Homeಮುಖಪುಟಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ

- Advertisement -
- Advertisement -

ವಿರೋಧ ಪಕ್ಷವಾದ ಇಂಡಿಯಾ ಮೈತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಲು ಮತ್ತು ಮಸೂದೆ ಅಂಗೀಕಾರದ ಸಮಯದಲ್ಲಿ ಮತಕ್ಕೆ ಹಾಕುವಂತೆ ಕೋರಲು ಸರ್ವಾನುಮತದಿಂದ ನಿರ್ಧರಿಸಿದೆ. ಮಂಗಳವಾರ ಸಂಜೆ ನಡೆದ ಈ ಸಭೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಭಾಗವಹಿಸಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ವರದಿ ಉಲ್ಲೇಖಿಸಿದೆ. ಲೋಕಸಭೆಯಲ್ಲಿ

ಈ ಬಗ್ಗೆ ಮಾತನಾಡಿದ ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್, ಎಲ್ಲಾ ವಿರೋಧ ಪಕ್ಷಗಳು ಮಸೂದೆಯ ವಿರುದ್ಧ ಮತ ಚಲಾಯಿಸುತ್ತವೆ, ಜೊತೆಗೆ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ಸಿಪಿ ಮತ್ತು ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ (ಬಿಜೆಡಿ) ನಂತಹ ಪಕ್ಷಗಳೊಂದಿಗೆ ಸಮನ್ವಯ ಸಾಧಿಸಲಿದ್ದೇವೆ ಎಂದು ಹೇಳಿದ್ದಾರೆ. ಚರ್ಚೆಯ ಸಮಯದಲ್ಲಿ ವಿರೋಧಿಸಬೇಕಾದ ಮಸೂದೆಯ ಕೆಲವು ಷರತ್ತುಗಳ ಕುರಿತು ಪಕ್ಷಗಳ ಸದನದ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.

“ಈ ಸಾಂವಿಧಾನಿಕ ವಿರೋಧಿ ಮಸೂದೆಯನ್ನು ವಿರೋಧಿಸುವಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿವೆ. ನಾವು ಇದನ್ನು ‘ಮುಸ್ಲಿಂ’ ವಿಷಯವೆಂದು ಪರಿಗಣಿಸುತ್ತಿಲ್ಲ. ಇದು ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಸಿಪಿಎಂ ತನ್ನ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ. ಸಿಪಿಐ ಸಂಸದ ಸಂದೋಷ್ ಕುಮಾರ್ ಮಾತನಾಡಿ, ಸಭೆಯಲ್ಲಿ 36 ಸಂಸದರು ಭಾಗವಹಿಸಿದ್ದರು ಮತ್ತು ಎಲ್ಲರೂ ಒಂದೇ ಧ್ವನಿಯಲ್ಲಿ ಮಾತನಾಡಿದರು ಎಂದು ಹೇಳಿದ್ದಾರೆ.

“ಸಂಖ್ಯೆಗಳು ಆಡಳಿತ ಪಕ್ಷದ ಪರವಾಗಿವೆ ಎಂದು ನಮಗೆ ತಿಳಿದಿದೆ. ಆದರೆ ನಾವು ಹೋರಾಡಲು ನಿರ್ಧರಿಸಿದ್ದೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ, ಜೊತೆಗೆ ನಮ್ಮ ಆಕ್ಷೇಪಣೆಗಳನ್ನು ಇಡುತ್ತೇವೆ. ಯಾವುದೇ ವಾಕ್ಔಟ್ ಅಥವಾ ಅಡಚಣೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್, “ನಾವು ನಾಳೆ ಒಗ್ಗಟ್ಟಿನಿಂದ ನಿಂತು ಚರ್ಚೆಗಳಲ್ಲಿ ಭಾಗವಹಿಸುತ್ತೇವೆ. ವಿರೋಧ ಪಕ್ಷಗಳಿಂದ ಬರುವ ತಿದ್ದುಪಡಿಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಮತದಾನಕ್ಕೆ ಕರೆ ನೀಡುತ್ತೇವೆ.” ಎಂದು ಹೇಳಿದ್ದಾರೆ.

ಅದೇ ಅಭಿಪ್ರಾಯವನ್ನು ಪ್ರತಿಧ್ವನಿಸಿದ ಐಯುಎಂಎಲ್ ಸಂಸದ ಇಟಿ ಮುಹಮ್ಮದ್ ಬಶೀರ್ ಅವರು ಎಲ್ಲಾ ಪಕ್ಷಗಳು ಸಂಪೂರ್ಣ ಹೋರಾಟ ನಡೆಸುತ್ತವೆ ಎಂದು ಹೇಳಿದ್ದಾರೆ. “ಇಂಡಿಯಾ ಮೈತ್ರಿ ಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಿದ್ದು, ಅದು ಚೆನ್ನಾಗಿ ನಡೆಯಿತು. ನಾವು ಒಂದೇ ದೇಹ ಮತ್ತು ಒಂದೇ ಆತ್ಮವಾಗಿ ಹೋರಾಡಲು ಸ್ಪಷ್ಟವಾಗಿ ನಿರ್ಧರಿಸಿದ್ದೇವೆ. ನಾವು ಎಲ್ಲಾ ರೀತಿಯಿಂದಲೂ ಒಗ್ಗಟ್ಟಾಗಿದ್ದೇವೆ ಮತ್ತು ಬಹಳಷ್ಟು ಅನ್ಯಾಯ ನಡೆದಿರುವುದರಿಂದ ನಾವು ಇದರ ವಿರುದ್ಧ ತೀವ್ರವಾಗಿ ಹೋರಾಡುತ್ತೇವೆ ಮತ್ತು ಚರ್ಚೆಯಲ್ಲಿ ಭಾಗವಹಿಸುತ್ತೇವೆ.” ಎಂದು ಹೇಳಿದ್ದಾರೆ.

ಬಿಜೆಪಿ ವಿಭಜಕ ರಾಜಕೀಯವನ್ನು ಆಡುತ್ತಿದೆ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದು, “ಆದ್ದರಿಂದ ಅವರು ಯಾರ ವಿರುದ್ಧ ಇದ್ದಾರೆಂದು ನಮಗೆ ತಿಳಿದಿದೆ. ನಾವು ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದೇವೆ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಈ ಮಸೂದೆಗಾಗಿ ಜೆಪಿಸಿ ರಚಿಸಲಾಯಿತು; ಆಗ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಇದ್ದವು ಮತ್ತು ಈಗಲೂ ಅದು ಒಗ್ಗಟ್ಟಿನಿಂದ ಇದೆ. ಮಸೂದೆಯ ನಿಬಂಧನೆಗಳು ದೇಶವನ್ನು ವಿಭಜಿಸುತ್ತವೆ. ಅವರು ಮಸೂದೆಯನ್ನು ಮಂಡಿಸಲಿ. ಅವರು ನಮ್ಮ ಸಲಹೆಗಳನ್ನು ಸೇರಿಸಿಕೊಂಡಿದ್ದಾರೆಯೇ ಅಥವಾ ಇಲ್ಲವೇ ಎಂದು ನಾವು ನೋಡುತ್ತೇವೆ. ನಾವು ನಾಳೆ ಚರ್ಚೆಗಳನ್ನು ನಡೆಸುತ್ತೇವೆ” ಎಂದು ಶಿವಸೇನೆ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ.

ಲೋಕಸಭೆಯು ಬುಧವಾರ ವಿವಾದಾತ್ಮಕ ವಕ್ಫ್ ಮಸೂದೆಯನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಿದೆ. ರಾಜ್ಯಸಭೆಯು ಗುರುವಾರ ಅದನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಪ್ರಸ್ತಾವಿತ ಕಾನೂನಿನ ಚರ್ಚೆಗೆ ಎರಡೂ ಸದನಗಳಿಗೆ ತಲಾ ಎಂಟು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಲೋಕಸಭೆಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

‘ಪಿಆರ್ ನಾಟಕ ಮಿತಿಯಲ್ಲಿರಲಿ’ | ಕೋಳಿಗಳನ್ನು ರಕ್ಷಿಸಿದ ಅನಂತ್ ಅಂಬಾನಿಗೆ ನೆಟ್ಟಿಗರಿಂದ ಪಾಠ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...