Homeಮುಖಪುಟಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

- Advertisement -
- Advertisement -

ವಿರೋಧ ಪಕ್ಷವಾದ ಇಂಡಿಯಾ ಮೈತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಲು ಮತ್ತು ಮಸೂದೆ ಅಂಗೀಕಾರದ ಸಮಯದಲ್ಲಿ ಮತಕ್ಕೆ ಹಾಕುವಂತೆ ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ. ಮಂಗಳವಾರ ಸಂಜೆ ನಡೆದ ಈ ಸಭೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಭಾಗವಹಿಸಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ಉಲ್ಲೇಖಿಸಿದೆ. ಲೋಕಸಭೆಯಲ್ಲಿ

ಈ ಬಗ್ಗೆ ಮಾತನಾಡಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಎಲ್ಲಾ ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸುತ್ತವೆ, ಜೊತೆಗೆ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ಸಿಪಿ ಮತ್ತು ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ (ಬಿಜೆಡಿ) ನಂತಹ ಪಕ್ಷಗಳೊಂದಿಗೆ ಸಮನ್ವಯ ಸಾಧಿಸಲಿದ್ದೇವೆ ಎಂದು ಹೇಳಿದ್ದಾರೆ. ಚರ್ಚೆಯ ಸಮಯದಲ್ಲಿ ವಿರೋಧಿಸಬೇಕಾದ ಮಸೂದೆಯ ಕೆಲವು ಷರತ್ತುಗಳ ಕುರಿತು ಪಕ್ಷಗಳ ಸದನದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.

“ಈ ಸಾಂವಿಧಾನಿಕ ವಿರೋಧಿ ಮಸೂದೆಯನ್ನು ವಿರೋಧಿಸುವಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿವೆ. ನಾವು ಇದನ್ನು ‘ಮುಸ್ಲಿಂ’ ವಿಷಯವೆಂದು ಪರಿಗಣಿಸುತ್ತಿಲ್ಲ. ಇದು ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಸಿಪಿಎಂ ತನ್ನ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಸಿಪಿಐ ಸಂಸದ ಸಂದೋಷ್ ಕುಮಾರ್ ಮಾತನಾಡಿ, ಸಭೆಯಲ್ಲಿ 36 ಸಂಸದರು ಭಾಗವಹಿಸಿದ್ದರು ಮತ್ತು ಎಲ್ಲರೂ ಒಂದೇ ಧ್ವನಿಯಲ್ಲಿ ಮಾತನಾಡಿದರು ಎಂದು ಹೇಳಿದ್ದಾರೆ.

“ಸಂಖ್ಯೆಗಳು ಆಡಳಿತ ಪಕ್ಷದ ಪರವಾಗಿವೆ ಎಂದು ನಮಗೆ ತಿಳಿದಿದೆ. ಆದರೆ ನಾವು ಹೋರಾಡಲು ನಿರ್ಧರಿಸಿದ್ದೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ, ಜೊತೆಗೆ ನಮ್ಮ ಆಕ್ಷೇಪಣೆಗಳನ್ನು ಇಡುತ್ತೇವೆ. ಯಾವುದೇ ವಾಕ್ಔಟ್ ಅಥವಾ ಅಡಚಣೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್, “ನಾವು ನಾಳೆ ಒಗ್ಗಟ್ಟಿನಿಂದ ನಿಂತು ಚರ್ಚೆಗಳಲ್ಲಿ ಭಾಗವಹಿಸುತ್ತೇವೆ. ವಿರೋಧ ಪಕ್ಷಗಳಿಂದ ಬರುವ ತಿದ್ದುಪಡಿಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಮತದಾನಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿದ್ದಾರೆ.

ಅದೇ ಅಭಿಪ್ರಾಯವನ್ನು ಪ್ರತಿಧ್ವನಿಸಿದ ಐಯುಎಂಎಲ್ ಸಂಸದ ಇಟಿ ಮುಹಮ್ಮದ್ ಬಶೀರ್ ಅವರು ಎಲ್ಲಾ ಪಕ್ಷಗಳು ಸಂಪೂರ್ಣ ಹೋರಾಟ ನಡೆಸುತ್ತವೆ ಎಂದು ಹೇಳಿದ್ದಾರೆ. “ಇಂಡಿಯಾ ಮೈತ್ರಿ ಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಿದ್ದು, ಅದು ಚೆನ್ನಾಗಿ ನಡೆಯಿತು. ನಾವು ಒಂದೇ ದೇಹ ಮತ್ತು ಒಂದೇ ಆತ್ಮವಾಗಿ ಹೋರಾಡಲು ಸ್ಪಷ್ಟವಾಗಿ ನಿರ್ಧರಿಸಿದ್ದೇವೆ. ನಾವು ಎಲ್ಲಾ ರೀತಿಯಿಂದಲೂ ಒಗ್ಗಟ್ಟಾಗಿದ್ದೇವೆ ಮತ್ತು ಬಹಳಷ್ಟು ಅನ್ಯಾಯ ನಡೆದಿರುವುದರಿಂದ ನಾವು ಇದರ ವಿರುದ್ಧ ತೀವ್ರವಾಗಿ ಹೋರಾಡುತ್ತೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ.” ಎಂದು ಹೇಳಿದ್ದಾರೆ.

ಬಿಜೆಪಿ ವಿಭಜಕ ರಾಜಕೀಯವನ್ನು ಆಡುತ್ತಿದೆ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದು, “ಆದ್ದರಿಂದ ಅವರು ಯಾರ ವಿರುದ್ಧ ಇದ್ದಾರೆಂದು ನಮಗೆ ತಿಳಿದಿದೆ. ನಾವು ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದೇವೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಈ ಮಸೂದೆಗಾಗಿ ಜೆಪಿಸಿ ರಚಿಸಲಾಯಿತು; ಆಗ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಇದ್ದವು ಮತ್ತು ಈಗಲೂ ಅದು ಒಗ್ಗಟ್ಟಿನಿಂದ ಇದೆ. ಮಸೂದೆಯ ನಿಬಂಧನೆಗಳು ದೇಶವನ್ನು ವಿಭಜಿಸುತ್ತವೆ. ಅವರು ಮಸೂದೆಯನ್ನು ಮಂಡಿಸಲಿ. ಅವರು ನಮ್ಮ ಸಲಹೆಗಳನ್ನು ಸೇರಿಸಿಕೊಂಡಿದ್ದಾರೆಯೇ ಅಥವಾ ಇಲ್ಲವೇ ಎಂದು ನಾವು ನೋಡುತ್ತೇವೆ. ನಾವು ನಾಳೆ ಚರ್ಚೆಗಳನ್ನು ನಡೆಸುತ್ತೇವೆ” ಎಂದು ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ.

ಲೋಕಸಭೆಯು ಬುಧವಾರ ವಿವಾದಾತ್ಮಕ ವಕ್ಫ್ ಮಸೂದೆಯನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಿದೆ. ರಾಜ್ಯಸಭೆಯು ಗುರುವಾರ ಅದನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಪ್ರಸ್ತಾವಿತ ಕಾನೂನಿನ ಚರ್ಚೆಗೆ ಎರಡೂ ಸದನಗಳಿಗೆ ತಲಾ ಎಂಟು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಲೋಕಸಭೆಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...