Homeಮುಖಪುಟಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ಆಡಳಿತಾರೂಢ ಬಿಜೆಪಿ ಭಾರತದಲ್ಲಿ "ರಾಜ" ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

- Advertisement -
- Advertisement -

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ,  ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಪ್ರತಿಯೊಂದು ಬಂದರು, ಪ್ರತಿ ವಿಮಾನ ನಿಲ್ದಾಣ, ಟವರ್‌, ಪ್ರಸರಣ, ಗಣಿಗಾರಿಕೆ, ಹಸಿರು ಇಂಧನ, ಅನಿಲ ವಿತರಣೆ, ಖಾದ್ಯ ತೈಲ ಎಲ್ಲಾ ಒಬ್ಬ ವ್ಯಕ್ತಿ ಪಡೆಯುತ್ತಿದ್ದಾರೆ. ಎಲ್ಲೆಡೆ ಕೇವಲ ಅದಾನಿ ಇದ್ದಾರೆ. ದೇಶದ ಸಂಪೂರ್ಣ ಸಂಪತ್ತು ಆಯ್ದ ಕೆಲವರಿಗೆ ಮಾತ್ರ ಹೋಗುತ್ತಿದೆ. ಬಿಜೆಪಿ ಸರ್ಕಾರದಿಂದ ಕೆಲವೇ ಕೆಲವು ಕೈಗಾರಿಕೋದ್ಯಮಿಗಳು ಲಾಭ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ದೇಶದ ಅಡಿಪಾಯವನ್ನು ದುರ್ಬಲಗೊಳಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಮುಂದುವರಿದು, “ಗಣರಾಜ್ಯೋತ್ಸವದಂದು ನಿಮಗೆ ಅತಿಥಿಯನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂದು ನೀವೇ ಕೇಳಿಕೊಳ್ಳಿ. ನಾವು ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದ್ದೇವೆ ಮತ್ತು ಸುತ್ತುವರೆದಿದ್ದೇವೆ. ನೀವು (ಬಿಜೆಪಿ) ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದಿದ್ದೀರಿ, ಇದು ದೇಶದ ಜನರಿಗೆ ನೀವು ಮಾಡಿದ ಅತಿ ದೊಡ್ಡ ಅಪರಾಧವಾಗಿದೆ” ಎಂದಿದ್ದಾರೆ.

“ರಾಷ್ಟ್ರವು ಹೊರಗಿನಿಂದಲೂ ಅಪಾಯದಲ್ಲಿದೆ, ರಾಷ್ಟ್ರವು ಒಳಗಿನಿಂದಲೂ ಅಪಾಯದಲ್ಲಿದೆ. ಇದು ತುಂಬಾ ಅಪಾಯಕಾರಿ ಸ್ಥಿತಿ. ನನ್ನ ದೇಶ ಹೊರಗೆ ಸಂಪೂರ್ಣವಾಗಿ ಪ್ರತ್ಯೇಕವಾಗಿದೆ. ಒಳಗೆ ಹೋರಾಡುತ್ತಿದೆ. ರಾಜ್ಯಗಳು ಒಬ್ಬರಿಗೊಬ್ಬರು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಇವೆಲ್ಲ ನನಗೆ ಚಿಂತೆಗೆ ದೂಡುತ್ತವೆ” ಎಂದು ಗಂಭೀರವಾದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಹುಲ್ ಮಾತುಗಳು ನಿಜಕ್ಕೂ ಅವರ ವಿವೇಚನೆಯನ್ನು ಪಣಕ್ಕಿಟ್ಟು ಬಂದ ಅಂತರಾಳದ ಮಾತುಗಳು ಎನ್ನಿಸಿದೆ! ಸರ್ಕಾರದ ವೈಫಲ್ಯವನ್ನು ಪ್ರಬುದ್ದ ಮಾತುಗಳಿಂದ ತೆರೆದಿಟ್ಟ ಅವರನ್ನು, ಅವರ ನಡೆಗಳನ್ನು ಮುಂದೆ ಗಮನಿಸಿ!

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...