶದ ಸಂಪೂರ್ಣ ಸಂಪತ್ತು ಆಯ್ದ ಕೆಲವರಿಗೆ ಮಾತ್ರ ಹೋಗುತ್ತಿದೆ. ಬಿಜೆಪಿ ಸರ್ಕಾರದಿಂದ ಕೆಲವೇ ಕೆಲವು ಕೈಗಾರಿಕೋದ್ಯಮಿಗಳು ಲಾಭ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ದೇಶದ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮುಂದುವರಿದು, “ಗಣರಾಜ್ಯೋತ್ಸವದಂದು ನಿಮಗೆ ಅತಿಥಿಯನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂದು ನೀವೇ ಕೇಳಿಕೊಳ್ಳಿ. ನಾವು ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದ್ದೇವೆ ಮತ್ತು ಸುತ್ತುವರೆದಿದ್ದೇವೆ. ನೀವು (ಬಿಜೆಪಿ) ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದಿದ್ದೀರಿ, ಇದು ದೇಶದ ಜನರಿಗೆ ನೀವು ಮಾಡಿದ ಅತಿ ದೊಡ್ಡ ಅಪರಾಧವಾಗಿದೆ” ಎಂದಿದ್ದಾರೆ.

“ರಾಷ್ಟ್ರವು ಹೊರಗಿನಿಂದಲೂ ಅಪಾಯದಲ್ಲಿದೆ, ರಾಷ್ಟ್ರವು ಒಳಗಿನಿಂದಲೂ ಅಪಾಯದಲ್ಲಿದೆ. ಇದು ತುಂಬಾ ಅಪಾಯಕಾರಿ ಸ್ಥಿತಿ. ನನ್ನ ದೇಶ ಹೊರಗೆ ಸಂಪೂರ್ಣವಾಗಿ ಪ್ರತ್ಯೇಕವಾಗಿದೆ. ಒಳಗೆ ಹೋರಾಡುತ್ತಿದೆ. ರಾಜ್ಯಗಳು ಒಬ್ಬರಿಗೊಬ್ಬರು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಇವೆಲ್ಲ ನನಗೆ ಚಿಂತೆಗೆ ದೂಡುತ್ತವೆ” ಎಂದು ಗಂಭೀರವಾದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಹುಲ್ ಮಾತುಗಳು ನಿಜಕ್ಕೂ ಅವರ ವಿವೇಚನೆಯನ್ನು ಪಣಕ್ಕಿಟ್ಟು ಬಂದ ಅಂತರಾಳದ ಮಾತುಗಳು ಎನ್ನಿಸಿದೆ! ಸರ್ಕಾರದ ವೈಫಲ್ಯವನ್ನು ಪ್ರಬುದ್ದ ಮಾತುಗಳಿಂದ ತೆರೆದಿಟ್ಟ ಅವರನ್ನು, ಅವರ ನಡೆಗಳನ್ನು ಮುಂದೆ ಗಮನಿಸಿ!

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...